/newsfirstlive-kannada/media/post_attachments/wp-content/uploads/2024/12/Jitesh-Sharma_RCB.jpg)
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಸ್ಟಾರ್ ಆಟಗಾರರಿಗೆ ಮಣೆ ಹಾಕಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ತಂಡ ಕಟ್ಟುವಲ್ಲಿ ಯಶಸ್ವಿಯಾಗಿದೆ.
ಮುಂದಿನ ಸೀಸನ್ನಲ್ಲಿ ಹೇಗಾದ್ರೂ ಮಾಡಿ ಕಪ್ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿರೋ ಆರ್ಸಿಬಿ ಮುಖ್ಯವಾಗಿ ಬೌಲಿಂಗ್ ವಿಭಾಗವನ್ನು ಬಲಪಡಿಸಿದೆ. ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಲಪಡಿಸಲು ಉತ್ತಮ ಆಟಗಾರರನ್ನು ಖರೀದಿ ಮಾಡಿದೆ. ಇದಕ್ಕೂ ಮುನ್ನ ಆರ್ಸಿಬಿ ರಜತ್ ಪಟಿದಾರ್, ವಿರಾಟ್ ಕೊಹ್ಲಿ, ಯಶ್ ದಯಾಳ್ ಅವರನ್ನು ಮಾತ್ರ ಉಳಿಸಿಕೊಂಡು ಉಳಿದ ಆಟಗಾರರನ್ನು ಬಿಡುಗಡೆ ಮಾಡಿತ್ತು. ಹರಾಜಿನಲ್ಲಿ ಒಟ್ಟು 19 ಆಟಗಾರ ಖರೀದಿ ಮಾಡಿದ್ದು, ಈಗ ಆರ್ಸಿಬಿ 22 ಸದಸ್ಯರ ಬಲಿಷ್ಠ ತಂಡವಾಗಿದೆ.
ಹರಾಜಿನಲ್ಲಿ ಆರ್ಸಿಬಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾರನ್ನು ಬರೋಬ್ಬರಿ 11 ಕೋಟಿ ರೂಪಾಯಿ ನೀಡಿ ಖರೀದಿ ಮಾಡಿದೆ. ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಣೆ ಮಾಡಿದ ಬಳಿಕ ಆರ್ಸಿಬಿ ತಂಡದ ಫಿನಿಷರ್ ಸ್ಥಾನವನ್ನು ಜಿತೇಶ್ ಶರ್ಮಾ ನಿಭಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಜಿತೇಶ್ ಶರ್ಮಾ ಮಾತಾಡಿದ್ದಾರೆ.
ಏನಂದ್ರು ಜಿತೇಶ್ ಶರ್ಮಾ?
ಆರ್ಸಿಬಿ ನನ್ನನ್ನು ಖರೀದಿ ಮಾಡಿದಕ್ಕೆ ದೇವರಿಗೆ ಧನ್ಯವಾದ ಹೇಳುತ್ತೇನೆ. ಹರಾಜಿನ ಬಗ್ಗೆ ನನಗೆ ಯಾವುದೇ ನಿರೀಕ್ಷೆಗಳು ಇರಲಿಲ್ಲ. ಉತ್ತಮ ತಂಡ ಸೇರುತ್ತೇನೆ ಅನ್ನೋ ವಿಶ್ವಾಸವಿತ್ತು. ಆರ್ಸಿಬಿ ನನ್ನನ್ನು ಖರೀದಿ ಮಾಡಿದ್ದು ಖುಷಿ ಹೆಚ್ಚಿಸಿದೆ ಎಂದರು.
ನನಗೆ ಯಾವುದೇ ನಿರೀಕ್ಷೆಗಳು ಇಲ್ಲ. ಆರ್ಸಿಬಿ ತಂಡಕ್ಕಾಗಿ ಮುಕ್ತವಾಗಿ ಬ್ಯಾಟ್ ಬೀಸುವ ಮತ್ತು ನನ್ನ ಸಾಮರ್ಥ್ಯ ಪ್ರೂವ್ ಮಾಡೋ ಆಸೆ ಇದೆ. ನನ್ನನ್ನು ಖರೀದಿ ಮಾಡಿದ ಆರ್ಸಿಬಿಗೆ ಕೃತಜ್ಞ. ವಿರಾಟ್ ಕೊಹ್ಲಿ ಜೊತೆ ಆಡಲು ನಾನು ಕಾಯುತ್ತಿದ್ದೇನೆ. ಅವರಿಂದ ಕಲಿಯುವುದು ಬಹಳಷ್ಟಿದೆ ಎಂದರು.
ಆರ್ಸಿಬಿ ತಂಡದ ಹೊಸ ಫಿನಿಶರ್
ಜಿತೇಶ್ ಶರ್ಮಾ ಆರ್ಸಿಬಿ ತಂಡದ ಹೊಸ ಫಿನಿಶರ್. ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ನಿವೃತ್ತಿಯಾದ ಬಳಿಕ ಇವರ ಸ್ಥಾನ ತುಂಬಲಿದ್ದಾರೆ. ಜಿತೇಶ್ ಶರ್ಮಾ ಪಂಜಾಬ್ ಕಿಂಗ್ಸ್ ತಂಡದ ಉಪನಾಯಕನಾಗಿ ಜವಾಬ್ದಾರಿ ನಿಭಾಯಿಸಿದ್ರು. ಜಿತೇಶ್ ಶರ್ಮಾ ಅವರನ್ನು ವಾಪಸ್ ತರಲು ಪಂಜಾಬ್ ಆರ್ಟಿಎಂ ಕಾರ್ಡ್ ಬಳಸಿದ್ರೂ ಆರ್ಸಿಬಿ 11 ಕೋಟಿ ನೀಡಿ ಖರೀದಿ ಮಾಡಿದೆ.
ಇದನ್ನೂ ಓದಿ: ಕೊಹ್ಲಿ ಆಪ್ತನಿಗೆ RCB ತಂಡದ ನಾಯಕತ್ವ; ಸ್ಫೋಟಕ ಸುಳಿವು ಕೊಟ್ಟ ಮುಖ್ಯ ಕೋಚ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ