ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದ ಸೂರಜ್ ರೇವಣ್ಣ
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿದ್ದ MLC
2-3 ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡ್ತೀನಿ ಎಂದ ಸೂರಜ್
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿದ್ದ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದ ಸೂರಜ್ ಅವರನ್ನು ಅಭಿಮಾನಿಗಳು ಜೈಕಾರ ಹಾಕಿ ಬರಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಸಾಧು ಕೋಕಿಲ ಭೇಟಿಗೆ ನಿರಾಕರಿಸಿದ ದರ್ಶನ್.. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಸಲಿಗೆ ಆಗಿದ್ದೇನು?
ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದ ಸೂರಜ್ ರೇವಣ್ಣ ಅವರು ತಮ್ಮ ವಿರುದ್ಧದ ಕೇಳಿ ಬಂದ ಆರೋಪಗಳ ಬಗ್ಗೆ ಮಾತನಾಡಿದ್ದಾರೆ. ನಾನೇನು ತಪ್ಪು ಮಾಡಿಲ್ಲ. ತನಿಖಾಧಿಕಾರಿಗಳಿಗೆ ಸಹಕಾರ ಕೊಟ್ಟಿದ್ದೀವಿ. ಇದು ನಮ್ಮ ವಿರುದ್ಧ ಮಾಡಿರುವ ಷಡ್ಯಂತ್ರ ಎಂದಿದ್ದಾರೆ.
ದೂರು ಕೊಟ್ಟಿರುವ ಶಿವಕುಮಾರ್ ಎಂಬಾತ ನನ್ನ ಆಪ್ತನಲ್ಲ. ನಮಗೆ ಆ ರೀತಿಯ ಯಾರು ಕಾರು ಚಾಲಕರಿಲ್ಲ. ಎರಡೂ ಮೂರು ದಿನ ಆಗಲಿ ಎಲ್ಲವನ್ನು ಮಾತನಾಡುತ್ತೇನೆ. ಇದು ರಾಜಕೀಯವಾಗಿ ಮಾಡಿರುವ ಷಡ್ಯಂತ್ರ. ಹಾಸನ ಜಿಲ್ಲೆಯಲ್ಲಿ ರಾಜಕೀಯವಾಗಿ ನಮ್ಮ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ.
ಇದನ್ನೂ ಓದಿ: ಬಂಗಾರ ಪ್ರಿಯರಿಗೆ ಗುಡ್ನ್ಯೂಸ್.. ಬಜೆಟ್ 2024ನಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಎಷ್ಟು?
ಎರಡು ಮೂರು ದಿನದಲ್ಲಿ ತಕ್ಕ ಉತ್ತರ!
ಇದೇ ವೇಳೆ ಸತ್ಯವನ್ನು ಜಾಸ್ತಿ ದಿನ ಮುಚ್ಚಿಡೋಕ್ಕಾಗಲ್ಲ. ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಸುಳ್ಳು ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ. ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡ್ತೀನಿ. ತಪ್ಪು ಮಾಡಿಲ್ಲ ಅನ್ನೋ ವಿಶ್ವಾಸವಿದೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ. ಇದು ಕೇಸ್ ಅಲ್ಲ ಇದು ಷಡ್ಯಂತ್ರ ಕುತಂತ್ರ. ಇದರಿಂದ ಪರಿಪೂರ್ಣವಾಗಿ ಹೊರಬರ್ತೀನಿ. ಹಾಸನ ಜಿಲ್ಲೆಯಲ್ಲಿ ರೇವಣ್ಣರಿಗಾಗಲಿ ನಮಗಾಗಲಿ ಯಾವುದೇ ಕಪ್ಪುಚುಕ್ಕೆ ಇಲ್ಲ. ರಾಜಕೀಯವಾಗಿ ಹಾಸನ ಜಿಲ್ಲೆಯಲ್ಲಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರ ಅಷ್ಟೇ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದ ಸೂರಜ್ ರೇವಣ್ಣ
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿದ್ದ MLC
2-3 ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡ್ತೀನಿ ಎಂದ ಸೂರಜ್
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿದ್ದ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದ ಸೂರಜ್ ಅವರನ್ನು ಅಭಿಮಾನಿಗಳು ಜೈಕಾರ ಹಾಕಿ ಬರಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಸಾಧು ಕೋಕಿಲ ಭೇಟಿಗೆ ನಿರಾಕರಿಸಿದ ದರ್ಶನ್.. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಸಲಿಗೆ ಆಗಿದ್ದೇನು?
ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದ ಸೂರಜ್ ರೇವಣ್ಣ ಅವರು ತಮ್ಮ ವಿರುದ್ಧದ ಕೇಳಿ ಬಂದ ಆರೋಪಗಳ ಬಗ್ಗೆ ಮಾತನಾಡಿದ್ದಾರೆ. ನಾನೇನು ತಪ್ಪು ಮಾಡಿಲ್ಲ. ತನಿಖಾಧಿಕಾರಿಗಳಿಗೆ ಸಹಕಾರ ಕೊಟ್ಟಿದ್ದೀವಿ. ಇದು ನಮ್ಮ ವಿರುದ್ಧ ಮಾಡಿರುವ ಷಡ್ಯಂತ್ರ ಎಂದಿದ್ದಾರೆ.
ದೂರು ಕೊಟ್ಟಿರುವ ಶಿವಕುಮಾರ್ ಎಂಬಾತ ನನ್ನ ಆಪ್ತನಲ್ಲ. ನಮಗೆ ಆ ರೀತಿಯ ಯಾರು ಕಾರು ಚಾಲಕರಿಲ್ಲ. ಎರಡೂ ಮೂರು ದಿನ ಆಗಲಿ ಎಲ್ಲವನ್ನು ಮಾತನಾಡುತ್ತೇನೆ. ಇದು ರಾಜಕೀಯವಾಗಿ ಮಾಡಿರುವ ಷಡ್ಯಂತ್ರ. ಹಾಸನ ಜಿಲ್ಲೆಯಲ್ಲಿ ರಾಜಕೀಯವಾಗಿ ನಮ್ಮ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ.
ಇದನ್ನೂ ಓದಿ: ಬಂಗಾರ ಪ್ರಿಯರಿಗೆ ಗುಡ್ನ್ಯೂಸ್.. ಬಜೆಟ್ 2024ನಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಎಷ್ಟು?
ಎರಡು ಮೂರು ದಿನದಲ್ಲಿ ತಕ್ಕ ಉತ್ತರ!
ಇದೇ ವೇಳೆ ಸತ್ಯವನ್ನು ಜಾಸ್ತಿ ದಿನ ಮುಚ್ಚಿಡೋಕ್ಕಾಗಲ್ಲ. ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಸುಳ್ಳು ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ. ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡ್ತೀನಿ. ತಪ್ಪು ಮಾಡಿಲ್ಲ ಅನ್ನೋ ವಿಶ್ವಾಸವಿದೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ. ಇದು ಕೇಸ್ ಅಲ್ಲ ಇದು ಷಡ್ಯಂತ್ರ ಕುತಂತ್ರ. ಇದರಿಂದ ಪರಿಪೂರ್ಣವಾಗಿ ಹೊರಬರ್ತೀನಿ. ಹಾಸನ ಜಿಲ್ಲೆಯಲ್ಲಿ ರೇವಣ್ಣರಿಗಾಗಲಿ ನಮಗಾಗಲಿ ಯಾವುದೇ ಕಪ್ಪುಚುಕ್ಕೆ ಇಲ್ಲ. ರಾಜಕೀಯವಾಗಿ ಹಾಸನ ಜಿಲ್ಲೆಯಲ್ಲಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರ ಅಷ್ಟೇ ಎಂದು ಸೂರಜ್ ರೇವಣ್ಣ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ