/newsfirstlive-kannada/media/post_attachments/wp-content/uploads/2024/04/MODI-WARNING.jpg)
ಇಸ್ರೇಲ್ ಮೇಲೆ ಇರಾನ್ ಯುದ್ಧ ಘೋಷಿಸಿದ್ದು, 200ಕ್ಕೂ ಹೆಚ್ಚು ಡ್ರೋಣ್​​ಗಳು ಹಾಗೂ ಮಿಸೈಲ್​​​ಗಳನ್ನು ಉಡಾಯಿಸಿದೆ. ಈ ಮೂಲಕ ವಿಶ್ವದಲ್ಲಿ ಮತ್ತೊಂದು ಯುದ್ಧದ ಸಂದಿಗ್ಧತೆ ಸೃಷ್ಟಿಯಾಗಿದೆ. ಇಸ್ರೇಲ್ ಮೇಲಿನ ಇರಾನ್ ದಾಳಿಗೆ ಭಾರತ ಕಳವಳ ವ್ಯಕ್ತಪಡಿಸಿದೆ.
/newsfirstlive-kannada/media/post_attachments/wp-content/uploads/2024/04/IRAN_1.jpg)
ದಾಳಿಯ ಬಗ್ಗೆ ಹಾಗೂ ಅಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆ ನಿಡಿದೆ. ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಹಗೆತನದಿಂದ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆಯಾಗುತ್ತಿದೆ. ಕೂಡಲೇ ಉದ್ವಿಗ್ನತೆ, ಹಿಂಸಾಚಾರದಿಂದ ಹಿಂದೆ ಸರಿಯಲು ರಾಜತಾಂತ್ರಿಕತೆ ಮೂಲಕ ಭಾರತ ಕರೆ ನೀಡುತ್ತದೆ ಎಂದು ತಿಳಿಸಿದೆ.
ಇದನ್ನೂ ಓದಿ:ತಂಪೆರೆದ ಮಳೆರಾಯ.. ರಾಜ್ಯದ ಯಾವ್ಯಾವ ಜಿಲ್ಲೆಯಲ್ಲಿ ಭಾರೀ ಮಳೆ..?
ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಲ್ಲಿನ ನಮ್ಮ ರಾಯಭಾರ ಕಚೇರಿಗಳು, ಭಾರತೀಯ ಸಮುದಾಯದೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ. ಈ ಪ್ರದೇಶದಲ್ಲಿ ಭದ್ರತೆ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ ಎಂದು ಭಾರತ ಹೇಳಿದೆ.
Statement on the situation in West Asia:https://t.co/kpJzqwTVWCpic.twitter.com/cSbJQrAjCC
— Randhir Jaiswal (@MEAIndia) April 14, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us