/newsfirstlive-kannada/media/post_attachments/wp-content/uploads/2023/06/ravi-d-channannavar.jpg)
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಓರ್ವ ಐಪಿಎಸ್ ಅಧಿಕಾರಿಯನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ರವಿ ಡಿ ಚನ್ನಣ್ಣನವರ್ ಅವರನ್ನು ಬೆಂಗಳೂರು ಅಗ್ನಿಶಾಮಕ ದಳದ ಡೆಪ್ಯೂಟಿ ಇನ್​ಸ್ಪೆಕ್ಟರ್ ಜನರಲ್ ಆಗಿ ವರ್ಗಾವಣೆ ಮಾಡಲಾಗಿದೆ. ತತ್ ಕ್ಷಣದಿಂದ ಜಾರಿಯಾಗುವಂತೆ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಸದ್ಯ ಚನ್ನಣ್ಣನವರ್, ಆಂತರಿಕ ಭದ್ರತಾ ವಿಭಾಗದಲ್ಲಿ ಡಿಐಜಿ ಆಗಿದ್ದಾರೆ.
ಈ ಹಿಂದೆ ಕಿಯೋನಿಕ್ಸ್ ಎಂಡಿ ಆಗಿದ್ದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಸಿದ್ದರಾಮಯ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಯಾವುದೇ ಹುದ್ದೆ ತೋರಿಸದೇ ಆಂತರಿಕ ಭದ್ರತಾ ವಿಭಾಗಕ್ಕೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಈ ಹಿನ್ನೆಲೆ ಸರ್ಕಾರದ ವರ್ಗಾವಣೆ ಆದೇಶ ಪ್ರಶ್ನಿಸಿ ರವಿ ಡಿ ಚನ್ನಣ್ಣನವರ್ ಸಿಎಟಿ ಮೊರೆ ಹೋಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ