newsfirstkannada.com

ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದು ಯಾಕಂದ್ರೆ.. ಕೊನೆಗೂ ಕಾರಣ ಹೇಳಲು ಮುಂದೆ ಬಂದ ಚಂದನ್!

Share :

Published June 10, 2024 at 12:18pm

    ಪ್ರೀತಿಸಿ ಮನೆಯವರ ಒಪ್ಪಿಸಿ ಮದುವೆಯಾದ ಮೇಲೆ ಏನಾಯ್ತು?

    ಕಾನೂನುಬದ್ಧವಾಗಿ ಬೇರೆ, ಬೇರೆಯಾಗಲು ನಿರ್ಧರಿಸಿದ ನಿವೇದಿತಾ

    ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದಕ್ಕೆ ಕಾರಣ ಹೇಳಲಿದ್ದಾರೆ ಚಂದನ್ ಶೆಟ್ಟಿ

ಬೆಂಗಳೂರು: ಕನ್ನಡದ ಱಪರ್ ಚಂದನ್ ಶೆಟ್ಟಿ, ನಿವೇದಿತಾ ಜೋಡಿ ಬೇರೆ, ಬೇರೆ ಆಗಿದ್ದಾಯ್ತು. ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಸಡನ್‌ ಬ್ರೇಕ್ ಆಗಿರುವ ಇವರಿಬ್ಬರು ಕೆಲ ದಿನಗಳಿಂದ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಚಂದನ್, ನಿವೇದಿತಾ ದೂರಾಗಿದ್ದು ಯಾಕೆ? ಪ್ರೀತಿಸಿ ಮನೆಯವರ ಒಪ್ಪಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಈ ಕ್ಯೂಟ್ ಕಪಲ್ ಬಾಳಲ್ಲಿ ಏನಾಯ್ತು ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

ಚಂದನ್ ಶೆಟ್ಟಿ, ನಿವೇದಿತಾ ಗೌಡ ದಿಢೀರನೇ ಫ್ಯಾಮಿಲಿ ಕೋರ್ಟ್ ಹತ್ತಿದ ಮೇಲೆ ಎಲ್ಲರೂ ಶಾಕ್ ಆಗಿದ್ದರು. ಈ ಜೋಡಿ ಬೇರೆ, ಬೇರೆಯಾದ ಸುದ್ದಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿದ್ದಾರೆ. ಹೀಗಾಗಿ ಕೆಲವು ಷರತ್ತುಗಳನ್ನು ಹಾಕಿದ್ದ ಕೌಟುಂಬಿಕ ನ್ಯಾಯಾಲಯ ಇವರಿಗೆ ವಿಚ್ಛೇದನ ನೀಡಿತ್ತು.

ಇದನ್ನೂ ಓದಿ: 6 ತಿಂಗಳ ಹಿಂದೆಯೇ ಡಿವೋರ್ಸ್​ಗೆ ನಿರ್ಧಾರ, ರಾಜಿ ಪಂಚಾಯ್ತಿ ಮಾಡಿದ್ರು; ವಕೀಲೆ ಅನಿತಾ ಏನಂದ್ರು ಗೊತ್ತಾ? 

ಒಂದೇ ದಿನದಲ್ಲಿ ಚಂದನ್ ಶೆಟ್ಟಿ, ನಿವೇದಿತಾ ಜೋಡಿ ವಿಚ್ಛೇದನ ಪಡೆದ ಮೇಲೂ ಸಾಕಷ್ಟು ಗಾಳಿಸುದ್ದಿಗಳು ಹರಿದಾಡುತ್ತಿದೆ. ಬಿಗ್‌ಬಾಸ್ ಮನೆಯಿಂದ ಶುರುವಾದ ಇವರಿಬ್ಬರ ಲವ್ ಸ್ಟೋರಿ ದಿಢೀರನೇ ಬ್ರೇಕ್ ಅಪ್ ಆಗಿದೆ. ಚಂದನ್, ನಿವೇದಿತಾ ಇಬ್ಬರೂ ಅನ್ಯೋನ್ಯವಾಗಿದ್ರೆ ವಿಚ್ಛೇದನಕ್ಕೆ ಯಾಕೆ ನಿರ್ಧಾರ ಮಾಡಿದ್ರು ಅನ್ನೋದು ಕುತೂಹಲಕ್ಕೆ ಕಾರಣವಾಗಿತ್ತು. ಚಂದನ್ ಅವರ ಆಪ್ತರು ನಮಗೂ ಈ ಸುದ್ದಿ ಕೇಳಿ ಶಾಕ್ ಆಯ್ತು. ಚಂದನ್ ಅವರ ಫೋನ್ ಸ್ವಿಚ್ ಆಫ್ ಆಗಿದೆ. ನಮಗೂ ಕಾರಣ ಗೊತ್ತಿಲ್ಲ ಎಂದು ಹೇಳಿದ್ದರು.

ಚಂದನ್, ನಿವೇದಿತಾ ವಿಚ್ಛೇದನ ಪಡೆದ ಮೇಲೆ ಇಬ್ಬರು ನೇರವಾಗಿ ಕಾರಣ ಹೇಳಿಲ್ಲ. ಆದರೆ ಡಿವೋರ್ಸ್‌ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಚಂದನ್, ನಿವೇದಿತಾ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದರು.

ನಿವೇದಿತಾ ಹೇಳಿದ್ದೇನು?
ಈ ದಿನ.. ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರು ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ತಿಳಿಸಿದ್ದರು.

ಇದನ್ನೂ ಓದಿ: ಬೇರೆ, ಬೇರೆ ಆದ ಮೇಲೂ ಮತ್ತೆ ಮುಖಾಮುಖಿ ಆಗ್ತಿದ್ದಾರೆ ಚಂದನ್, ನಿವೇದಿತಾ; ಯಾಕೆ ಗೊತ್ತಾ? 

ಚಂದನ್ ಹೇಳಿದ್ದೇನು?
ಇಂದು, ನಾನು ಮತ್ತು ನಿವೇದಿತಾ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಕಾನೂನುಬದ್ಧವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಸ್ವಂತ ಸಂತೋಷ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುವುದು ಮುಖ್ಯ ಎಂದು ಅರ್ಥಮಾಡಿಕೊಳ್ಳುವ ಮೂಲಕ ನಾವು ನಮ್ಮ ಮದುವೆಯನ್ನು ಉತ್ತಮ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು ಮಾಧ್ಯಮಗಳು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ಬೆಂಬಲವನ್ನು ಕೇಳುತ್ತೇವೆ. ನಾವು ನಮ್ಮ ದಾರಿಯಲ್ಲಿ ಹೋಗುತ್ತಿದ್ದರೂ ಸಹ, ನಾವು ಇನ್ನೂ ಪರಸ್ಪರ ಬಲವಾದ ಸ್ನೇಹ ಮತ್ತು ಗೌರವವನ್ನು ಹೊಂದಿದ್ದೇವೆ. ಈ ಸವಾಲಿನ ಅವಧಿಯಲ್ಲಿ ನಿಮ್ಮ ಬೆಂಬಲ ನಮ್ಮಿಬ್ಬರ ಮೇಲಿರಲಿ ಎಂದು ಚಂದನ್ ಶೆಟ್ಟಿ ಪೋಸ್ಟ್ ಮಾಡಿದ್ದರು.

ಇಷ್ಟೆಲ್ಲಾ ಬೆಳವಣಿಗೆಯ ಬಳಿಕ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆಯಲು ಇಂದು ಚಂದನ್ ಶೆಟ್ಟಿ ಮುಂದಾಗಿದ್ದಾರೆ. ಇಂದು ಮಧ್ಯಾಹ್ನ ಚಂದನ್ ಶೆಟ್ಟಿ ಅವರು ಸುದ್ದಿಗೋಷ್ಟಿಯನ್ನು ಕರೆದಿದ್ದು, ಡಿವೋರ್ಸ್ ವಿಚಾರವಾಗಿ ಮಾಹಿತಿ ನೀಡಲಿದ್ದಾರೆ. ಇಷ್ಟು ದಿನ ಚಂದನ್, ನಿವೇದಿತಾ ದಿಢೀರ್ ಡಿವೋರ್ಸ್ ಪಡೆಯಲು ಕಾರಣವೇನು ಅಂತ ಕೇಳುತ್ತಿದ್ದವರಿಗೆ ಇಂದು ನಿಜವಾದ ಕಾರಣ ಗೊತ್ತಾಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದು ಯಾಕಂದ್ರೆ.. ಕೊನೆಗೂ ಕಾರಣ ಹೇಳಲು ಮುಂದೆ ಬಂದ ಚಂದನ್!

https://newsfirstlive.com/wp-content/uploads/2024/06/Chandan-Shetty-Nivedita-Gowda-5.jpg

    ಪ್ರೀತಿಸಿ ಮನೆಯವರ ಒಪ್ಪಿಸಿ ಮದುವೆಯಾದ ಮೇಲೆ ಏನಾಯ್ತು?

    ಕಾನೂನುಬದ್ಧವಾಗಿ ಬೇರೆ, ಬೇರೆಯಾಗಲು ನಿರ್ಧರಿಸಿದ ನಿವೇದಿತಾ

    ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದಕ್ಕೆ ಕಾರಣ ಹೇಳಲಿದ್ದಾರೆ ಚಂದನ್ ಶೆಟ್ಟಿ

ಬೆಂಗಳೂರು: ಕನ್ನಡದ ಱಪರ್ ಚಂದನ್ ಶೆಟ್ಟಿ, ನಿವೇದಿತಾ ಜೋಡಿ ಬೇರೆ, ಬೇರೆ ಆಗಿದ್ದಾಯ್ತು. ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಸಡನ್‌ ಬ್ರೇಕ್ ಆಗಿರುವ ಇವರಿಬ್ಬರು ಕೆಲ ದಿನಗಳಿಂದ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಚಂದನ್, ನಿವೇದಿತಾ ದೂರಾಗಿದ್ದು ಯಾಕೆ? ಪ್ರೀತಿಸಿ ಮನೆಯವರ ಒಪ್ಪಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಈ ಕ್ಯೂಟ್ ಕಪಲ್ ಬಾಳಲ್ಲಿ ಏನಾಯ್ತು ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

ಚಂದನ್ ಶೆಟ್ಟಿ, ನಿವೇದಿತಾ ಗೌಡ ದಿಢೀರನೇ ಫ್ಯಾಮಿಲಿ ಕೋರ್ಟ್ ಹತ್ತಿದ ಮೇಲೆ ಎಲ್ಲರೂ ಶಾಕ್ ಆಗಿದ್ದರು. ಈ ಜೋಡಿ ಬೇರೆ, ಬೇರೆಯಾದ ಸುದ್ದಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿದ್ದಾರೆ. ಹೀಗಾಗಿ ಕೆಲವು ಷರತ್ತುಗಳನ್ನು ಹಾಕಿದ್ದ ಕೌಟುಂಬಿಕ ನ್ಯಾಯಾಲಯ ಇವರಿಗೆ ವಿಚ್ಛೇದನ ನೀಡಿತ್ತು.

ಇದನ್ನೂ ಓದಿ: 6 ತಿಂಗಳ ಹಿಂದೆಯೇ ಡಿವೋರ್ಸ್​ಗೆ ನಿರ್ಧಾರ, ರಾಜಿ ಪಂಚಾಯ್ತಿ ಮಾಡಿದ್ರು; ವಕೀಲೆ ಅನಿತಾ ಏನಂದ್ರು ಗೊತ್ತಾ? 

ಒಂದೇ ದಿನದಲ್ಲಿ ಚಂದನ್ ಶೆಟ್ಟಿ, ನಿವೇದಿತಾ ಜೋಡಿ ವಿಚ್ಛೇದನ ಪಡೆದ ಮೇಲೂ ಸಾಕಷ್ಟು ಗಾಳಿಸುದ್ದಿಗಳು ಹರಿದಾಡುತ್ತಿದೆ. ಬಿಗ್‌ಬಾಸ್ ಮನೆಯಿಂದ ಶುರುವಾದ ಇವರಿಬ್ಬರ ಲವ್ ಸ್ಟೋರಿ ದಿಢೀರನೇ ಬ್ರೇಕ್ ಅಪ್ ಆಗಿದೆ. ಚಂದನ್, ನಿವೇದಿತಾ ಇಬ್ಬರೂ ಅನ್ಯೋನ್ಯವಾಗಿದ್ರೆ ವಿಚ್ಛೇದನಕ್ಕೆ ಯಾಕೆ ನಿರ್ಧಾರ ಮಾಡಿದ್ರು ಅನ್ನೋದು ಕುತೂಹಲಕ್ಕೆ ಕಾರಣವಾಗಿತ್ತು. ಚಂದನ್ ಅವರ ಆಪ್ತರು ನಮಗೂ ಈ ಸುದ್ದಿ ಕೇಳಿ ಶಾಕ್ ಆಯ್ತು. ಚಂದನ್ ಅವರ ಫೋನ್ ಸ್ವಿಚ್ ಆಫ್ ಆಗಿದೆ. ನಮಗೂ ಕಾರಣ ಗೊತ್ತಿಲ್ಲ ಎಂದು ಹೇಳಿದ್ದರು.

ಚಂದನ್, ನಿವೇದಿತಾ ವಿಚ್ಛೇದನ ಪಡೆದ ಮೇಲೆ ಇಬ್ಬರು ನೇರವಾಗಿ ಕಾರಣ ಹೇಳಿಲ್ಲ. ಆದರೆ ಡಿವೋರ್ಸ್‌ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಚಂದನ್, ನಿವೇದಿತಾ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದರು.

ನಿವೇದಿತಾ ಹೇಳಿದ್ದೇನು?
ಈ ದಿನ.. ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರು ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ತಿಳಿಸಿದ್ದರು.

ಇದನ್ನೂ ಓದಿ: ಬೇರೆ, ಬೇರೆ ಆದ ಮೇಲೂ ಮತ್ತೆ ಮುಖಾಮುಖಿ ಆಗ್ತಿದ್ದಾರೆ ಚಂದನ್, ನಿವೇದಿತಾ; ಯಾಕೆ ಗೊತ್ತಾ? 

ಚಂದನ್ ಹೇಳಿದ್ದೇನು?
ಇಂದು, ನಾನು ಮತ್ತು ನಿವೇದಿತಾ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಕಾನೂನುಬದ್ಧವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಸ್ವಂತ ಸಂತೋಷ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುವುದು ಮುಖ್ಯ ಎಂದು ಅರ್ಥಮಾಡಿಕೊಳ್ಳುವ ಮೂಲಕ ನಾವು ನಮ್ಮ ಮದುವೆಯನ್ನು ಉತ್ತಮ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು ಮಾಧ್ಯಮಗಳು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ಬೆಂಬಲವನ್ನು ಕೇಳುತ್ತೇವೆ. ನಾವು ನಮ್ಮ ದಾರಿಯಲ್ಲಿ ಹೋಗುತ್ತಿದ್ದರೂ ಸಹ, ನಾವು ಇನ್ನೂ ಪರಸ್ಪರ ಬಲವಾದ ಸ್ನೇಹ ಮತ್ತು ಗೌರವವನ್ನು ಹೊಂದಿದ್ದೇವೆ. ಈ ಸವಾಲಿನ ಅವಧಿಯಲ್ಲಿ ನಿಮ್ಮ ಬೆಂಬಲ ನಮ್ಮಿಬ್ಬರ ಮೇಲಿರಲಿ ಎಂದು ಚಂದನ್ ಶೆಟ್ಟಿ ಪೋಸ್ಟ್ ಮಾಡಿದ್ದರು.

ಇಷ್ಟೆಲ್ಲಾ ಬೆಳವಣಿಗೆಯ ಬಳಿಕ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆಯಲು ಇಂದು ಚಂದನ್ ಶೆಟ್ಟಿ ಮುಂದಾಗಿದ್ದಾರೆ. ಇಂದು ಮಧ್ಯಾಹ್ನ ಚಂದನ್ ಶೆಟ್ಟಿ ಅವರು ಸುದ್ದಿಗೋಷ್ಟಿಯನ್ನು ಕರೆದಿದ್ದು, ಡಿವೋರ್ಸ್ ವಿಚಾರವಾಗಿ ಮಾಹಿತಿ ನೀಡಲಿದ್ದಾರೆ. ಇಷ್ಟು ದಿನ ಚಂದನ್, ನಿವೇದಿತಾ ದಿಢೀರ್ ಡಿವೋರ್ಸ್ ಪಡೆಯಲು ಕಾರಣವೇನು ಅಂತ ಕೇಳುತ್ತಿದ್ದವರಿಗೆ ಇಂದು ನಿಜವಾದ ಕಾರಣ ಗೊತ್ತಾಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More