/newsfirstlive-kannada/media/post_attachments/wp-content/uploads/2025/06/karachi-Malir-jail1.jpg)
ಇಸ್ಲಾಮಾಬಾದ್: ಇಂದು ಮುಂಜಾನೆ ಮಾಲಿರ್ ಜೈಲಿನಲ್ಲಿದ್ದ ಖೈದಿಗಳು ಗೋಡೆಯನ್ನು ಒಡೆದು ಪರಾರಿಯಾಗಲು ಯತ್ನಿಸಿದ ಘಟನೆ ಕರಾಚಿಯ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಜೈಲು ಮುರಿದು ಒಟ್ಟು 216 ಖೈದಿಗಳು ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಸಿನಿಮಾಗೆ ಹಾಡಲು ಆಫರ್ ಕೊಟ್ಟವರು ಲಹರಿನಾ ಫಿನಾಲೆಗೆ ಸೆಲೆಕ್ಟ್ ಮಾಡಿಲ್ಲ ಏಕೆ? ವೀಕ್ಷಕರು ಬೇಸರ!
ಪೊಲೀಸರು ಮತ್ತು ಜೈಲು ಅಧಿಕಾರಿಗಳ ಪ್ರಕಾರ, ನಗರದಲ್ಲಿ ಸರಣಿ ಕಂಪನಗಳಿಂದ ಉಂಟಾದ ಅವ್ಯವಸ್ಥೆಯ ಮಧ್ಯೆ ಈ ತಪ್ಪಿಸಿಕೊಳ್ಳುವಿಕೆ ಸಂಭವಿಸಿದೆ ಎಂದಿದ್ದಾರೆ. ಹೀಗೆ ಜೈಲಿನಿಂದ ತಪ್ಪಿಸಿಕೊಂಡ ಖೈದಿಗಳಲ್ಲಿ 20ಕ್ಕೂ ಹೆಚ್ಚು ಮಂದಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಆದರೆ ಉಳಿದವರನ್ನು ತಕ್ಷಣವೇ ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ.
ನಾಗರಿಕರು ಖೈದಿಗಳಿಗೆ ಯಾರು ಆಶ್ರಯ ನೀಡಬಾರದು, ಯಾರು ಮನೆಯಿಂದ ಹೊರಬಾರದಂತೆ ಜನರಿಗೆ ಪೋಲಿಸರು ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ವರದಿ ಮಾಡಬೇಕು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಜೈಲಿನ ಡಿಐಜಿ ಹಸನ್ ಸಾಹೇತು ಮತ್ತು ಸಿಂಧ್ ರೇಂಜರ್ಸ್ ಮಹಾನಿರ್ದೇಶಕ ಮೇಜರ್ ಜನರಲ್ ಮುಹಮ್ಮದ್ ಶಮ್ರೇಜ್ ಕೂಡ ಜೈಲಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಇದನ್ನೂ ಓದಿ:RCBಗೆ ಶುಭ ಹಾರೈಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.. ತಂಡದ ಬಗ್ಗೆ ಏನು ಹೇಳಿದರು?
ಪ್ರಾಥಮಿಕ ತನಿಖೆಯಲ್ಲಿ ಜೈಲು ನಿರ್ವಹಣೆ ಮತ್ತು ಆಂತರಿಕ ಭದ್ರತೆಯಲ್ಲಿ ಗಂಭೀರ ಲೋಪಗಳು ಕಂಡುಬಂದಿವೆ. ಘಟನೆಯ ಕುರಿತು ಸಮಗ್ರ ವರದಿಯನ್ನು ಸಲ್ಲಿಸುವಂತೆ ಸಿಂಧ್ ಗೃಹ ಸಚಿವ ಲಂಜಾರ್, ಕಾರಾಗೃಹಗಳ ಇನ್ಸ್ಪೆಕ್ಟರ್ ಜನರಲ್ ಮತ್ತು ಇತರ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ನಿರ್ಲಕ್ಷ್ಯ ತೋರಿದವರ ವಿರುದ್ಧ ಉನ್ನತ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು, ಸೂಕ್ಷ್ಮ ಸಂಸ್ಥೆಗಳ ಭದ್ರತೆಯಲ್ಲಿ ಇಂತಹ ವೈಫಲ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ