/newsfirstlive-kannada/media/post_attachments/wp-content/uploads/2024/11/KL-Rahul_Gambhir_1.jpg)
ಬಹುನಿರೀಕ್ಷಿತ 2025ರ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಪ್ರಕಟವಾಗಿದೆ. ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಬಿಸಿಸಿಐ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಅಳೆದು ತೂಗಿ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಮಾಡಲಾಗಿದೆ.
ಮುಂದಿನ ತಿಂಗಳು ಫೆಬ್ರವರಿ 19ನೇ ತಾರೀಕಿನಿಂದ ಚಾಂಪಿಯನ್ಸ್ ಟ್ರೋಫಿ ಶುರುವಾಗಲಿದೆ. ಪಾಕಿಸ್ತಾನ ಆಯೋಜನೆ ಮಾಡಲಿರೋ ಈ ಮಹತ್ವದ ಟೂರ್ನಿಯಲ್ಲಿ ಭಾರತ ಕೂಡ ಭಾಗವಹಿಸಲಿದೆ. ಭಾರತದ ಪಂದ್ಯಗಳು ಯುಎಇನಲ್ಲಿ ನಡೆಯಲಿವೆ.
ರೋಹಿತ್ಗೆ ಮತ್ತೆ ಕ್ಯಾಪ್ಟನ್ಸಿ
ಮೆಗಾ ಟೂರ್ನಮೆಂಟ್ನಲ್ಲಿ ಟೀಮ್ ಇಂಡಿಯಾವನ್ನು ಮತ್ತೆ ಕ್ಯಾಪ್ಟನ್ ರೋಹಿತ್ ಶರ್ಮಾ ಲೀಡ್ ಮಾಡಲಿದ್ದಾರೆ. ವಿರಾಟ್ ಕೊಹ್ಲಿಗೆ ಬಿಸಿಸಿಐ ಮತ್ತೆ ಮಣೆ ಹಾಕಿದೆ. ವಿಶೇಷ ಎಂದರೆ ಹಲವು ವರ್ಷಗಳ ನಂತರ ಟೀಮ್ ಇಂಡಿಯಾ ಮೊಹಮ್ಮದ್ ಶಮಿ ಕಮ್ಬ್ಯಾಕ್ ಮಾಡಿದ್ದಾರೆ.
ಕೆ.ಎಲ್ ರಾಹುಲ್ಗೆ ಜಾಕ್ಪಾಟ್
ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಕೆ.ಎಲ್ ರಾಹುಲ್. ಚಾಂಪಿಯನ್ಸ್ ಟ್ರೋಫಿಯಲ್ಲಿ ಇವರು ಸ್ಥಾನ ಪಡೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಕೆ.ಎಲ್ ರಾಹುಲ್ ಇತ್ತೀಚೆಗೆ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಹಾಗಾಗಿ ಎರಡನೇ ವಿಕೆಟ್ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆಯಬಹುದು ಎನ್ನಲಾಗಿತ್ತು. ಆದರೆ, ಭಾರತ ತಂಡದಲ್ಲಿ ರಾಹುಲ್ ಅವರನ್ನು ಮೊದಲ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ. ಪಂತ್ ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿದ್ದಾರೆ.
ಆಟಗಾರ ಶುಭ್ಮನ್ ಗಿಲ್. ಇವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಗಿಲ್ ಅವರಿಗೆ ತಂಡದ ಉಪನಾಯಕ ಎಂದು ಘೋಷಿಸಲಾಗಿದೆ. ಎಡಗೈ ಆಟಗಾರ ಯಶಸ್ವಿ ಜೈಸ್ವಾಲ್ ಅವರಿಗೆ ಇದೇ ಮೊದಲ ಬಾರಿಗೆ ಏಕದಿನ ಕ್ರಿಕೆಟ್ ಸರಣಿಯಲ್ಲಿ ಆಡುವ ಅವಕಾಶ ನೀಡಲಾಗಿದೆ.
ಟೀಮ್ ಇಂಡಿಯಾದ ಪರ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ವೇಗದ ಬೌಲರ್ ಅರ್ಷದೀಪ್ ಸಿಂಗ್ಗೆ ಏಕದಿನ ಕ್ರಿಕೆಟ್ನಲ್ಲಿ ಅವಕಾಶ ನೀಡಲಾಗಿದೆ. ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಕೂಡ ತಂಡದ ಭಾಗವಾಗಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಹೀಗಿದೆ!
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ.
ಇದನ್ನೂ ಓದಿ:ವಿಜಯ್ ಹಜಾರೆ ಟ್ರೋಫಿ ಗೆದ್ದು ಬೀಗಿದ ಮಯಾಂಕ್ ಪಡೆ; 5ನೇ ಬಾರಿ ಕರ್ನಾಟಕ ಚಾಂಪಿಯನ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ