ಪಾಕಿಸ್ತಾನದ ವಿರುದ್ಧ ಭಾರತಕ್ಕೆ ರೋಚಕ ಗೆಲುವು
ಕೇವಲ 119 ರನ್ಗಳ ಡೆಪೆಂಡ್ ಮಾಡಿಕೊಂಡ ಭಾರತ
ಬೂಮ್ರಾರ ಬೆಂಕಿ ಬೌಲಿಂಗ್ನಿಂದ ಭಾರತಕ್ಕೆ ಜಯ
ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರತ 6 ರನ್ಗಳಿಂದ ಸೋಲಿಸಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತಕ್ಕೆ ಪಾಕ್ ವಿರುದ್ಧ ಸಿಕ್ಕ ಏಳನೇ ಗೆಲುವಾಗಿದೆ. ಮೊದಲು ಬ್ಯಾಟ್ ಮಾಡಿದ್ದ ಭಾರತ 119 ರನ್ಗಳಿಗೆ ಆಲೌಟ್ ಆದ ಪರಿಣಾಮ ಬೌಲರ್ಸ್ ಹೆಗಲ ಮೇಲೆ ಭಾರ ಬಿದ್ದಿತ್ತು.
ಒಂದು ಹಂತದಲ್ಲಿ ಪಾಕಿಸ್ತಾನ 73 ರನ್ಗಳಿಸಿ ಕೇವಲ 2 ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿತ್ತು. ನಂತರ ನಡೆದ ಮ್ಯಾಜಿಕ್ನಲ್ಲಿ ಕೇವಲ 29 ರನ್ಗಳ ಅಂತರದಲ್ಲಿ ಐದು ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಗಬೇಕಾಯಿತು. ವಿಶೇಷ ಅಂದರೆ ಜಸ್ಪ್ರೀತ್ ಬುಮ್ರಾ ಅವರು 4 ಓವರ್ಗಳಲ್ಲಿ ಕೇವಲ 14 ರನ್ಗಳಿಗೆ 3 ವಿಕೆಟ್ಗಳನ್ನು ಕಬಳಿಸಿ ಭಾರತದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು.
ಪಂದ್ಯಕ್ಕೆ ತಿರುವು ಸಿಕ್ಕಿದ್ದು ಇಲ್ಲಿ..!
ಪಾಕಿಸ್ತಾನ ತಂಡ ಒಂದು ತುದಿಯಿಂದ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಮೊಹಮ್ಮದ್ ರಿಜ್ವಾನ್ ದೃಢವಾಗಿ ನಿಂತಿದ್ದರು. 43 ಎಸೆತಗಳಲ್ಲಿ 31 ರನ್ ಗಳಿಸಿದ್ದ ಅವರು ಡೆತ್ ಓವರ್ಗಳಲ್ಲಿ ತಂಡವನ್ನು ಗೆಲ್ಲಿಸುವ ಮುನ್ಸೂಚನೆಯನ್ನು ನೀಡಿದ್ದರು. ಆದರೆ ಇನಿಂಗ್ಸ್ನ 15ನೇ ಓವರ್ನಲ್ಲಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ಗೆ ಬಂದರು. ಬುಮ್ರಾ ಎಸೆದ ಮೊದಲ ಬಾಲ್ ಉತ್ತಮ ಲೆಂತ್ನಲ್ಲಿ ಬಿದ್ದಿತು. ಪರಿಣಾಮ ರಿಜ್ವಾನ್ ಔಟ್ ಆಗಿ ನಿರಾಸೆಯಿಂದ ಕ್ರೀಸ್ ಬಿಡಬೇಕಾಯಿತು. 4 ವಿಕೆಟ್ ಕಳೆದುಕೊಂಡು 80 ರನ್ಗಳಿಸಿದ್ದ ಪಾಕ್ನ ನಂತರ ಹೋರಾಟ ಕುಂಟುತ್ತ ಹೋಯಿತು. ಭಾರತ ತಂಡಕ್ಕೆ ಹೊಸ ಹುಮ್ಮಸ್ಸು ಸಿಕ್ಕಿತು.
ಇದನ್ನೂ ಓದಿ:ಪಾಕ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು.. ಈ ಮೂವರು ಗೆಲುವಿನ ಹೀರೋಗಳು..!
ಟಾಸ್ ಸೋತ ಭಾರತ ಮೊದಲು ಬ್ಯಾಟ್ ಮಾಡಿತ್ತು. ರಿಷಬ್ ಪಂತ್ ಅವರ 42 ರನ್ಗಳ ಕಾಣಿಕೆಯ ಪರಿಣಾಮ ಭಾರತ 19 ಓವರ್ನಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 119ರನ್ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಪಾಕಿಸ್ತಾನಕ್ಕೆ ಜಸ್ಪ್ರಿತ್ ಬೂಮ್ರಾ ಅವರು ದೊಡ್ಡ ಪೆಟ್ಟು ಕೊಟ್ಟರು. ಬಾಬರ್ ಅಜಂ ಹಾಗೂ ರಿಜ್ವನ್ 26 ರನ್ಗಳಿಸಿ ಆಡುತ್ತಿದ್ದಾಗ ಅಜಂ ಅವರ ಪೆವಿಲಿಯನ್ಗೆ ಕಳುಹಿಸುವ ಮೂಲಕ ಜೊತೆಯಾಟಕ್ಕೆ ಬ್ರೇಕ್ ಹಾಕಿದರು. ಕ್ಯಾಪ್ಟನ್ ವಿಕೆಟ್ ಬೀಳುತ್ತಿದ್ದಂತೆಯೇ ಟೀಂ ಇಂಡಿಂಯಾ ಬೌಲಿಂಗ್ ಪಡೆಗೆ ಮತ್ತಷ್ಟು ಶಕ್ತಿ ಬಂತು. ಬೆಂಕಿ ಬೌಲಿಂಗ್ ಮಾಡಿದ ಟೀಂ ಇಂಡಿಯಾ ಬೌಲರ್ಸ್, ಪಾಕಿಸ್ತಾನವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು. ನಾಲ್ಕು ಓವರ್ಗಳನ್ನು ಎಸೆದು 2 ವಿಕೆಟ್ ಪಡೆದು ಕೇವಲ 24 ರನ್ಗಳನ್ನು ಮಾತ್ರ ನೀಡಿದರು. ಅಷ್ಟೇ ಅಲ್ಲ ಅಕ್ಸರ್ ಪಟೇಲ್ 2 ಓವರ್ ಎಸೆದು 11 ರನ್ ನೀಡಿ ಒಂದು ವಿಕೆಟ್ ಪಡೆದರು. ಪಾಕ್ನ ಬ್ಯಾಟಿಂಗ್ ಶಕ್ತಿ ಉಸ್ಮಾನ್ ಖಾನ್ರ ವಿಕೆಟ್ ಪಡೆದು ಪಾಕ್ನ ಮಗ್ಗಲು ಮುರಿದರು. ನಿನ್ನೆಯ ಪಂದ್ಯದಲ್ಲಿ ಸಿರಾಜ್ ಕೂಡ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು, 4 ಓವರ್ಗಳಲ್ಲಿ 19 ರನ್ ನೀಡಿದರು. ಆದರೆ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಲಿಲ್ಲ. ರವೀಂದ್ರ ಜಡೇಜಾ 2 ಓವರ್ ಮಾಡಿ 10 ರನ್ ನೀಡಿದ್ರೆ, ಅರ್ಷ್ದೀಪ್ ಸಿಂಗ್ ಸ್ವಲ್ಪ ದುಬಾರಿಯಾದರೂ ಒಂದು ವಿಕೆಟ್ ಪಡೆದುಕೊಂಡರು. 31 ರನ್ ನೀಡಿ ಒಂದು ವಿಕೆಟ್ ಪಡೆದುಕೊಂಡರು. ಬೂಮ್ರಾ, ಸಿರಾಜ್ ಹಾಗೂ ಪಾಂಡ್ಯ ಅವರ ಭಯಂಕರ ಬೌಲಿಂಗ್ನಿಂದಾಗಿ ಪಾಕಿಸ್ತಾನದ ವಿರುದ್ಧ ಭಾರತ ಮತ್ತೆ ಗೆದ್ದು ಬೀಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪಾಕಿಸ್ತಾನದ ವಿರುದ್ಧ ಭಾರತಕ್ಕೆ ರೋಚಕ ಗೆಲುವು
ಕೇವಲ 119 ರನ್ಗಳ ಡೆಪೆಂಡ್ ಮಾಡಿಕೊಂಡ ಭಾರತ
ಬೂಮ್ರಾರ ಬೆಂಕಿ ಬೌಲಿಂಗ್ನಿಂದ ಭಾರತಕ್ಕೆ ಜಯ
ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರತ 6 ರನ್ಗಳಿಂದ ಸೋಲಿಸಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತಕ್ಕೆ ಪಾಕ್ ವಿರುದ್ಧ ಸಿಕ್ಕ ಏಳನೇ ಗೆಲುವಾಗಿದೆ. ಮೊದಲು ಬ್ಯಾಟ್ ಮಾಡಿದ್ದ ಭಾರತ 119 ರನ್ಗಳಿಗೆ ಆಲೌಟ್ ಆದ ಪರಿಣಾಮ ಬೌಲರ್ಸ್ ಹೆಗಲ ಮೇಲೆ ಭಾರ ಬಿದ್ದಿತ್ತು.
ಒಂದು ಹಂತದಲ್ಲಿ ಪಾಕಿಸ್ತಾನ 73 ರನ್ಗಳಿಸಿ ಕೇವಲ 2 ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿತ್ತು. ನಂತರ ನಡೆದ ಮ್ಯಾಜಿಕ್ನಲ್ಲಿ ಕೇವಲ 29 ರನ್ಗಳ ಅಂತರದಲ್ಲಿ ಐದು ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಗಬೇಕಾಯಿತು. ವಿಶೇಷ ಅಂದರೆ ಜಸ್ಪ್ರೀತ್ ಬುಮ್ರಾ ಅವರು 4 ಓವರ್ಗಳಲ್ಲಿ ಕೇವಲ 14 ರನ್ಗಳಿಗೆ 3 ವಿಕೆಟ್ಗಳನ್ನು ಕಬಳಿಸಿ ಭಾರತದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು.
ಪಂದ್ಯಕ್ಕೆ ತಿರುವು ಸಿಕ್ಕಿದ್ದು ಇಲ್ಲಿ..!
ಪಾಕಿಸ್ತಾನ ತಂಡ ಒಂದು ತುದಿಯಿಂದ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಮೊಹಮ್ಮದ್ ರಿಜ್ವಾನ್ ದೃಢವಾಗಿ ನಿಂತಿದ್ದರು. 43 ಎಸೆತಗಳಲ್ಲಿ 31 ರನ್ ಗಳಿಸಿದ್ದ ಅವರು ಡೆತ್ ಓವರ್ಗಳಲ್ಲಿ ತಂಡವನ್ನು ಗೆಲ್ಲಿಸುವ ಮುನ್ಸೂಚನೆಯನ್ನು ನೀಡಿದ್ದರು. ಆದರೆ ಇನಿಂಗ್ಸ್ನ 15ನೇ ಓವರ್ನಲ್ಲಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ಗೆ ಬಂದರು. ಬುಮ್ರಾ ಎಸೆದ ಮೊದಲ ಬಾಲ್ ಉತ್ತಮ ಲೆಂತ್ನಲ್ಲಿ ಬಿದ್ದಿತು. ಪರಿಣಾಮ ರಿಜ್ವಾನ್ ಔಟ್ ಆಗಿ ನಿರಾಸೆಯಿಂದ ಕ್ರೀಸ್ ಬಿಡಬೇಕಾಯಿತು. 4 ವಿಕೆಟ್ ಕಳೆದುಕೊಂಡು 80 ರನ್ಗಳಿಸಿದ್ದ ಪಾಕ್ನ ನಂತರ ಹೋರಾಟ ಕುಂಟುತ್ತ ಹೋಯಿತು. ಭಾರತ ತಂಡಕ್ಕೆ ಹೊಸ ಹುಮ್ಮಸ್ಸು ಸಿಕ್ಕಿತು.
ಇದನ್ನೂ ಓದಿ:ಪಾಕ್ ವಿರುದ್ಧ ಭಾರತಕ್ಕೆ ರೋಚಕ ಗೆಲುವು.. ಈ ಮೂವರು ಗೆಲುವಿನ ಹೀರೋಗಳು..!
ಟಾಸ್ ಸೋತ ಭಾರತ ಮೊದಲು ಬ್ಯಾಟ್ ಮಾಡಿತ್ತು. ರಿಷಬ್ ಪಂತ್ ಅವರ 42 ರನ್ಗಳ ಕಾಣಿಕೆಯ ಪರಿಣಾಮ ಭಾರತ 19 ಓವರ್ನಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 119ರನ್ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಪಾಕಿಸ್ತಾನಕ್ಕೆ ಜಸ್ಪ್ರಿತ್ ಬೂಮ್ರಾ ಅವರು ದೊಡ್ಡ ಪೆಟ್ಟು ಕೊಟ್ಟರು. ಬಾಬರ್ ಅಜಂ ಹಾಗೂ ರಿಜ್ವನ್ 26 ರನ್ಗಳಿಸಿ ಆಡುತ್ತಿದ್ದಾಗ ಅಜಂ ಅವರ ಪೆವಿಲಿಯನ್ಗೆ ಕಳುಹಿಸುವ ಮೂಲಕ ಜೊತೆಯಾಟಕ್ಕೆ ಬ್ರೇಕ್ ಹಾಕಿದರು. ಕ್ಯಾಪ್ಟನ್ ವಿಕೆಟ್ ಬೀಳುತ್ತಿದ್ದಂತೆಯೇ ಟೀಂ ಇಂಡಿಂಯಾ ಬೌಲಿಂಗ್ ಪಡೆಗೆ ಮತ್ತಷ್ಟು ಶಕ್ತಿ ಬಂತು. ಬೆಂಕಿ ಬೌಲಿಂಗ್ ಮಾಡಿದ ಟೀಂ ಇಂಡಿಯಾ ಬೌಲರ್ಸ್, ಪಾಕಿಸ್ತಾನವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು. ನಾಲ್ಕು ಓವರ್ಗಳನ್ನು ಎಸೆದು 2 ವಿಕೆಟ್ ಪಡೆದು ಕೇವಲ 24 ರನ್ಗಳನ್ನು ಮಾತ್ರ ನೀಡಿದರು. ಅಷ್ಟೇ ಅಲ್ಲ ಅಕ್ಸರ್ ಪಟೇಲ್ 2 ಓವರ್ ಎಸೆದು 11 ರನ್ ನೀಡಿ ಒಂದು ವಿಕೆಟ್ ಪಡೆದರು. ಪಾಕ್ನ ಬ್ಯಾಟಿಂಗ್ ಶಕ್ತಿ ಉಸ್ಮಾನ್ ಖಾನ್ರ ವಿಕೆಟ್ ಪಡೆದು ಪಾಕ್ನ ಮಗ್ಗಲು ಮುರಿದರು. ನಿನ್ನೆಯ ಪಂದ್ಯದಲ್ಲಿ ಸಿರಾಜ್ ಕೂಡ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು, 4 ಓವರ್ಗಳಲ್ಲಿ 19 ರನ್ ನೀಡಿದರು. ಆದರೆ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಲಿಲ್ಲ. ರವೀಂದ್ರ ಜಡೇಜಾ 2 ಓವರ್ ಮಾಡಿ 10 ರನ್ ನೀಡಿದ್ರೆ, ಅರ್ಷ್ದೀಪ್ ಸಿಂಗ್ ಸ್ವಲ್ಪ ದುಬಾರಿಯಾದರೂ ಒಂದು ವಿಕೆಟ್ ಪಡೆದುಕೊಂಡರು. 31 ರನ್ ನೀಡಿ ಒಂದು ವಿಕೆಟ್ ಪಡೆದುಕೊಂಡರು. ಬೂಮ್ರಾ, ಸಿರಾಜ್ ಹಾಗೂ ಪಾಂಡ್ಯ ಅವರ ಭಯಂಕರ ಬೌಲಿಂಗ್ನಿಂದಾಗಿ ಪಾಕಿಸ್ತಾನದ ವಿರುದ್ಧ ಭಾರತ ಮತ್ತೆ ಗೆದ್ದು ಬೀಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ