ಪಂದ್ಯದ ವೇಳೆ ಐರ್ಲೆಂಡ್ ಅಲ್ಪ ಮೊತ್ತಕ್ಕೆ ಕುಸಿತ
ಭರ್ಜರಿ ಬೌಲಿಂಗ್ ಮಾಡಿದ ಬುಮ್ರಾ, ಕೃಷ್ಣ, ರವಿ
ಆರಂಭಿಕ ಆಘಾತಕ್ಕೆ ಒಳಗಾಗಿದ್ದ ಭಾರತ ತಂಡ
ಐರ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡ ನಿನ್ನೆ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ಐರ್ಲೆಂಡ್ ಮತ್ತು ಭಾರತದ ನಡುವಿನ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ಇದರಿಂದ ಪಂದ್ಯ ಅರ್ಧಕ್ಕೆ ನಿಲ್ಲಿಸಲಾಯಿತು. ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಪಂದ್ಯವನ್ನು 2 ರನ್ಗಳಿಂದ ಜಸ್ಪ್ರೀತ್ ಬುಮ್ರಾ ಪಡೆ ಗೆದ್ದುಕೊಂಡಿದ್ದು 3 ಮ್ಯಾಚ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
ಟಾಸ್ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ಜಸ್ಪ್ರೀತ್ ಬುಮ್ರಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿರುವುದು ಉತ್ತಮ ಎಂದೆನಿಸಿತು. ಏಕೆಂದರೆ ಐರ್ಲೆಂಡ್ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ಗಳ ಮಾತ್ರ ಕಲೆ ಹಾಕಿತು. ಭಾರತದ ಪರ ಕ್ಯಾಪ್ಟನ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಬಿಷ್ಣೋಯಿ ತಲಾ ಎರಡೆರಡು ವಿಕೆಟ್ ಪಡೆದರೆ ಅರ್ಶ್ದೀಪ್ ಒಂದು ವಿಕೆಟ್ ಉರುಳಿಸಿ ತಂಡಕ್ಕೆ ನೆರವಾದರು.
ಬಳಿಕ ಬ್ಯಾಟಿಂಗ್ಗೆ ಇಳಿದ ಟೀಮ್ ಇಂಡಿಯಾದ ಓಪನರ್ ಜೈಶ್ವಾಲ್ ಮತ್ತು ಋತುರಾಜ್ ಉತ್ತಮ ಆರಂಭವೇನು ಪಡೆಯಲಿಲ್ಲ. ಜೈಶ್ವಾಲ್ 24 ರನ್ ಗಳಿಸಿ ಆಡುವಾಗಲೇ ಔಟ್ ಆದರು. ನಂತರ ಬಂದ ತಿಲಕ್ ವರ್ಮಾ ಸೊನ್ನೆ ಸುತ್ತಿ ಬಂದಷ್ಟೇ ವೇಗದಲ್ಲಿ ಪೆವಿಲಿಯನ್ ದಾರಿ ಹಿಡಿದರು. ಈ ವೇಳೆ ಕ್ರೀಸ್ ಕಾಯ್ದುಕೊಂಡಿದ್ದ ಋತುರಾಜ್ 19 ಹಾಗೂ ಸಂಜು 1 ರನ್ಗಳಿಸಿ ಆಡುವಾಗ ಬಂದ ಮಳೆ ಬೀಡದೇ ಸುರಿದಿದೆ. ಪರಿಣಾಮ ಪಂದ್ಯವನ್ನು ರದ್ದು ಮಾಡಿ ಡಕ್ವರ್ತ್ ಲೂಯಿಸ್ ನಿಯಮ ಪ್ರಕಾರ ಭಾರತಕ್ಕೆ ಗೆಲುವು ಎಂದು ಘೋಷಣೆ ಮಾಡಲಾಯಿತು. ಇದರಿಂದ ಬುಮ್ರಾ ಮೊದಲ ಬಾರಿ ನಾಯಕನ ಪಟ್ಟದಲ್ಲಿ ಮೊದಲ ಗೆಲುವನ್ನು ಸಂಭ್ರಮಿಸಿದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಪಂದ್ಯದ ವೇಳೆ ಐರ್ಲೆಂಡ್ ಅಲ್ಪ ಮೊತ್ತಕ್ಕೆ ಕುಸಿತ
ಭರ್ಜರಿ ಬೌಲಿಂಗ್ ಮಾಡಿದ ಬುಮ್ರಾ, ಕೃಷ್ಣ, ರವಿ
ಆರಂಭಿಕ ಆಘಾತಕ್ಕೆ ಒಳಗಾಗಿದ್ದ ಭಾರತ ತಂಡ
ಐರ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡ ನಿನ್ನೆ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ಐರ್ಲೆಂಡ್ ಮತ್ತು ಭಾರತದ ನಡುವಿನ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ಇದರಿಂದ ಪಂದ್ಯ ಅರ್ಧಕ್ಕೆ ನಿಲ್ಲಿಸಲಾಯಿತು. ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಪಂದ್ಯವನ್ನು 2 ರನ್ಗಳಿಂದ ಜಸ್ಪ್ರೀತ್ ಬುಮ್ರಾ ಪಡೆ ಗೆದ್ದುಕೊಂಡಿದ್ದು 3 ಮ್ಯಾಚ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
ಟಾಸ್ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ಜಸ್ಪ್ರೀತ್ ಬುಮ್ರಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿರುವುದು ಉತ್ತಮ ಎಂದೆನಿಸಿತು. ಏಕೆಂದರೆ ಐರ್ಲೆಂಡ್ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ಗಳ ಮಾತ್ರ ಕಲೆ ಹಾಕಿತು. ಭಾರತದ ಪರ ಕ್ಯಾಪ್ಟನ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಬಿಷ್ಣೋಯಿ ತಲಾ ಎರಡೆರಡು ವಿಕೆಟ್ ಪಡೆದರೆ ಅರ್ಶ್ದೀಪ್ ಒಂದು ವಿಕೆಟ್ ಉರುಳಿಸಿ ತಂಡಕ್ಕೆ ನೆರವಾದರು.
ಬಳಿಕ ಬ್ಯಾಟಿಂಗ್ಗೆ ಇಳಿದ ಟೀಮ್ ಇಂಡಿಯಾದ ಓಪನರ್ ಜೈಶ್ವಾಲ್ ಮತ್ತು ಋತುರಾಜ್ ಉತ್ತಮ ಆರಂಭವೇನು ಪಡೆಯಲಿಲ್ಲ. ಜೈಶ್ವಾಲ್ 24 ರನ್ ಗಳಿಸಿ ಆಡುವಾಗಲೇ ಔಟ್ ಆದರು. ನಂತರ ಬಂದ ತಿಲಕ್ ವರ್ಮಾ ಸೊನ್ನೆ ಸುತ್ತಿ ಬಂದಷ್ಟೇ ವೇಗದಲ್ಲಿ ಪೆವಿಲಿಯನ್ ದಾರಿ ಹಿಡಿದರು. ಈ ವೇಳೆ ಕ್ರೀಸ್ ಕಾಯ್ದುಕೊಂಡಿದ್ದ ಋತುರಾಜ್ 19 ಹಾಗೂ ಸಂಜು 1 ರನ್ಗಳಿಸಿ ಆಡುವಾಗ ಬಂದ ಮಳೆ ಬೀಡದೇ ಸುರಿದಿದೆ. ಪರಿಣಾಮ ಪಂದ್ಯವನ್ನು ರದ್ದು ಮಾಡಿ ಡಕ್ವರ್ತ್ ಲೂಯಿಸ್ ನಿಯಮ ಪ್ರಕಾರ ಭಾರತಕ್ಕೆ ಗೆಲುವು ಎಂದು ಘೋಷಣೆ ಮಾಡಲಾಯಿತು. ಇದರಿಂದ ಬುಮ್ರಾ ಮೊದಲ ಬಾರಿ ನಾಯಕನ ಪಟ್ಟದಲ್ಲಿ ಮೊದಲ ಗೆಲುವನ್ನು ಸಂಭ್ರಮಿಸಿದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ