newsfirstkannada.com

‘ಹಾಸನ’ದ ಹೋರಾಟದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ; ಹೈಕೋರ್ಟ್ ಮಹತ್ವದ ಆದೇಶ

Share :

11-09-2023

    ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಶಾಕ್ ಕೊಟ್ಟ ಹೈಕೋರ್ಟ್

    ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ತಡೆಗೆ ಮನವಿ

    ಸೆಪ್ಟೆಂಬರ್ 1ರಂದು ಅನರ್ಹಗೊಳಿಸಿ ಆದೇಶಿಸಿರುವ ಹೈಕೋರ್ಟ್

ಹಾಸನ ಸಂಸದ ಸ್ಥಾನದಿಂದ ಅನರ್ಹರಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಇದೇ ಸೆಪ್ಟೆಂಬರ್ 1 ರಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿತ್ತು.

ಇದನ್ನೂ ಓದಿ: BREAKING: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಸಂಸದ ಸ್ಥಾನದಿಂದ ಅನರ್ಹ ಮಾಡಿ ಹೈಕೋರ್ಟ್​ ಆದೇಶ

ಸಂಸದ ಸ್ಥಾನದಿಂದ ಅಸಿಂಧುಗೊಳಿಸಿದ ವಿಚಾರಕ್ಕೆ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ಕೋರಲಾಗಿತ್ತು. ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಭಾರೀ ಹಿನ್ನಡೆಯಾಗಿದೆ.

ಸಂಸದ ಸ್ಥಾನ ಕಳೆದುಕೊಂಡಿದ್ದು ಯಾಕೆ? 

2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದ್ದರು. ಈ ವೇಳೆ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಮಾಡಿರೋ ಆರೋಪ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಆದಾಯ ತೆರಿಗೆ ವಿವರಗಳ ಸಂಬಂಧ ನಕಲಿ ದಾಖಲೆ ಸಲ್ಲಿಸಿರೋ ಗಂಭೀರ ಆರೋಪ ಮಾಡಿದ್ದರು. ಪ್ರಜ್ವಲ್‌ ಆಯ್ಕೆಯನ್ನು ಅಸಿಂಧು ಮಾಡಿ ಎಂದು ಹೈಕೋರ್ಟ್​​ನಲ್ಲಿ ಎ. ಮಂಜು ಮತ್ತು ದೇವರಾಜೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಅನರ್ಹಗೊಳಿಸಿ ಮಹತ್ವದ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪಿನಿಂದಾಗಿ ಪ್ರಜ್ವಲ್ ರೇವಣ್ಣ ಅವರು ಮುಂದಿನ 6 ವರ್ಷ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಹಾಸನ’ದ ಹೋರಾಟದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ; ಹೈಕೋರ್ಟ್ ಮಹತ್ವದ ಆದೇಶ

https://newsfirstlive.com/wp-content/uploads/2023/09/prajavl-revanna-1.jpg

    ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಶಾಕ್ ಕೊಟ್ಟ ಹೈಕೋರ್ಟ್

    ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ತಡೆಗೆ ಮನವಿ

    ಸೆಪ್ಟೆಂಬರ್ 1ರಂದು ಅನರ್ಹಗೊಳಿಸಿ ಆದೇಶಿಸಿರುವ ಹೈಕೋರ್ಟ್

ಹಾಸನ ಸಂಸದ ಸ್ಥಾನದಿಂದ ಅನರ್ಹರಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಇದೇ ಸೆಪ್ಟೆಂಬರ್ 1 ರಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿತ್ತು.

ಇದನ್ನೂ ಓದಿ: BREAKING: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಸಂಸದ ಸ್ಥಾನದಿಂದ ಅನರ್ಹ ಮಾಡಿ ಹೈಕೋರ್ಟ್​ ಆದೇಶ

ಸಂಸದ ಸ್ಥಾನದಿಂದ ಅಸಿಂಧುಗೊಳಿಸಿದ ವಿಚಾರಕ್ಕೆ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ಕೋರಲಾಗಿತ್ತು. ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಭಾರೀ ಹಿನ್ನಡೆಯಾಗಿದೆ.

ಸಂಸದ ಸ್ಥಾನ ಕಳೆದುಕೊಂಡಿದ್ದು ಯಾಕೆ? 

2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದ್ದರು. ಈ ವೇಳೆ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಮಾಡಿರೋ ಆರೋಪ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಆದಾಯ ತೆರಿಗೆ ವಿವರಗಳ ಸಂಬಂಧ ನಕಲಿ ದಾಖಲೆ ಸಲ್ಲಿಸಿರೋ ಗಂಭೀರ ಆರೋಪ ಮಾಡಿದ್ದರು. ಪ್ರಜ್ವಲ್‌ ಆಯ್ಕೆಯನ್ನು ಅಸಿಂಧು ಮಾಡಿ ಎಂದು ಹೈಕೋರ್ಟ್​​ನಲ್ಲಿ ಎ. ಮಂಜು ಮತ್ತು ದೇವರಾಜೇಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಅನರ್ಹಗೊಳಿಸಿ ಮಹತ್ವದ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪಿನಿಂದಾಗಿ ಪ್ರಜ್ವಲ್ ರೇವಣ್ಣ ಅವರು ಮುಂದಿನ 6 ವರ್ಷ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More