/newsfirstlive-kannada/media/post_attachments/wp-content/uploads/2024/12/Protest.jpg)
ಹೈದರಾಬಾದ್: ಪುಷ್ಪಾ 2 ವಿವಾದದ ಬಳಿಕ ನಟ ಅಲ್ಲು ಅರ್ಜುನ್ ವಿರುದ್ಧ ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಹಿರಿಹ ರಾಜಕಾರಣಿಗಳು ಆಕ್ರೋಶ ಹೊರಹಾಕಿದ್ದಾರೆ. ಇಷ್ಟೇ ಅಲ್ಲ ಹೈದರಾಬಾದ್ನಲ್ಲಿರೋ ನಟ ಅಲ್ಲು ಅರ್ಜುನ್ ಜೂಬಿಲಿ ಹಿಲ್ಸ್ ನಿವಾಸದ ಮೇಲೆ ಉಸ್ಮಾನಿಯಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಈ ಸಂಬಂಧ ಮಾತಾಡಿದ ಹೈದರಾಬಾದ್ ಪೊಲೀಸ್ರು ಕೇಸ್ನಲ್ಲಿ ಉಸ್ಮಾನಿಯಾ ಯೂನಿವರ್ಸಿಟಿ Joint Action Committee ( JAC) ಅನ್ನೋ ಸಂಘಟನೆಗೆ ಸೇರಿದ 8 ಮಂದಿ ವಿದ್ಯಾರ್ಥಿ ಹೋರಾಟಗಾರರನ್ನು ಬಂಧಿಸಲಾಗಿದೆ. ಇವರು ಅಲ್ಲು ಅರ್ಜುನ್ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ ಎಂದರು.
ಏನಿದು ಪುಷ್ಪಾ 2 ವಿವಾದ?
ಡಿಸೆಂಬರ್ 4ನೇ ತಾರೀಕು ಥಿಯೇಟರ್ ಒಂದರ ಬಳಿಕ ಪುಷ್ಪಾ 2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಆಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿದ್ದರು. ಈಗ ಉಸ್ಮಾನಿಯಾ ವಿವಿ Joint Action Committee ವಿದ್ಯಾರ್ಥಿ ಹೋರಾಟಗಾರರು ಅಲ್ಲು ಅರ್ಜುನ್ ವಿರುದ್ಧ ಹೋರಾಟ ನಡೆಸಿದ್ದರು. ಅಲ್ಲು ಅರ್ಜುನ್ ಮನೆ ಮೇಲೆ ಮೇಲೆ ಕಲ್ಲು ತೂರಾಟ ನಡೆಸಿ ಎಲ್ಲರ ಗಮನ ಸೆಳೆದರು.
ತೆಲಂಗಾಣ ವಿಧಾನಸಭೆಯಲ್ಲೂ ಪುಷ್ಪ 2 ಪ್ರಕರಣ ಪ್ರತಿಧ್ವನಿಸಿದೆ. ಸಿಎಂ ರೇವಂತ್ ರೆಡ್ಡಿ ಅವರೇ ಅಲ್ಲು ಅರ್ಜುನ್ ವಿರುದ್ಧ ಹೇಳಿಕೆ ನೀಡಿದ್ರು. ಸಿಎಂ ಹೇಳಿಕೆ ಬಳಿಕ ಅಲ್ಲು ಅರ್ಜುನ್ ಜುಬ್ಲಿ ಹಿಲ್ಸ್ನಲ್ಲಿರೋ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಕೌಂಟರ್ ನೀಡಿದ್ರು.
ಇದನ್ನೂ ಓದಿ: ಟೀಮ್ ಇಂಡಿಯಾದಿಂದ ರಾಹುಲ್ಗೆ ಕೊಕ್; ಆರ್ಸಿಬಿ ಸ್ಟಾರ್ ಆಟಗಾರನಿಗೆ ಜಾಕ್ಪಾಟ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ