ಮಣಿಪುರದಲ್ಲಿ ಹಿಂಸಾಚಾರ, ಕೇಂದ್ರದ ಮೌನದ ಬಗ್ಗೆ ಪ್ರಶ್ನೆ
ಯುವತಿಯ ಬೆತ್ತಲೆಗೊಳಿಸಿ ಮೆರವಣಿಗೆ ವಿಡಿಯೋ ವೈರಲ್
ವಿಡಿಯೋ ವೈರಲ್ ಬೆನ್ನಲ್ಲೇ ಮೋದಿ ವಿರುದ್ಧ ಹರಿಹಾಯ್ದ ‘ಕೈ’ನಾಯಕರು
ಮಣಿಪುರದ ಹಿಂಸಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯಾವುದೇ ಪ್ರತಿಕ್ರಿಯೆ ನೀಡದಿರೋದಕ್ಕೆ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. 19 ವರ್ಷದ ಯುವತಿಯೊಬ್ಬಳನ್ನು ಸಾಮೂಹಿಕವಾಗಿ ಅತ್ಯಾಚಾರಗೈದು, ನಡು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಭುತ್ವವನ್ನು mobocracy ಆಗಿ ಬದಲಾವಣೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಟ್ವೀಟ್ ಮಾಡಿ, ಮಣಿಪುರದಲ್ಲಿ ಮನುಷ್ಯತ್ವ ಸತ್ತು ಹೋಗಿದೆ. ಮೋದಿ ಸರ್ಕಾರ, ಬಿಜೆಪಿ ರಾಜ್ಯದ ಕೆಲವು ಸೂಕ್ಷ್ಮವಾದ ಸಾಮಾಜಿಕ ರಚನೆಯನ್ನು ನಾಶ ಮಾಡುವ ಮೂಲಕ ಪ್ರಜಾಭುತ್ವವನ್ನು mobocracy ಯಾಗಿ ಬದಲಾವಣೆ ಮಾಡಿದೆ. ನಿಮ್ಮ ಮೌನವನ್ನು ಭಾರತ ಯಾವತ್ತೂ ಕ್ಷಮಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಮುಂದುವರಿದು ಟ್ವೀಟ್ ಮಾಡಿರುವ ಖರ್ಗೆ, ನಿಮ್ಮ ಸರ್ಕಾರಕ್ಕೆ ಆತ್ಮಸಾಕ್ಷಿ, ಮರ್ಯಾದೆ ಇದ್ದರೆ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡಿ. ದಯವಿಟ್ಟು ಭಾರತಕ್ಕೆ ನೀವು ಉತ್ತರ ನೀಡಿ, ಅಲ್ಲಿ ಏನಾಗಿದೆ ಅನ್ನೋದನ್ನು ದೇಶದ ಜನರ ಮುಂದೆ ಇಡಿ. ಸಂಕಷ್ಟದ ಪರಿಸ್ಥಿತಿಯಲ್ಲಿ ಮಣಿಪುರ ಜನರ ಜೊತೆ ನಾವು ಇದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
Humanity has died in Manipur.
Modi Govt and the BJP has changed Democracy and the rule of law into Mobocracy by destroying the delicate social fabric of the state. @narendramodi ji,
India will never forgive your silence.
If there is any conscience or an iota of shame left…
— Mallikarjun Kharge (@kharge) July 20, 2023
ರಾಹುಲ್ ಗಾಂಧಿ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಯ ಮೌನ ಮಣಿಪುರದ ಅರಾಜಕತೆಗೆ ಕಾರಣವಾಯಿತು. ಅವರ ಈ ರೀತಿಯ ನಡವಳಿಕೆ ಸರಿಯಲ್ಲ. ಭಾರತದ ಕಲ್ಪನೆ ದಕ್ಕೆಯಾಗುವ ಯಾವುದನ್ನೂ INDIA ಸಹಿಸಲ್ಲ. ನಾವು ಮಣಿಪರ ನಾಗರಿಕರ ಜೊತೆಗೆ ಇದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
PM’s silence and inaction has led Manipur into anarchy.
INDIA will not stay silent while the idea of India is being attacked in Manipur.
We stand with the people of Manipur. Peace is the only way forward.
— Rahul Gandhi (@RahulGandhi) July 19, 2023
78 days since full scale ethnic violence broke out in Manipur.
77 days since the ghastly incident where two women were stripped, paraded and allegedly raped.
63 days since an FIR was filed against unknown persons and the culprits are STILL at large.
The rest of India had…
— Jairam Ramesh (@Jairam_Ramesh) July 20, 2023
ಮಣಿಪುರಲ್ಲಿ ಮೇ 4 ರಂದು ನಡೆದಿದೆ ಎನ್ನಲಾಗಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಗ್ರಾಮವೊಂದಕ್ಕೆ ನುಗ್ಗಿದ ಅಪರಿಚಿತರು, ಮನೆಯಲ್ಲಿದ್ದ ಐವರನ್ನು ಅಪಹರಿಸಿಕೊಂಡು ಕಾಡಿಗೆ ಕರೆದೊಯ್ದಿದ್ದಾರೆ. ಅಲ್ಲಿ ಮೂವರು ಮಹಿಳೆಯರನ್ನು ನಗ್ನಗೊಳಿಸಿದ್ದಾರೆ. ನಂತರ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ. ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗಿದೆ. ವೈರಲ್ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಿಡಿಮಿಡಿಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಣಿಪುರದಲ್ಲಿ ಹಿಂಸಾಚಾರ, ಕೇಂದ್ರದ ಮೌನದ ಬಗ್ಗೆ ಪ್ರಶ್ನೆ
ಯುವತಿಯ ಬೆತ್ತಲೆಗೊಳಿಸಿ ಮೆರವಣಿಗೆ ವಿಡಿಯೋ ವೈರಲ್
ವಿಡಿಯೋ ವೈರಲ್ ಬೆನ್ನಲ್ಲೇ ಮೋದಿ ವಿರುದ್ಧ ಹರಿಹಾಯ್ದ ‘ಕೈ’ನಾಯಕರು
ಮಣಿಪುರದ ಹಿಂಸಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯಾವುದೇ ಪ್ರತಿಕ್ರಿಯೆ ನೀಡದಿರೋದಕ್ಕೆ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. 19 ವರ್ಷದ ಯುವತಿಯೊಬ್ಬಳನ್ನು ಸಾಮೂಹಿಕವಾಗಿ ಅತ್ಯಾಚಾರಗೈದು, ನಡು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಭುತ್ವವನ್ನು mobocracy ಆಗಿ ಬದಲಾವಣೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಟ್ವೀಟ್ ಮಾಡಿ, ಮಣಿಪುರದಲ್ಲಿ ಮನುಷ್ಯತ್ವ ಸತ್ತು ಹೋಗಿದೆ. ಮೋದಿ ಸರ್ಕಾರ, ಬಿಜೆಪಿ ರಾಜ್ಯದ ಕೆಲವು ಸೂಕ್ಷ್ಮವಾದ ಸಾಮಾಜಿಕ ರಚನೆಯನ್ನು ನಾಶ ಮಾಡುವ ಮೂಲಕ ಪ್ರಜಾಭುತ್ವವನ್ನು mobocracy ಯಾಗಿ ಬದಲಾವಣೆ ಮಾಡಿದೆ. ನಿಮ್ಮ ಮೌನವನ್ನು ಭಾರತ ಯಾವತ್ತೂ ಕ್ಷಮಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಮುಂದುವರಿದು ಟ್ವೀಟ್ ಮಾಡಿರುವ ಖರ್ಗೆ, ನಿಮ್ಮ ಸರ್ಕಾರಕ್ಕೆ ಆತ್ಮಸಾಕ್ಷಿ, ಮರ್ಯಾದೆ ಇದ್ದರೆ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡಿ. ದಯವಿಟ್ಟು ಭಾರತಕ್ಕೆ ನೀವು ಉತ್ತರ ನೀಡಿ, ಅಲ್ಲಿ ಏನಾಗಿದೆ ಅನ್ನೋದನ್ನು ದೇಶದ ಜನರ ಮುಂದೆ ಇಡಿ. ಸಂಕಷ್ಟದ ಪರಿಸ್ಥಿತಿಯಲ್ಲಿ ಮಣಿಪುರ ಜನರ ಜೊತೆ ನಾವು ಇದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
Humanity has died in Manipur.
Modi Govt and the BJP has changed Democracy and the rule of law into Mobocracy by destroying the delicate social fabric of the state. @narendramodi ji,
India will never forgive your silence.
If there is any conscience or an iota of shame left…
— Mallikarjun Kharge (@kharge) July 20, 2023
ರಾಹುಲ್ ಗಾಂಧಿ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಯ ಮೌನ ಮಣಿಪುರದ ಅರಾಜಕತೆಗೆ ಕಾರಣವಾಯಿತು. ಅವರ ಈ ರೀತಿಯ ನಡವಳಿಕೆ ಸರಿಯಲ್ಲ. ಭಾರತದ ಕಲ್ಪನೆ ದಕ್ಕೆಯಾಗುವ ಯಾವುದನ್ನೂ INDIA ಸಹಿಸಲ್ಲ. ನಾವು ಮಣಿಪರ ನಾಗರಿಕರ ಜೊತೆಗೆ ಇದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
PM’s silence and inaction has led Manipur into anarchy.
INDIA will not stay silent while the idea of India is being attacked in Manipur.
We stand with the people of Manipur. Peace is the only way forward.
— Rahul Gandhi (@RahulGandhi) July 19, 2023
78 days since full scale ethnic violence broke out in Manipur.
77 days since the ghastly incident where two women were stripped, paraded and allegedly raped.
63 days since an FIR was filed against unknown persons and the culprits are STILL at large.
The rest of India had…
— Jairam Ramesh (@Jairam_Ramesh) July 20, 2023
ಮಣಿಪುರಲ್ಲಿ ಮೇ 4 ರಂದು ನಡೆದಿದೆ ಎನ್ನಲಾಗಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಗ್ರಾಮವೊಂದಕ್ಕೆ ನುಗ್ಗಿದ ಅಪರಿಚಿತರು, ಮನೆಯಲ್ಲಿದ್ದ ಐವರನ್ನು ಅಪಹರಿಸಿಕೊಂಡು ಕಾಡಿಗೆ ಕರೆದೊಯ್ದಿದ್ದಾರೆ. ಅಲ್ಲಿ ಮೂವರು ಮಹಿಳೆಯರನ್ನು ನಗ್ನಗೊಳಿಸಿದ್ದಾರೆ. ನಂತರ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ. ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗಿದೆ. ವೈರಲ್ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಿಡಿಮಿಡಿಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ