ಜೂನ್ 30ನೇ ತಾರೀಕಿನಂದು ನಡೆಯಲಿದೆ ಎಂಎಲ್ಸಿ ಚುನಾವಣೆ
ಕಾಂಗ್ರೆಸ್ನಿಂದ 3 ಅಭ್ಯರ್ಥಿಗಳಿಗೆ ಎಂಎಲ್ಸಿ ಟಿಕೆಟ್ ಘೋಷಣೆ..!
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಂಎಲ್ಸಿ ಟಿಕೆಟ್ ಕೊಟ್ಟ ಕಾಂಗ್ರೆಸ್!
ಬೆಂಗಳೂರು: ಕಾಂಗ್ರೆಸ್ ಎಂಎಲ್ಸಿ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾಧ್ಯಮದವರೊಂದಿಗೆ ಮಾತಾಡಿದ್ದಾರೆ. ನಾನು ಯಾವುದೇ ಕಂಡೀಷನ್ ಹಾಕಿ ಕಾಂಗ್ರೆಸ್ಸಿಗೆ ಬಂದಿಲ್ಲ. ಹೀಗಾಗಿ ಪಕ್ಷ ನನಗೆ ಸೂಕ್ತ ಸ್ಥಾನಮಾನ ನೀಡಿ ನಡೆಸಿಕೊಳ್ಳುತ್ತದೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ ಜಗದೀಶ್ ಶೆಟ್ಟರ್.
ನಾನು ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸೋ ತೀರ್ಮಾನ ಇನ್ನೂ ಮಾಡಿಲ್ಲ. ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಬದ್ಧ. ಮುಂದೆ ಕೂಡ ಕಾಂಗ್ರೆಸ್ ನನ್ನನ್ನು ಚೆನ್ನಾಗಿ ನಡೆಸಿಕೊಳ್ಳಲಿದೆ ಎಂಬ ನಂಬಿಕೆಯಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಬಿಜೆಪಿ ಟಿಕೆಟ್ ನಿರಾಕರಿಸಿದ ಕಾರಣ ಕಾಂಗ್ರೆಸ್ನಿಂದಲೇ ಜಗದೀಶ್ ಶೆಟ್ಟರ್ ಸ್ಪರ್ಧಿಸಿ ಸೋತಿದ್ದರು.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ
ಜೂನ್ 30ನೇ ತಾರೀಕಿನಂದು ನಡೆಯಲಿದೆ ಎಂಎಲ್ಸಿ ಚುನಾವಣೆ
ಕಾಂಗ್ರೆಸ್ನಿಂದ 3 ಅಭ್ಯರ್ಥಿಗಳಿಗೆ ಎಂಎಲ್ಸಿ ಟಿಕೆಟ್ ಘೋಷಣೆ..!
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಂಎಲ್ಸಿ ಟಿಕೆಟ್ ಕೊಟ್ಟ ಕಾಂಗ್ರೆಸ್!
ಬೆಂಗಳೂರು: ಕಾಂಗ್ರೆಸ್ ಎಂಎಲ್ಸಿ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾಧ್ಯಮದವರೊಂದಿಗೆ ಮಾತಾಡಿದ್ದಾರೆ. ನಾನು ಯಾವುದೇ ಕಂಡೀಷನ್ ಹಾಕಿ ಕಾಂಗ್ರೆಸ್ಸಿಗೆ ಬಂದಿಲ್ಲ. ಹೀಗಾಗಿ ಪಕ್ಷ ನನಗೆ ಸೂಕ್ತ ಸ್ಥಾನಮಾನ ನೀಡಿ ನಡೆಸಿಕೊಳ್ಳುತ್ತದೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ ಜಗದೀಶ್ ಶೆಟ್ಟರ್.
ನಾನು ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸೋ ತೀರ್ಮಾನ ಇನ್ನೂ ಮಾಡಿಲ್ಲ. ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಬದ್ಧ. ಮುಂದೆ ಕೂಡ ಕಾಂಗ್ರೆಸ್ ನನ್ನನ್ನು ಚೆನ್ನಾಗಿ ನಡೆಸಿಕೊಳ್ಳಲಿದೆ ಎಂಬ ನಂಬಿಕೆಯಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಬಿಜೆಪಿ ಟಿಕೆಟ್ ನಿರಾಕರಿಸಿದ ಕಾರಣ ಕಾಂಗ್ರೆಸ್ನಿಂದಲೇ ಜಗದೀಶ್ ಶೆಟ್ಟರ್ ಸ್ಪರ್ಧಿಸಿ ಸೋತಿದ್ದರು.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ