newsfirstkannada.com

ಗುತ್ತಿಗೆದಾರರ ಬಾಕಿ ಬಿಲ್ ಕೊಡಲು ಲಂಚಕ್ಕೆ ಬೇಡಿಕೆಯಿಟ್ರಾ ಡಿಕೆಶಿ? ಜೆಡಿಎಸ್​​ನಿಂದ ಗಂಭೀರ ಆರೋಪ

Share :

08-08-2023

    ಡಿಸಿಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ

    ಡಿಕೆಶಿ ವಿರುದ್ಧ ಜನತಾದಳ ಕೆಂಡಾಮಂಡಲ

    ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್​ ಸವಾಲ್​​​

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಕೊಡಲು ಉಪ‌ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಅವರು ಲಂಚಕ್ಕೆ ಬೇಡಿಕೆ‌ ಇಟ್ಟಿದ್ದಾರೆ ಎಂದು ಗುತ್ತಿಗೆದಾರರೇ ಅರೋಪಿಸಿದ್ದಾರೆ. ಒಂದಾದ ಮೇಲೊಂದರಂತೆ ಕಾಂಗ್ರೆಸ್​ ಸರ್ಕಾರದ ಸಚಿವರ ಮೇಲೆ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಲೇ ಇವೆ. ಇದೀಗ ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಸರದಿ ಎಂದು ಜೆಡಿಎಸ್​​ ಟ್ವೀಟ್​ ಮಾಡಿದೆ.

ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಜೆಡಿಎಸ್​, ಇದೆಲ್ಲಾ ತಿಳಿದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಮುಚ್ಚಿ ಕುಳಿತಿದ್ದಾರೆ. ಇದನ್ನು ನೋಡಿದರೆ ಇದರಲ್ಲಿ ಅವರ ಪಾಲು ಇರುವಂತೆ ತೋರುತ್ತದೆ. ಇಲ್ಲದಿದ್ದರೆ ಈ ಎಲ್ಲಾ ಆರೋಪಗಳಿಗೆ ಸೂಕ್ತ ತನಿಖೆ ನಡೆಸುವುದರ ಬದಲು ಸಮರ್ಥಿಸಿಕೊಳ್ಳುತ್ತಿರಲಿಲ್ಲ ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲನೆಯ ದಿನವೇ ಸಮರ್ಥವಾಗಿ ಜಾರಿ ಮಾಡಿದ ಏಕೈಕ ಗ್ಯಾರಂಟಿ ಎಂದರೆ ಅದು ‘ಭ್ರಷ್ಟಾಚಾರ’. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ, ದುರಾಡಳಿತ ನೋಡಿ ಈಗಾಗಲೇ ಅಧಿಕಾರಕ್ಕೆ ತಂದ ತಪ್ಪಿಗೆ ಪಶ್ಚಾತ್ತಾಪ ಪಡುತ್ತಿರುವ ರಾಜ್ಯದ ಜನರೇ ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಮತ್ತೊಂದು ಟ್ವೀಟ್​ನಲ್ಲಿ ಕುಟುಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

ಗುತ್ತಿಗೆದಾರರ ಬಾಕಿ ಬಿಲ್ ಕೊಡಲು ಲಂಚಕ್ಕೆ ಬೇಡಿಕೆಯಿಟ್ರಾ ಡಿಕೆಶಿ? ಜೆಡಿಎಸ್​​ನಿಂದ ಗಂಭೀರ ಆರೋಪ

https://newsfirstlive.com/wp-content/uploads/2023/07/DK_Shivkumar-2.jpg

    ಡಿಸಿಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ

    ಡಿಕೆಶಿ ವಿರುದ್ಧ ಜನತಾದಳ ಕೆಂಡಾಮಂಡಲ

    ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್​ ಸವಾಲ್​​​

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಕೊಡಲು ಉಪ‌ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಅವರು ಲಂಚಕ್ಕೆ ಬೇಡಿಕೆ‌ ಇಟ್ಟಿದ್ದಾರೆ ಎಂದು ಗುತ್ತಿಗೆದಾರರೇ ಅರೋಪಿಸಿದ್ದಾರೆ. ಒಂದಾದ ಮೇಲೊಂದರಂತೆ ಕಾಂಗ್ರೆಸ್​ ಸರ್ಕಾರದ ಸಚಿವರ ಮೇಲೆ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಲೇ ಇವೆ. ಇದೀಗ ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಸರದಿ ಎಂದು ಜೆಡಿಎಸ್​​ ಟ್ವೀಟ್​ ಮಾಡಿದೆ.

ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಜೆಡಿಎಸ್​, ಇದೆಲ್ಲಾ ತಿಳಿದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಮುಚ್ಚಿ ಕುಳಿತಿದ್ದಾರೆ. ಇದನ್ನು ನೋಡಿದರೆ ಇದರಲ್ಲಿ ಅವರ ಪಾಲು ಇರುವಂತೆ ತೋರುತ್ತದೆ. ಇಲ್ಲದಿದ್ದರೆ ಈ ಎಲ್ಲಾ ಆರೋಪಗಳಿಗೆ ಸೂಕ್ತ ತನಿಖೆ ನಡೆಸುವುದರ ಬದಲು ಸಮರ್ಥಿಸಿಕೊಳ್ಳುತ್ತಿರಲಿಲ್ಲ ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲನೆಯ ದಿನವೇ ಸಮರ್ಥವಾಗಿ ಜಾರಿ ಮಾಡಿದ ಏಕೈಕ ಗ್ಯಾರಂಟಿ ಎಂದರೆ ಅದು ‘ಭ್ರಷ್ಟಾಚಾರ’. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ, ದುರಾಡಳಿತ ನೋಡಿ ಈಗಾಗಲೇ ಅಧಿಕಾರಕ್ಕೆ ತಂದ ತಪ್ಪಿಗೆ ಪಶ್ಚಾತ್ತಾಪ ಪಡುತ್ತಿರುವ ರಾಜ್ಯದ ಜನರೇ ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಮತ್ತೊಂದು ಟ್ವೀಟ್​ನಲ್ಲಿ ಕುಟುಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

 

Load More