/newsfirstlive-kannada/media/post_attachments/wp-content/uploads/2024/03/arvind-kejriwal.jpg)
ನವದೆಹಲಿ: ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಸಿಎಂ ಅರವಿಂದ್ ಕೇಜ್ರಿವಾಲ್​ರನ್ನ ಇಡಿ ವಶಕ್ಕೆ ಪಡೆದುಕೊಂಡಿದೆ. ಈ ಸಂಬಂಧ ಮಾರ್ಚ್​ 31ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಱಲಿ ಮಾಡಲಾಗುವುದು ಎಂದು ಎಎಪಿ ಹಾಗೂ ಕಾಂಗ್ರೆಸ್ ಘೋಷಣೆ ಮಾಡಿವೆ.
I.N.D.I.A ಒಕ್ಕೂಟದ ಎಎಪಿ ಹಾಗೂ ಕಾಂಗ್ರೆಸ್​ ಇಂದು ದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದವು. ಈ ವೇಳೆ ಮಾತನಾಡಿದ ಎಎಪಿಯ ನಾಯಕ ಗೋಪಾಲ್​ ರೈ, ಸದ್ಯ ಪ್ರಜಾಪ್ರಭುತ್ವ ಮತ್ತು ದೇಶ ಎರಡು ಅಪಾಯದಲ್ಲಿವೆ. ಹೀಗಾಗಿ ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳು ಈ ಮಹಾ ಱಲಿಯನ್ನ ಹಮ್ಮಿಕೊಂಡಿವೆ. ದೇಶದಲ್ಲಿ ಸರ್ವಾಧಿಕಾರ ಸರ್ಕಾರವಿದ್ದು ಪ್ರಜಾಪ್ರಭುತ್ವವನ್ನು ಬದಿಗೊತ್ತಿ ಸಿಎಂ ಕೇಜ್ರಿವಾಲ್​ರನ್ನ ಬಂಧಿಸಲಾಗಿದೆ. ಸುಳ್ಳು ಕೇಸ್​ಗಳನ್ನ ದಾಖಲಿಸಿ ವಿರೋಧ ಪಕ್ಷದವರನ್ನ ಬಂಧಿಸಲಾಗುತ್ತಿದೆ. ಪ್ರಧಾನಿ ಮೋದಿ ಸರ್ಕಾರಿ ಇಲಾಖೆಗಳನ್ನ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
/newsfirstlive-kannada/media/post_attachments/wp-content/uploads/2024/03/KEJRIWAL-1.jpg)
ದೆಹಲಿಯ ಕಾಂಗ್ರೆಸ್​ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಮಾತನಾಡಿ, ಈ ಪ್ರತಿಭಟನೆ ರಾಜಕೀಯಕ್ಕಾಗಿ ಅಥವಾ ಯಾವುದೇ ಪಕ್ಷಕ್ಕಾಗಿ ಮಾಡುತ್ತಿಲ್ಲ. ದೇಶ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕಾಗಿ ಮಾಡಲಾಗುತ್ತಿದೆ. ಈ ಮಹಾರ್ಯಾಲಿ ಕೇಂದ್ರ ಸರ್ಕಾರದ ವಿರುದ್ಧ ಎಂದು ಹೇಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us