/newsfirstlive-kannada/media/post_attachments/wp-content/uploads/2024/04/JANARDANA-REDDY.jpg)
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಅಕ್ರಮ ಗಣಿಗಾರಿಕೆ ಕೇಸ್​​ ಹಿನ್ನೆಲೆ ಕೋರ್ಟ್​​ ಗಾಲಿ ಜನಾರ್ದನ ರೆಡ್ಡಿ ಅವರಿಗೆ ನಿರ್ಬಂಧ ಹೇರಿತ್ತು. ಬಳ್ಳಾರಿಗೆ ತೆರಳದಂತೆ ನಿರ್ಬಂಧ ವಿಧಿಸಿತ್ತು. ಆ ಬಳಿಕ ಸುಪ್ರೀಂ ಕೋರ್ಟ್​​ನ ನ್ಯಾಯಮೂರ್ತಿ ವಿನೀತ್ ಶರಣ್ ಅವರಿದ್ಧ ನ್ಯಾಯಪೀಠ, ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಷರತ್ತುಬದ್ಧ ಅನುಮತಿ ನೀಡಿತ್ತು.
ಇದನ್ನೂ ಓದಿ: ಭಯಾನಕವಾಗಿ ಪಲ್ಟಿಯಾದ KSRTC ಬಸ್​.. 20ಕ್ಕೂ ಹೆಚ್ಚು ಜನರು ಗಂಭೀರ
ಇದೀಗ ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಪೂರ್ಣ ಅನುಮತಿ ನೀಡಿದೆ. ನ್ಯಾ. ಎಂ ಎಂ ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. ಗಾಲಿ ಜನಾರ್ದನ ರೆಡ್ಡಿಯವರು ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರೆಳಲು ಅವಕಾಶ ಒದಗಿಸಿದೆ.
ಈ ಹಿಂದೆ ಬಳ್ಳಾರಿಗೆ ಹೋದಾಗಲೆಲ್ಲಾ ಎಸ್ಪಿಗೆ ಮಾಹಿತಿ ನೀಡುವಂತೆ ಷರತ್ತು ವಿಧಿಸಲಾಗಿತ್ತು. ಈ ಕುರಿತಂತೆ ಮತ್ತೆ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್​ ಜಾಮೀನು ಷರತ್ತು ಮಾರ್ಪಾಡಿಸಿತ್ತು. ಆದರೀಗ ಪೂರ್ವಾನುಮತಿ ಇಲ್ಲದೆ ತೆರಳಲು ಅವಕಾಶ ಒದಗಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us