ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆಯಲ್ಲಿ ಐಟಿ ದಾಳಿ ಅಂತ್ಯ
ಸತತ 12 ಗಂಟೆಗಳ ಶೋಧ ನಡೆಸಿರುವ ಐಟಿ ಅಧಿಕಾರಿಗಳು
ಬಿಜೆಪಿ ವಿರುದ್ಧ ಮಾಜಿ ಕಾರ್ಪೊರೇಟರ್ ಗಂಗಾಧರ್ ವಾಗ್ದಾಳಿ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಕೆ.ಸುರೇಶ್ಗೆ ಪ್ರತಿಷ್ಟೆಯ ಕಣವಾಗಿದೆ. ಕ್ಷೇತ್ರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿ ಇರುವಾಗ ಡಿಕೆ ಸುರೇಶ್ ಆಪ್ತರ ಮನೆ ಮೇಲೆ ನಡೆದ ಐಟಿ ದಾಳಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆಯಲ್ಲಿ ಐಟಿ ದಾಳಿ ಅಂತ್ಯ
ಡಿ.ಕೆ. ಬ್ರದರ್ಸ್ಗೆ ಆಪ್ತರಾಗಿರುವ ಕೋಣನಕುಂಟೆ ಬ್ಲಾಕ್ನ ಮಾಜಿ ಕಾರ್ಪೊರೆಟರ್ ಗಂಗಾಧರ್ ಮನೆ ಮೇಲೆ ನಡೆದ ಐಟಿ ದಾಳಿ ಮುಕ್ತಾಯವಾಗಿದೆ. ಸತತ 12 ಗಂಟೆಗಳ ಕಾಲ ಗಂಗಾಧರ್ ಮನೆಯಲ್ಲಿ ಶೋಧ ನಡೆಸಿದ ಐಟಿ ಅಧಿಕಾರಿಗಳು, ಗಂಗಾಧರ್ ಮನೆಯಲ್ಲಿ 87 ಲಕ್ಷ ಹಣ, ಚಿನ್ನಾಭರಣ ಹಾಗೂ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:7 ಪಂದ್ಯಗಳಲ್ಲಿ ಸೋತು ಭಾರೀ ಮುಖಭಂಗ; ಆರ್ಸಿಬಿ ಪ್ಲೇಯಿಂಗ್-11ನಲ್ಲಿ ಇಂದು ಭಾರೀ ಬದಲಾವಣೆ..!
ಬಿಜೆಪಿ ವಿರುದ್ಧ ಮಾಜಿ ಕಾರ್ಪೊರೇಟರ್ ವಾಗ್ದಾಳಿ
ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಕಾರ್ಪೊರೇಟರ್ ಗಂಗಾಧರ್, ಮೋದಿಯವರು ಎಷ್ಟು ಕಿರುಕುಳ ನೀಡ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು. ಐಟಿ ಅಧಿಕಾರಿಗಳು ಉತ್ತರ ಭಾರತದವರು, ಅವರ ಭಾಷೆ ಸರಿ ಇರಲಿಲ್ಲ. ಕ್ಯಾನ್ವಾಸ್ ಮಾಡ್ಬೇಡ ಎಂದು ಐಟಿ ಅಧಿಕಾರಿಗಳು ಹೇಳಿದ್ರು ಎಂದು ಗಂಗಾಧರ್ ಆರೋಪ ಮಾಡಿದ್ದಾರೆ.
ಮನೆಯಲ್ಲಿ ಐಟಿಗೆ ಸಿಕ್ಕ ಹಣದ ಬಗ್ಗೆಯೂ ಗಂಗಾಧರ್ ಸ್ಪಷ್ಟನೆ ನೀಡಿದ್ದಾರೆ. ಮನೆಯಲ್ಲಿ ಬಿಲ್ಡಿಂಗ್ ಮಾರಿದ ಹಣ ಇತ್ತು. ಅದನ್ನು ತೆಗೆದುಕೊಂಡು ಹೋಗಿದ್ದಾರೆ. ಇನ್ನು ನೋಟಿಸ್ ಕೊಟ್ಟಿದ್ದು, ನಮ್ಮ ಆಡಿಟರ್ ಜೊತೆ ಮಾತಾನಾಡ್ತೀನಿ. ನಮ್ಮ ನಾಯಕರ ಜೊತೆ ಮಾತಾಡ್ತೀನಿ ಎಂದು ಗಂಗಾಧರ್ ಹೇಳಿದ್ದಾರೆ.
ಇದನ್ನೂ ಓದಿ: ಹಠಾತ್ ಹೃದಯಾಘಾತ, ಕುಸಿದುಬಿದ್ದು ಬಿಜೆಪಿ ಸಂಸದ ನಿಧನ; ಸಿಎಂ ಸಂತಾಪ
ಸತತ 12 ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳು ಹಣ, ಕೆಲವೊಂದು ದಾಖಲೆಗಳೊಂದಿಗೆ ವಾಪಸ್ ತೆರಳಿದ್ದಾರೆ. ಆದ್ರೆ ಈ ದಾಳಿ ರಾಜಕೀಯ ಪ್ರೇರಿತ ಅಂತ ಕಾಂಗ್ರೆಸ್ ನಾಯಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆಯಲ್ಲಿ ಐಟಿ ದಾಳಿ ಅಂತ್ಯ
ಸತತ 12 ಗಂಟೆಗಳ ಶೋಧ ನಡೆಸಿರುವ ಐಟಿ ಅಧಿಕಾರಿಗಳು
ಬಿಜೆಪಿ ವಿರುದ್ಧ ಮಾಜಿ ಕಾರ್ಪೊರೇಟರ್ ಗಂಗಾಧರ್ ವಾಗ್ದಾಳಿ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಕೆ.ಸುರೇಶ್ಗೆ ಪ್ರತಿಷ್ಟೆಯ ಕಣವಾಗಿದೆ. ಕ್ಷೇತ್ರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿ ಇರುವಾಗ ಡಿಕೆ ಸುರೇಶ್ ಆಪ್ತರ ಮನೆ ಮೇಲೆ ನಡೆದ ಐಟಿ ದಾಳಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಮಾಜಿ ಕಾರ್ಪೊರೇಟರ್ ಗಂಗಾಧರ್ ಮನೆಯಲ್ಲಿ ಐಟಿ ದಾಳಿ ಅಂತ್ಯ
ಡಿ.ಕೆ. ಬ್ರದರ್ಸ್ಗೆ ಆಪ್ತರಾಗಿರುವ ಕೋಣನಕುಂಟೆ ಬ್ಲಾಕ್ನ ಮಾಜಿ ಕಾರ್ಪೊರೆಟರ್ ಗಂಗಾಧರ್ ಮನೆ ಮೇಲೆ ನಡೆದ ಐಟಿ ದಾಳಿ ಮುಕ್ತಾಯವಾಗಿದೆ. ಸತತ 12 ಗಂಟೆಗಳ ಕಾಲ ಗಂಗಾಧರ್ ಮನೆಯಲ್ಲಿ ಶೋಧ ನಡೆಸಿದ ಐಟಿ ಅಧಿಕಾರಿಗಳು, ಗಂಗಾಧರ್ ಮನೆಯಲ್ಲಿ 87 ಲಕ್ಷ ಹಣ, ಚಿನ್ನಾಭರಣ ಹಾಗೂ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:7 ಪಂದ್ಯಗಳಲ್ಲಿ ಸೋತು ಭಾರೀ ಮುಖಭಂಗ; ಆರ್ಸಿಬಿ ಪ್ಲೇಯಿಂಗ್-11ನಲ್ಲಿ ಇಂದು ಭಾರೀ ಬದಲಾವಣೆ..!
ಬಿಜೆಪಿ ವಿರುದ್ಧ ಮಾಜಿ ಕಾರ್ಪೊರೇಟರ್ ವಾಗ್ದಾಳಿ
ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಕಾರ್ಪೊರೇಟರ್ ಗಂಗಾಧರ್, ಮೋದಿಯವರು ಎಷ್ಟು ಕಿರುಕುಳ ನೀಡ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು. ಐಟಿ ಅಧಿಕಾರಿಗಳು ಉತ್ತರ ಭಾರತದವರು, ಅವರ ಭಾಷೆ ಸರಿ ಇರಲಿಲ್ಲ. ಕ್ಯಾನ್ವಾಸ್ ಮಾಡ್ಬೇಡ ಎಂದು ಐಟಿ ಅಧಿಕಾರಿಗಳು ಹೇಳಿದ್ರು ಎಂದು ಗಂಗಾಧರ್ ಆರೋಪ ಮಾಡಿದ್ದಾರೆ.
ಮನೆಯಲ್ಲಿ ಐಟಿಗೆ ಸಿಕ್ಕ ಹಣದ ಬಗ್ಗೆಯೂ ಗಂಗಾಧರ್ ಸ್ಪಷ್ಟನೆ ನೀಡಿದ್ದಾರೆ. ಮನೆಯಲ್ಲಿ ಬಿಲ್ಡಿಂಗ್ ಮಾರಿದ ಹಣ ಇತ್ತು. ಅದನ್ನು ತೆಗೆದುಕೊಂಡು ಹೋಗಿದ್ದಾರೆ. ಇನ್ನು ನೋಟಿಸ್ ಕೊಟ್ಟಿದ್ದು, ನಮ್ಮ ಆಡಿಟರ್ ಜೊತೆ ಮಾತಾನಾಡ್ತೀನಿ. ನಮ್ಮ ನಾಯಕರ ಜೊತೆ ಮಾತಾಡ್ತೀನಿ ಎಂದು ಗಂಗಾಧರ್ ಹೇಳಿದ್ದಾರೆ.
ಇದನ್ನೂ ಓದಿ: ಹಠಾತ್ ಹೃದಯಾಘಾತ, ಕುಸಿದುಬಿದ್ದು ಬಿಜೆಪಿ ಸಂಸದ ನಿಧನ; ಸಿಎಂ ಸಂತಾಪ
ಸತತ 12 ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳು ಹಣ, ಕೆಲವೊಂದು ದಾಖಲೆಗಳೊಂದಿಗೆ ವಾಪಸ್ ತೆರಳಿದ್ದಾರೆ. ಆದ್ರೆ ಈ ದಾಳಿ ರಾಜಕೀಯ ಪ್ರೇರಿತ ಅಂತ ಕಾಂಗ್ರೆಸ್ ನಾಯಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ