ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ.. ಮಹತ್ವದ ನಿರ್ಧಾರ ತೆಗೆದುಕೊಂಡ ಬಿಸಿಸಿಐ

author-image
Ganesh
Updated On
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ.. ಮಹತ್ವದ ನಿರ್ಧಾರ ತೆಗೆದುಕೊಂಡ ಬಿಸಿಸಿಐ
Advertisment
  • ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ
  • ದುರಂತದಲ್ಲಿ 11 RCB ಅಭಿಮಾನಿಗಳ ಜೀವ ಹೋಗಿದೆ
  • ಬಿಸಿಸಿಐ ತೆಗೆದುಕೊಂಡ ಮಹತ್ವದ ನಿರ್ಧಾರ ಏನು?

ಬೆಂಗಳೂರು: ಆರ್​ಸಿಬಿ ಸೆಲೆಬ್ರೇಷನ್ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ ಬೆನ್ನಲ್ಲೇ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಿಗದಿಯಾಗಿದ್ದ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿದೆ.

ದುರಂತದ ಬಳಿಕ ಬಿಸಿಸಿಐನಿಂದ ಪಂದ್ಯ ಸ್ಥಳಾಂತರಗೊಂಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಎ ಮತ್ತು ಸೌಥ್ ಆಫ್ರಿಕಾ ಎ ನಡುವೆ ಪಂದ್ಯಗಳು ನಡೆಯಬೇಕಿತ್ತು. ನವೆಂಬರ್ 13 ರಿಂದ 19ರವರೆಗೆ ಮೂರು ಏಕದಿನ ಪಂದ್ಯಗಳು ನಡೆಯಬೇಕಿದ್ದವು. ಇದೀಗ ಈ ಪಂದ್ಯಗಳು ಸ್ಥಳಾಂತರಗೊಂಡಿವೆ.

ಎಲ್ಲಿ ನಡೆಯುತ್ತದೆ..?

ಬೆಂಗಳೂರು ಬದಲಾಗಿ ರಾಜ್​ಕೋಟ್​ನಲ್ಲಿ ಪಂದ್ಯ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಗುಜರಾತ್​ನ ರಾಜ್​ಕೋಟ್​ನಲ್ಲಿರುವ ನಿರಂಜನ್ ಶಾ ಅಂತಾರಾಷ್ಟ್ರಿಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಪಂದ್ಯ ಸ್ಥಳಾಂತರಕ್ಕೆ ಬಿಸಿಸಿಐ ಸರಿಯಾದ ಕಾರಣ ನೀಡಿಲ್ಲ. ಪಂದ್ಯ ಸ್ಥಳಾಂತರಗೊಂಡಿದೆ ಎಂದಷ್ಟೇ ತಿಳಿಸಿದೆ.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಟ್ರೋಫಿ ಗೆದ್ದಿತ್ತು. ಟ್ರೋಫಿ ಗೆದ್ದ ಖುಷಿಯಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಕ್ಟರಿ ಸೆಲೆಬ್ರೇಷನ್ ಇಟ್ಟುಕೊಂಡಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಆರ್​​ಸಿಬಿ ಅಭಿಮಾನಿಗಳು ಚಿನ್ನಸ್ವಾಮಿಸ್ಟೇಡಿಯಂಗೆ ಜಮಾಯಿಸಿದ್ದರು. ಈ ವೇಳೆ ನೂಕು-ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಆರ್​ಸಿಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment