newsfirstkannada.com

BREAKING: ತುಂಗಭದ್ರಾ ಡ್ಯಾಂ 19ನೇ ಗೇಟ್‌ಗೆ ಮೊದಲ ಸ್ಟಾಪ್ ಲಾಗ್‌ ಅಳವಡಿಕೆ ಕಾರ್ಯ ಸಕ್ಸಸ್‌

Share :

Published August 16, 2024 at 9:32pm

Update August 16, 2024 at 9:57pm

    60 ಅಡಿ ಅಗಲ 4 ಅಡಿ ಉದ್ದದ ಮೊದಲ ಸ್ಟಾಪ್ ಲಾಗ್ ಅಳವಡಿಕೆ

    ಕೊನೆಗೂ ನಿಟ್ಟುಸಿರು ಬಿಟ್ಟ ಡ್ಯಾಂ ತಜ್ಞ ಕನ್ಹಯ್ಯ ನಾಯ್ಡು ತಂಡ

    19 ಗೇಟ್‌ಗೆ ಮೊದಲ ಸ್ಟಾಪ್ ಲಾಗ್‌ ಅಳವಡಿಕೆ ಕಾರ್ಯ ಯಶಸ್ವಿ

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಗೇಟ್‌ಗೆ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ಹಯ್ಯ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಿತ್ತು ಹೋಗಿದ್ದ ಗೇಟ್ ನಂಬರ್ 19ರ ಜಾಗದಲ್ಲಿ ಸ್ಟಾಪ್ ಲಾಗ್ ಅಳವಡಿಸಲಾಗಿದೆ.

ಕಳೆದ 2 ದಿನಗಳಿಂದ ಎದುರಾದ ತಾಂತ್ರಿಕ ಸವಾಲುಗಳ ಮಧ್ಯೆ ಇಂದು ಸಂಜೆ ಗೇಟ್ ಅಳವಡಿಕೆಗೆ ಇಡೀ ತಂಡ ಸಜ್ಜಾಗಿತ್ತು. ಸಚಿವ ಶಿವರಾಜ ತಂಗಡಗಿ ಅವರು ಪೂಜೆ ಮಾಡಿ ಗೇಟ್ ಅಳವಡಿಕೆಗೆ ಚಾಲನೆ ನೀಡಿದರು. ಗೇಟ್ ಯಶಸ್ವಿಯಾಗಿ ಇಳಿಯಲಿ ಎಂದು ಸ್ಥಳೀಯರು, ಜನಪ್ರತಿನಿಧಿಗಳು ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಇಳಿಕೆ.. ಎಷ್ಟು TMC ನೀರು ಪೋಲಾಗಿದೆ?

25 ಟಿಎಂಸಿ ನೀರು ತಡೆಯುವ ಸಾಮರ್ಥ್ಯ!
ಭಗವಂತನ ಮೇಲೆ ಭಾರ ಹಾಕಿದ್ದ ಡ್ಯಾಂ ತಜ್ಞ ಕನ್ಹಯ್ಯ ಅವರ ತಂಡ ಟಿಬಿ ಡ್ಯಾಂ ಸ್ಟಾಪ್ ಲಾಗ್ ಅಳವಡಿಸೋ ಕಾರ್ಯ ಆರಂಭಿಸಿತ್ತು. ಕಿತ್ತು ಹೋಗಿದ್ದ ಗೇಟ್ ನಂಬರ್ 19ರ ಜಾಗದಲ್ಲಿ ಇದೀಗ ಮೊದಲ ಸ್ಟಾಪ್ ಲಾಗ್‌ ಅಳವಡಿಸಲಾಗಿದೆ. 60 ಅಡಿ ಅಗಲ 4 ಅಡಿ ಉದ್ದದ ಮೊದಲ ಸ್ಟಾಪ್ ಲಾಗ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದ್ದು, ಇದು 25 ಟಿಎಂಸಿ ನೀರು ತಡೆಯುವ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ: ನಿಲ್ಲೆ, ನಿಲ್ಲೆ ತುಂಗಭದ್ರೆ.. ಪೋಲಾಗ್ತಿರುವ ಜೀವಜಲ ತಡೆಯಲು ಹರಸಾಹಸ; ತಾತ್ಕಾಲಿಕ ಗೇಟ್‌ ಅಳವಡಿಕೆ ಏನಾಯ್ತು? 

ಡ್ಯಾಂ ತಂತ್ರಜ್ಞರ ತಂಡ ಇನ್ನುಳಿದ ಸ್ಟಾಪ್ ಲಾಗ್ ಅನ್ನು ನಾಳೆ ಬೆಳಿಗ್ಗೆಯಿಂದ ಹಂತ ಹಂತವಾಗಿ ಅಳವಡಿಕೆ ಮಾಡಲು ಮುಂದಾಗಿದೆ. ಬಳ್ಳಾರಿಯ ಜಿಂದಾಲ್, ಹೊಸಪೇಟೆ ನಾರಾಯಣ ಇಂಜಿನಿಯರ್ಸ್ ಹಾಗೂ ಕೊಪ್ಪಳದ ಹಿಂದೂಸ್ತಾನ ಸ್ಟೀಲ್ಸ್ ವರ್ಕ್ಸ್‌ನಿಂದ ಈ ಸ್ಟಾಪ್ ಲಾಗ್‌ ತಯಾರಿಸಲಾಗಿತ್ತು. 80ಕ್ಕೂ ಹೆಚ್ಚು ಎಂಜಿನಿಯರ್ಸ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಗೆ ಮೊದಲ ಯಶಸ್ಸು ಸಿಕ್ಕಿದೆ.

ಇದನ್ನೂ ಓದಿ: ‘ಭಗವಂತನ ಮೇಲೆ ಭಾರ ಹಾಕಿ ಕೆಲಸ ಶುರು ಮಾಡ್ತೇವೆ’.. ಅಪಾಯದಲ್ಲಿರೋ ತುಂಗಭದ್ರಾ ಡ್ಯಾಂ ರಿಪೇರಿಗೆ ಮುಂದಾದ ತಜ್ಞ

ಸ್ಟಾಪ್ ಲಾಗ್ ಕಾರ್ಯ ಸಕ್ಸಸ್ ಆಗುತ್ತಿದ್ದಂತೆ ಡ್ಯಾಂ ತಜ್ಞ ಕನ್ಹಯ್ಯ ನಾಯ್ಡು ಅವರು ನಿಟ್ಟುಸಿರು ಬಿಟ್ಟಿದ್ದಾರೆ. ಎರಡು ಕ್ರೇನ್ ಮೂಲಕ ಮೊದಲ ಸ್ಟಾಪ್ ಲಾಗ್ ಇಳಿಸಲಾಗಿದೆ. ನಾಳೆಯಿಂದ ಉಳಿದ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಸಾಗಲಿದೆ. ತುಂಗಭದ್ರಾ ಜಲಾಶಯದ 19 ಗೇಟ್‌ಗೆ ಮೊದಲ ಸ್ಟಾಪ್ ಲಾಗ್‌ ಅಳವಡಿಕೆ ಕಾರ್ಯ ಯಶಸ್ವಿ ಆಗಿರೋದಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ತುಂಗಭದ್ರಾ ಡ್ಯಾಂ 19ನೇ ಗೇಟ್‌ಗೆ ಮೊದಲ ಸ್ಟಾಪ್ ಲಾಗ್‌ ಅಳವಡಿಕೆ ಕಾರ್ಯ ಸಕ್ಸಸ್‌

https://newsfirstlive.com/wp-content/uploads/2024/08/TB-Dam-Gate-Success.jpg

    60 ಅಡಿ ಅಗಲ 4 ಅಡಿ ಉದ್ದದ ಮೊದಲ ಸ್ಟಾಪ್ ಲಾಗ್ ಅಳವಡಿಕೆ

    ಕೊನೆಗೂ ನಿಟ್ಟುಸಿರು ಬಿಟ್ಟ ಡ್ಯಾಂ ತಜ್ಞ ಕನ್ಹಯ್ಯ ನಾಯ್ಡು ತಂಡ

    19 ಗೇಟ್‌ಗೆ ಮೊದಲ ಸ್ಟಾಪ್ ಲಾಗ್‌ ಅಳವಡಿಕೆ ಕಾರ್ಯ ಯಶಸ್ವಿ

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಗೇಟ್‌ಗೆ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ಹಯ್ಯ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಿತ್ತು ಹೋಗಿದ್ದ ಗೇಟ್ ನಂಬರ್ 19ರ ಜಾಗದಲ್ಲಿ ಸ್ಟಾಪ್ ಲಾಗ್ ಅಳವಡಿಸಲಾಗಿದೆ.

ಕಳೆದ 2 ದಿನಗಳಿಂದ ಎದುರಾದ ತಾಂತ್ರಿಕ ಸವಾಲುಗಳ ಮಧ್ಯೆ ಇಂದು ಸಂಜೆ ಗೇಟ್ ಅಳವಡಿಕೆಗೆ ಇಡೀ ತಂಡ ಸಜ್ಜಾಗಿತ್ತು. ಸಚಿವ ಶಿವರಾಜ ತಂಗಡಗಿ ಅವರು ಪೂಜೆ ಮಾಡಿ ಗೇಟ್ ಅಳವಡಿಕೆಗೆ ಚಾಲನೆ ನೀಡಿದರು. ಗೇಟ್ ಯಶಸ್ವಿಯಾಗಿ ಇಳಿಯಲಿ ಎಂದು ಸ್ಥಳೀಯರು, ಜನಪ್ರತಿನಿಧಿಗಳು ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಇಳಿಕೆ.. ಎಷ್ಟು TMC ನೀರು ಪೋಲಾಗಿದೆ?

25 ಟಿಎಂಸಿ ನೀರು ತಡೆಯುವ ಸಾಮರ್ಥ್ಯ!
ಭಗವಂತನ ಮೇಲೆ ಭಾರ ಹಾಕಿದ್ದ ಡ್ಯಾಂ ತಜ್ಞ ಕನ್ಹಯ್ಯ ಅವರ ತಂಡ ಟಿಬಿ ಡ್ಯಾಂ ಸ್ಟಾಪ್ ಲಾಗ್ ಅಳವಡಿಸೋ ಕಾರ್ಯ ಆರಂಭಿಸಿತ್ತು. ಕಿತ್ತು ಹೋಗಿದ್ದ ಗೇಟ್ ನಂಬರ್ 19ರ ಜಾಗದಲ್ಲಿ ಇದೀಗ ಮೊದಲ ಸ್ಟಾಪ್ ಲಾಗ್‌ ಅಳವಡಿಸಲಾಗಿದೆ. 60 ಅಡಿ ಅಗಲ 4 ಅಡಿ ಉದ್ದದ ಮೊದಲ ಸ್ಟಾಪ್ ಲಾಗ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದ್ದು, ಇದು 25 ಟಿಎಂಸಿ ನೀರು ತಡೆಯುವ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ: ನಿಲ್ಲೆ, ನಿಲ್ಲೆ ತುಂಗಭದ್ರೆ.. ಪೋಲಾಗ್ತಿರುವ ಜೀವಜಲ ತಡೆಯಲು ಹರಸಾಹಸ; ತಾತ್ಕಾಲಿಕ ಗೇಟ್‌ ಅಳವಡಿಕೆ ಏನಾಯ್ತು? 

ಡ್ಯಾಂ ತಂತ್ರಜ್ಞರ ತಂಡ ಇನ್ನುಳಿದ ಸ್ಟಾಪ್ ಲಾಗ್ ಅನ್ನು ನಾಳೆ ಬೆಳಿಗ್ಗೆಯಿಂದ ಹಂತ ಹಂತವಾಗಿ ಅಳವಡಿಕೆ ಮಾಡಲು ಮುಂದಾಗಿದೆ. ಬಳ್ಳಾರಿಯ ಜಿಂದಾಲ್, ಹೊಸಪೇಟೆ ನಾರಾಯಣ ಇಂಜಿನಿಯರ್ಸ್ ಹಾಗೂ ಕೊಪ್ಪಳದ ಹಿಂದೂಸ್ತಾನ ಸ್ಟೀಲ್ಸ್ ವರ್ಕ್ಸ್‌ನಿಂದ ಈ ಸ್ಟಾಪ್ ಲಾಗ್‌ ತಯಾರಿಸಲಾಗಿತ್ತು. 80ಕ್ಕೂ ಹೆಚ್ಚು ಎಂಜಿನಿಯರ್ಸ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಗೆ ಮೊದಲ ಯಶಸ್ಸು ಸಿಕ್ಕಿದೆ.

ಇದನ್ನೂ ಓದಿ: ‘ಭಗವಂತನ ಮೇಲೆ ಭಾರ ಹಾಕಿ ಕೆಲಸ ಶುರು ಮಾಡ್ತೇವೆ’.. ಅಪಾಯದಲ್ಲಿರೋ ತುಂಗಭದ್ರಾ ಡ್ಯಾಂ ರಿಪೇರಿಗೆ ಮುಂದಾದ ತಜ್ಞ

ಸ್ಟಾಪ್ ಲಾಗ್ ಕಾರ್ಯ ಸಕ್ಸಸ್ ಆಗುತ್ತಿದ್ದಂತೆ ಡ್ಯಾಂ ತಜ್ಞ ಕನ್ಹಯ್ಯ ನಾಯ್ಡು ಅವರು ನಿಟ್ಟುಸಿರು ಬಿಟ್ಟಿದ್ದಾರೆ. ಎರಡು ಕ್ರೇನ್ ಮೂಲಕ ಮೊದಲ ಸ್ಟಾಪ್ ಲಾಗ್ ಇಳಿಸಲಾಗಿದೆ. ನಾಳೆಯಿಂದ ಉಳಿದ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಸಾಗಲಿದೆ. ತುಂಗಭದ್ರಾ ಜಲಾಶಯದ 19 ಗೇಟ್‌ಗೆ ಮೊದಲ ಸ್ಟಾಪ್ ಲಾಗ್‌ ಅಳವಡಿಕೆ ಕಾರ್ಯ ಯಶಸ್ವಿ ಆಗಿರೋದಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More