/newsfirstlive-kannada/media/post_attachments/wp-content/uploads/2025/07/accused.jpg)
ಬೆಂಗಳೂರು: ಇನ್ಸ್ಟಾದಲ್ಲಿ ಪರಿಚಯವಾದ ಮಹಿಳೆ ಜೊತೆಗೆ ಮಾತುಕತೆಗೆ ಅಂತ ಬಂದವನು ಆಕೆಯ ಸಂಬಂಧಿಗೆ ಕತ್ತುಕೊಯ್ದ ಘಟನೆ ಹೆಚ್ಎಎಲ್ನಲ್ಲಿ ನಡೆದಿದೆ. ಸೆಲ್ವ ಕಾರ್ತಿಕ್ ಬಂಧಿತ ಆರೋಪಿ.
ಇದನ್ನೂ ಓದಿ: ಕಿಪ್ಪಿ ಕೀರ್ತಿಗಾಗಿ ಕೋಬ್ರಾ VS ಕಪ್ಪೆ ಕಿತ್ತಾಟ.. ಪೊಲೀಸ್ ಠಾಣೆ ಮೆಟ್ಟಿಲೇರಿದ ಲವ್ ಸ್ಟೋರಿ..!
ತಿರಪ್ಪತ್ತೂರು ಮೂಲದ ಸೆಲ್ವ ಕಾರ್ತಿಕ್ಗೆ ಇನ್ಸ್ಟಾಗ್ರಾಮ್ನಲ್ಲಿ ಮಹಿಳೆ ಜೊತೆಗೆ ಪರಿಚಯ ಆಗುತ್ತೆ. ಹೀಗೆ ದಿನ ಕಳೆದಂತೆ ಕಾರ್ತಿಕ್ ಇನ್ಸ್ಟಾದಲ್ಲಿ ಮಹಿಳೆಗೆ ಮೆಸೇಜ್ ಮಾಡಿ ಪೀಡಿಸ್ತಿದ್ದನಂತೆ. ಆದ್ರೆ, ಆ ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಕಾರ್ತಿಕ್ ಮೆಸೇಜ್ ಮಾಡುತ್ತಿದ್ದ ವಿಚಾರವನ್ನು ಗಂಡನಿಗೂ ಹೇಳದೆ ತಂದೆಗೆ ತಿಳಿಸಿದ್ದಳು.
ಇನ್ನೂ, ಈ ವಿಚಾರ ತಂದೆಗೆ ಗೊತ್ತಾಗುತ್ತಿದ್ದಂತೆ ಕಾರ್ತಿಕ್ ಜೊತೆ ಮಾತಾಡಲು ಹೆಚ್ಎಎಲ್ಗೆ ಕರೆಸಿದ್ದರು. ಮಾತುಕತೆ ಬಳಿಕ ಕಾರ್ತಿಕ್ ಮಹಿಳೆ ಜೊತೆ ಮಾತನಾಡಬೇಕು ಅಂತ ಹೇಳಿದ್ದಾನೆ. ಈ ವೇಳೆ ಬೈಕ್ನಲ್ಲಿ ಕೂರಿಸಿಕೊಂಡು ಮನೆಗೆ ಕಡೆ ಹೊರಟಿದ್ರು, ಆಗ ಅದೇನ್ ಆಯ್ತೋ ಗೊತ್ತಿಲ್ಲ ಮಹಿಳೆ ಸಂಬಂಧಿಗೆ ಕಾರ್ತಿಕ್ ಚಾಕು ಇರಿದಿದ್ದಾನೆ. ಬೈಕ್ನಲ್ಲಿಯೇ ಪ್ರಶಾಂತ್ ಎಂಬಾತನ ಕತ್ತುಕೊಯ್ದಿದ್ದಾನೆ. ಆ ಕೂಡಲೇ ಗಾಯಾಳು ಯುವಕನಿಗೆ ಆಸ್ಪತ್ಸೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಪಿ ಕಾರ್ತಿಕ್ನ ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ