/newsfirstlive-kannada/media/post_attachments/wp-content/uploads/2024/09/Darshan-Pavithra-Gowda-Photo-2.jpg)
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ ಅರೆಸ್ಟ್ ಆಗಿ ಇಂದಿಗೆ ಒಂದು ವರ್ಷ ಕಳೆದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಕೇಸ್ನಲ್ಲಿ ನಟ ದರ್ಶನ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇಂದಿಗೆ ಒಂದು ವರ್ಷದ ಹಿಂದೆ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ನಟ ದರ್ಶನ್ನನ್ನು ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ: ಕ್ಯಾರೆಟ್ ಹಲ್ವಾ, ಮಾವಿನ ಹಣ್ಣು ಮತ್ತು ಅನ್ನ; ಶುಭಾಂಶು ಶುಕ್ಲಾ ಗಗನಯಾನಕ್ಕೆ ಅಂತಿಮ ತಯಾರಿ ಹೇಗಿದೆ?
9.6.2024ರಲ್ಲಿ ಮೈಸೂರಿನ ಲಲಿತಾ ಮಹಲ್ ಪ್ಯಾಲೇಸ್ನಲ್ಲಿ ಡೆವಿಲ್ ಶೂಟಿಂಗ್ ನಡೆಯುತ್ತಿತ್ತು. ಹೀಗಾಗಿ 10.6.2024ರಂದು ಶೂಟಿಂಗ್ ಮುಗಿಸಿ ಹೋಟೆಲ್ನಲ್ಲಿ ನಟ ದರ್ಶನ್ ತಂಗಿದ್ದರು. ಮರುದಿನ 11.6.2024 ರಂದು ಬೆಳಗ್ಗೆ ಎಂದಿನಂತೆ 7ರಿಂದ 8 ಗಂಟೆವರೆಗೂ ಕುವೆಂಪುನಗರ ಗೋಲ್ಡ್ ಜಿಮ್ನಲ್ಲಿ ವರ್ಕ್ ಔಟ್ ಮಾಡಿದ್ದರು. ಇದಾದ ಬಳಿಕ ಫ್ರೆಶ್ ಜ್ಯೂಸ್ ಕುಡಿದು ತಿಂಡಿ ತಿಂದು ಹೋಟೆಲ್ಗೆ ತೆರಳುವಾಗ ದರ್ಶನ್ಗೆ ಪೊಲೀಸರು ಶಾಕ್ ಕೊಟ್ಟಿದ್ದರು.
ಸ್ನಾನ ಮುಗಿಸಿ ಬಟ್ಟೆ ಬದಲಿಸಿ ರೇಂಜ್ ರೋವರ್ ಕಾರಿನಲ್ಲಿ ಬರುತ್ತೇನೆ ಅಂತ ಪೊಲೀಸರಿಗೆ ದರ್ಶನ್ ಕೇಳಿಕೊಂಡಿದ್ದರು. ಆದ್ರೆ ಪೊಲೀಸರು ಸುಮ್ಮನೆ ನಮ್ಮ ಕಾರು ಹತ್ತಿ ಎಂದು ಆವಾಜ್ ಹಾಕಿದ್ದರು. ಮೈಸೂರಿನಿಂದ 8.30 ಗಂಟೆಗೆ ಅರೆಸ್ಟ್ ಮಾಡಿ ಬೆಂಗಳೂರಿಗೆ ದರ್ಶನ್ನನ್ನು ಕರೆದುಕೊಂಡು ಬಂದಿದ್ದರು. ಇದಾದ ನಂತರ ಈ ಕೇಸ್ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸಿ ಕೋರ್ಟ್ಗೆ ಒಪ್ಪಿಸಿದ್ದರು. ಆಗ ನಟ ದರ್ಶನ್ಗೆ 6106 ಖೈದಿ ನಂಬರ್ ಕೊಟ್ಟಿದ್ದರು. ಈ ನಂಬರ್ ಕೂಡ ಸಖತ್ ಟ್ರೆಂಡ್ ಸೃಷ್ಟಿಸಿತ್ತು.
ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ನಟ ದರ್ಶನ್ ಅವರಿಗೆ ಸ್ಪೈನಲ್ ಸಮಸ್ಯೆ ಇತ್ತು. ಹೀಗಾಗಿ ವೈದ್ಯಕೀಯ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಸಂಬಂಧ ಹೈಕೋರ್ಟ್ ಬೇಲ್ ನೀಡಿತ್ತು. ವೈದ್ಯಕೀಯ ಕಾರಣ ನೀಡಿ ಮಧ್ಯಂತರ ಬೇಲ್ಗೆ ಅರ್ಜಿ ಹಾಕಲಾಗಿತ್ತು. ವೈದ್ಯಕೀಯ ಚಿಕಿತ್ಸೆಗೆ ಒಳಗಾಗಲು 6 ವಾರಗಳ ಕಾಲ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಪ್ರಕರಣದ ಆರೋಪಿಗಳು ಷರತ್ತುಬದ್ಧ ಜಾಮೀನು ಪಡೆದು ಹೊರಗಿದ್ದಾರೆ. ನಟ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ