newsfirstkannada.com

BREAKING: ಆಪರೇಷನ್ ಜಗದೀಶ್ ಶೆಟ್ಟರ್ ಸಕ್ಸಸ್; ಕಾಂಗ್ರೆಸ್‌ನ ಮೊದಲ ವಿಕೆಟ್ ಪತನ

Share :

Published January 25, 2024 at 12:43pm

Update January 25, 2024 at 12:49pm

    ಜಗದೀಶ್ ಶೆಟ್ಟರ್‌ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪಡೆ

    ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿ ತಲುಪಿದ ಜಗದೀಶ್ ಶೆಟ್ಟರ್

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಪರೇಷನ್ ಸಕ್ಸಸ್

ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರು ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ್ದು, ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ ಆಗುತ್ತಿದ್ದಾರೆ.

ಇನ್ನು ಕೆಲವೇ ನಿಮಿಷಗಳಲ್ಲಿ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಮರು ಸೇರ್ಪಡೆ ಆಗುತ್ತಾರೆ ಎನ್ನಲಾಗಿದೆ. ದೆಹಲಿ ಬಿಜೆಪಿಯ ಮುಖ್ಯ ಕಚೇರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕೂಡ ಆಗಮಿಸಿದ್ದಾರೆ.

ಇದನ್ನೂ ಓದಿ: BREAKING: ಕಾಂಗ್ರೆಸ್ ಪಕ್ಷ ಬಿಡ್ತಾರಾ ಜಗದೀಶ್ ಶೆಟ್ಟರ್‌? ದೆಹಲಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ

ದೆಹಲಿಗೆ ತೆರಳಿದ್ದ ಜಗದೀಶ್‌ ಶೆಟ್ಟರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಪಕ್ಷ ಸೇರ್ಪಡೆ ಕುರಿತಂತೆ ಅಮಿತ್ ಶಾ ಜೊತೆ ಮಹತ್ವದ ಮಾತುಕತೆ ನಡೆಸಿದ್ದು ಪಕ್ಷ ಸೇರ್ಪಡೆಯಾಗುವುದು ಖಚಿತ ಎನ್ನಲಾಗಿದೆ.


ಇದೇ ವೇಳೆ ದೆಹಲಿಗೆ ತೆರಳಿದ್ದ ಬಿ.ಎಸ್ ಯಡಿಯೂರಪ್ಪ ಮತ್ತು ಬಿ.ವೈ ವಿಜಯೇಂದ್ರ ಅವರು ಅಮಿತ್ ಶಾ ಸೇರಿ ಹಲವು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಆಪರೇಷನ್ ಜಗದೀಶ್ ಶೆಟ್ಟರ್ ಸಕ್ಸಸ್; ಕಾಂಗ್ರೆಸ್‌ನ ಮೊದಲ ವಿಕೆಟ್ ಪತನ

https://newsfirstlive.com/wp-content/uploads/2024/01/Sheetar.jpg

    ಜಗದೀಶ್ ಶೆಟ್ಟರ್‌ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪಡೆ

    ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿ ತಲುಪಿದ ಜಗದೀಶ್ ಶೆಟ್ಟರ್

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಪರೇಷನ್ ಸಕ್ಸಸ್

ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಅವರು ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ್ದು, ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ ಆಗುತ್ತಿದ್ದಾರೆ.

ಇನ್ನು ಕೆಲವೇ ನಿಮಿಷಗಳಲ್ಲಿ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಮರು ಸೇರ್ಪಡೆ ಆಗುತ್ತಾರೆ ಎನ್ನಲಾಗಿದೆ. ದೆಹಲಿ ಬಿಜೆಪಿಯ ಮುಖ್ಯ ಕಚೇರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕೂಡ ಆಗಮಿಸಿದ್ದಾರೆ.

ಇದನ್ನೂ ಓದಿ: BREAKING: ಕಾಂಗ್ರೆಸ್ ಪಕ್ಷ ಬಿಡ್ತಾರಾ ಜಗದೀಶ್ ಶೆಟ್ಟರ್‌? ದೆಹಲಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ

ದೆಹಲಿಗೆ ತೆರಳಿದ್ದ ಜಗದೀಶ್‌ ಶೆಟ್ಟರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಪಕ್ಷ ಸೇರ್ಪಡೆ ಕುರಿತಂತೆ ಅಮಿತ್ ಶಾ ಜೊತೆ ಮಹತ್ವದ ಮಾತುಕತೆ ನಡೆಸಿದ್ದು ಪಕ್ಷ ಸೇರ್ಪಡೆಯಾಗುವುದು ಖಚಿತ ಎನ್ನಲಾಗಿದೆ.


ಇದೇ ವೇಳೆ ದೆಹಲಿಗೆ ತೆರಳಿದ್ದ ಬಿ.ಎಸ್ ಯಡಿಯೂರಪ್ಪ ಮತ್ತು ಬಿ.ವೈ ವಿಜಯೇಂದ್ರ ಅವರು ಅಮಿತ್ ಶಾ ಸೇರಿ ಹಲವು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More