ಮೃತ ಮಹಿಳೆಯ ಪೋಷಕರಿಂದ ಗಂಭೀರ ಆರೋಪ
ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು
ಪ್ರೀತಿ, ಪ್ರೇಮ ಎಂದು ಸುತ್ತಾಡಿದ್ದ ಜೋಡಿಗೆ ಏನಾಯ್ತು?
ಮಹಿಳೆ ಸಾವು ಪ್ರಕರಣದಲ್ಲಿ ಇಂಡಿಯನ್ ರೆವಿನ್ಯೂ ಸರ್ವೀಸ್ (IRS) ಆಫೀಸರ್ ಒಬ್ಬರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.
ಮೇ 25 ರಂದು ಸಂಜೆ ನೋಯ್ಡಾ ಸೆಕ್ಟರ್ನ ಲೋಟಸ್ ಬೌಲೆವರ್ಡ್ ಸೊಸೈಟಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ ಪೊಲೀಸರು ತನಿಖೆಯನ್ನು ಆರಂಭಿಸಿದ್ದರು. ವಿಚಾರಣೆ ವೇಳೆ ಐಆರ್ಎಸ್ ಆಫೀಸರ್ ಸೌರಭ್ ಮೀನಾ ಹಾಗೂ ಮೃತ ಮಹಿಳೆ ಶಿಲ್ಪಾ ಗೌತಮ್ ಪ್ರೀತಿಸುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಒಟ್ಟಿಗೆ ಇದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ರೀಮಲ್ ಚಂಡಮಾರುತ ಆರ್ಭಟ.. ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಯಾವಾಗ..?
ಶಿಲ್ಪಾ ಅವರು ಭಾರತ್ ಹೇವಿ ಎಲೆಕ್ಟ್ರಿಕಲ್ ಲಿಮಿಟೆಟ್ ಕಂಪನಿಯಲ್ಲಿ ಡೆಪ್ಯುಟಿ ಮ್ಯಾನೇಜರ್ ಆಗಿದ್ದರು. ಸೌರಭ್ ಅವರು ಇನ್ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ನಲ್ಲಿ ಡೆಪ್ಯುಟಿ ಕಮಿಷನರ್ ಆಗಿದ್ದರು. ಮಗಳ ಮೃತದೇಹ ನೋಡುತ್ತಿದ್ದಂತೆಯೇ ಶಿಲ್ಪಾಳ ಪೋಷಕರು ದೂರು ನೀಡಿದ್ದರು. ಶಿಲ್ಪಾಳನ್ನು ಮದುವೆ ಆಗುತ್ತೇನೆಂದು ನಂಬಿಸಿ ಮೋಸ ಮಾಡಿದ್ದಾನೆ. ಮಾತ್ರವಲ್ಲ, ಆಕೆಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ, ಹೊಡೆಯುತ್ತಿದ್ದ ಎಂದು ಶಿಲ್ಪಾ ಪೋಷಕರು ಆರೋಪಿಸಿದ್ದಾರೆ. ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೋಷಕರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಇಬ್ಬರು ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು.
ಇದನ್ನೂ ಓದಿ:ಡಿವೋರ್ಸ್ ವದಂತಿ ಬೆನ್ನಲ್ಲೇ.. ವಿಶ್ವಕಪ್ಗೆ ವಿಮಾನ ಹತ್ತದ ಹಾರ್ದಿಕ್ ಪಾಂಡ್ಯ.. ಕೈಕೊಟ್ರಾ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೃತ ಮಹಿಳೆಯ ಪೋಷಕರಿಂದ ಗಂಭೀರ ಆರೋಪ
ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು
ಪ್ರೀತಿ, ಪ್ರೇಮ ಎಂದು ಸುತ್ತಾಡಿದ್ದ ಜೋಡಿಗೆ ಏನಾಯ್ತು?
ಮಹಿಳೆ ಸಾವು ಪ್ರಕರಣದಲ್ಲಿ ಇಂಡಿಯನ್ ರೆವಿನ್ಯೂ ಸರ್ವೀಸ್ (IRS) ಆಫೀಸರ್ ಒಬ್ಬರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.
ಮೇ 25 ರಂದು ಸಂಜೆ ನೋಯ್ಡಾ ಸೆಕ್ಟರ್ನ ಲೋಟಸ್ ಬೌಲೆವರ್ಡ್ ಸೊಸೈಟಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ ಪೊಲೀಸರು ತನಿಖೆಯನ್ನು ಆರಂಭಿಸಿದ್ದರು. ವಿಚಾರಣೆ ವೇಳೆ ಐಆರ್ಎಸ್ ಆಫೀಸರ್ ಸೌರಭ್ ಮೀನಾ ಹಾಗೂ ಮೃತ ಮಹಿಳೆ ಶಿಲ್ಪಾ ಗೌತಮ್ ಪ್ರೀತಿಸುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಒಟ್ಟಿಗೆ ಇದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ರೀಮಲ್ ಚಂಡಮಾರುತ ಆರ್ಭಟ.. ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಯಾವಾಗ..?
ಶಿಲ್ಪಾ ಅವರು ಭಾರತ್ ಹೇವಿ ಎಲೆಕ್ಟ್ರಿಕಲ್ ಲಿಮಿಟೆಟ್ ಕಂಪನಿಯಲ್ಲಿ ಡೆಪ್ಯುಟಿ ಮ್ಯಾನೇಜರ್ ಆಗಿದ್ದರು. ಸೌರಭ್ ಅವರು ಇನ್ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ನಲ್ಲಿ ಡೆಪ್ಯುಟಿ ಕಮಿಷನರ್ ಆಗಿದ್ದರು. ಮಗಳ ಮೃತದೇಹ ನೋಡುತ್ತಿದ್ದಂತೆಯೇ ಶಿಲ್ಪಾಳ ಪೋಷಕರು ದೂರು ನೀಡಿದ್ದರು. ಶಿಲ್ಪಾಳನ್ನು ಮದುವೆ ಆಗುತ್ತೇನೆಂದು ನಂಬಿಸಿ ಮೋಸ ಮಾಡಿದ್ದಾನೆ. ಮಾತ್ರವಲ್ಲ, ಆಕೆಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ, ಹೊಡೆಯುತ್ತಿದ್ದ ಎಂದು ಶಿಲ್ಪಾ ಪೋಷಕರು ಆರೋಪಿಸಿದ್ದಾರೆ. ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೋಷಕರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಇಬ್ಬರು ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು.
ಇದನ್ನೂ ಓದಿ:ಡಿವೋರ್ಸ್ ವದಂತಿ ಬೆನ್ನಲ್ಲೇ.. ವಿಶ್ವಕಪ್ಗೆ ವಿಮಾನ ಹತ್ತದ ಹಾರ್ದಿಕ್ ಪಾಂಡ್ಯ.. ಕೈಕೊಟ್ರಾ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ