ಪ್ರೇಮಿಗಳಿಗೆ ಶುಭದಿನ, ದಂಪತಿ ಮಧ್ಯೆ ಕಿರಿಕಿರಿ ಸಾಧ್ಯತೆ; ಇಲ್ಲಿದೆ ಇಂದಿನ ಭವಿಷ್ಯ!

author-image
Veena Gangani
Updated On
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment
  • ಈ ದಿನ ಮನೆಗೆ ದಿಢೀರಂತ ಅತಿಥಿಗಳ ಆಗಮನ ಸಾಧ್ಯತೆ
  • ಪ್ರಮುಖ ಉಪಕರಣ ಅಥವಾ ವಾಹನಕ್ಕೆ ಹಾನಿ ಸಂಭವ
  • ಇಂದು ಕುಟುಂಬದ ಸದಸ್ಯರೊಂದಿಗೆ ಸಂತೋಷದ ಸಮಯ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಮೂಲ ನಕ್ಷತ್ರ, ರಾಹುಕಾಲ ಬುಧವಾರ ಮಧ್ಯಾಹ್ನ 12.00 ರಿಂದ 1.30 ರವರೆಗೆ ಇರಲಿದೆ.

ಮೇಷ ರಾಶಿ

publive-image

  • ಹಿರಿಯರ ಆಶೀರ್ವಾದ, ಮಾರ್ಗದರ್ಶನ ಪಡೆಯುತ್ತೀರಿ
  • ಇವತ್ತು ವಾಹನ ಚಾಲನೆ ಮಾಡದೆ ಇದ್ದರೆ ಒಳ್ಳೆಯದು
  • ಇಂದು ನಿಮ್ಮ ಜವಾಬ್ದಾರಿಗಳಿಗೆ ಬದ್ಧರಾಗಿರಬೇಕು
  • ಈ ದಿನ ಮನೆಗೆ ದಿಢೀರಂತ ಅತಿಥಿಗಳ ಆಗಮನ ಸಾಧ್ಯತೆ
  • ಮೇಲಾಧಿಕಾರಿಗಳಿಂದ ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ
  • ಸ್ವಂತ ಕೆಲಸಗಳಿದ್ದರೆ ಅದನ್ನು ಮಾಡಿಕೊಳ್ಳಬಹುದು
  • ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ವೃಷಭ

publive-image

  • ಸರ್ಕಾರಿ ಕೆಲಸಗಳಲ್ಲಿ ಅಡಚಣೆಯಾಗಬಹುದು
  • ಹವಾಮಾನ ಬದಲಾವಣೆಯಿಂದ ತಲೆನೋವು, ಆಲಸ್ಯ ಉಂಟಾಗಬಹುದು
  • ಪ್ರೇಮಿಗಳು ಉತ್ಸುಕರಾಗಿರುವ ದಿನ
  • ಈ ರಾಶಿಯವರಿಗೆ ಕೋಪ ಹೆಚ್ಚಿರುವ ಸಾಧ್ಯತೆ
  • ಪ್ರಮುಖ ಉಪಕರಣ ಅಥವಾ ವಾಹನಕ್ಕೆ ಹಾನಿ ಸಂಭವ
  • ವಿದ್ಯಾರ್ಥಿಗಳು ಬಲವಂತವಾಗಿ ಅಭ್ಯಾಸ ಮಾಡಬೇಕಾದ ದಿನ
  • ಸರಸ್ವತಿಯ ಪ್ರಾರ್ಥನೆ ಮಾಡಿ

ಮಿಥುನ

publive-image

  • ಇಂದು ಕುಟುಂಬದ ಸದಸ್ಯರೊಂದಿಗೆ ಸಂತೋಷದ ಸಮಯ
  • ಮಕ್ಕಳಿಗಾಗಿ ಹೆಚ್ಚು ಹಣ ಖರ್ಚು ಮಾಡುತ್ತೀರಿ
  • ಕಾಲಿನ ಭಾಗದಲ್ಲಿ ನೋವು ಕಾಣಿಸುವ ಸಾಧ್ಯತೆ
  • ಅಧ್ಯಯನ, ಧ್ಯಾನಕ್ಕೆ ಶರೀರ ಅನುಮತಿ ಕೊಡುವುದಿಲ್ಲ
  • ತಮ್ಮ ಕೋಪವನ್ನು ಸ್ನೇಹಿತರು, ಮನೆಯವರ ಮೇಲೆ ತೀರಸಬಾರದು
  • ಮೃತ್ಯುಂಜಯನನ್ನು ಪ್ರಾರ್ಥಿಸುವುದು ಒಳ್ಳೆಯದು

ಕಟಕ

publive-image

  • ಇಂದು ಹೊಸ ಸ್ನೇಹಿತರು ಸಿಗಬಹುದು
  • ಮಾನಸಿಕ ಬೇಸರ, ಅಸಮಾಧಾನ ಸಾಧ್ಯತೆ
  • ಹಣಕಾಸಿನ ವ್ಯವಹಾರವಿದ್ದರೆ ಮಧ್ಯಾಹ್ನದ ನಂತರ ಮಾಡಬಹುದು
  • ತುಂಬಾ ಅಗತ್ಯವಿದ್ದರೆ ರಾಹುಕಾಲದ ನಂತರ ಪ್ರಯಾಣ ಮಾಡಿ
  • ದುರ್ಗಾದೇವಿಯ ಪಾರ್ಥನೆ ಮಾಡಿ

ಸಿಂಹ

publive-image

  • ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಸ್ವಲ್ಪ ಮಟ್ಟಿಗೆ ಕಡಿಮೆ
  • ವ್ಯವಹಾರದ ದೃಷ್ಟಿಯಿಂದ ಈ ದಿನ ಚೆನ್ನಾಗಿಲ್ಲ
  • ವ್ಯಾಪಾರ-ವ್ಯವಹಾರ ಮಾಡುವವರಿಗೆ ಲಾಭದ ದಿನ
  • ಸಂಗಾತಿಯೊಂದಿಗೆ ಉತ್ತಮ ನಡುವಳಿಕೆಯಿಂದ ಇರಬೇಕು
  • ಬಹಳ ಯೋಚನೆ ಮಾಡಿ ಅನಾನುಕೂಲವಾಗುವ ಸಾಧ್ಯತೆ ಇದೆ
  • ಸಮಾಜದಲ್ಲಿ ಗೌರವ, ಪ್ರಶಸ್ತಿಗಳು ದೊರೆಯುವ ದಿನ
  • ಶ್ರೀ ಲಕ್ಷ್ಮಿನಾರಾಯಣನನ್ನು ಪಾರ್ಥನೆ ಮಾಡಿ

ಕನ್ಯಾ

publive-image

  • ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಉತ್ತಮ ಸಾಧನೆಗೆ ಅವಕಾಶವಿದೆ
  • ಹಳೆಯ ಆಸೆಗಳು ಇಂದು ಈಡೇರುತ್ತವೆ
  • ಹೊಸ ಕೆಲಸಗಳನ್ನು ಆರಂಭಿಸಲು ಬಹಳ ಉತ್ತಮ ದಿನ
  • ಸಂಕಲ್ಪ, ಹರಕೆ ತೀರಿಸುವುದಕ್ಕೆ ತೊಂದರೆಯಾಗುವ ಸಾಧ್ಯತೆ
  • ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗಬಹುದು
  • ನಿಮ್ಮ ಕುಲದೇವತೆ ಆರಾಧನೆ ಮಾಡಿ

ತುಲಾ

publive-image

  • ಧಾರ್ಮಿಕ ಕಾರ್ಯಗಳ ಬಗ್ಗೆ ಸಂಕಲ್ಪ ಮಾಡುವ ಮುನ್ನ ಹೆಚ್ಚು ಎಚ್ಚರವಹಿಸಿ
  • ಜನರು ನಿಮ್ಮ ಮಾತನ್ನು ತಪ್ಪಾಗಿ ತಿಳಿಯುವ ಸಾಧ್ಯತೆ ಇದ್ದು ಮಿತವಾಗಿ ಮಾತನಾಡಿ
  • ಸಂಬಂಧಿಕರು, ಸ್ನೇಹಿತರು ಹಣವನ್ನು ಅಥವಾ ವಸ್ತುವನ್ನು ಸಾಲವಾಗಿ ಕೇಳಬಹುದು
  • ಪ್ರಯಾಣದ ವಿಚಾರವಿದ್ದರೆ ನಾಳೆಗೆ ಮುಂದೂಡುವುದು ಒಳ್ಳೆಯದು
  • ವ್ಯಾಪಾರ-ವ್ಯವಹಾರಗಳಲ್ಲಿ ತುಂಬಾ ಅನುಕೂಲವಾಗುವ ದಿನ
  • ಕಾರ್ತವೀರಾರ್ಜುನನ್ನು ಪಾರ್ಥನೆ ಮಾಡಿ

ವೃಶ್ಚಿಕ

publive-image

  • ಶರೀರ ಭಾಗದಲ್ಲಿ ಇದಕ್ಕಿದ್ದಂತೆ ನೋವು ಕಾಣಿಸಬಹುದು
  • ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡ ಶಿಸ್ತನ್ನು ಬೇರೆಯವರ ಮೇಲೆ ಹೇರಬೇಡಿ
  • ಹಳೆಯ ಸಾಲ ಅಥವಾ ಬಾಕಿಯಿರುವ ಸಾಲದಿಂದ ತೊಂದರೆ ಅವಮಾನ ಸಾಧ್ಯತೆ
  • ಇಂದು ಯಾರಿಗೂ ಯಾವುದೇ ಭರವಸೆ ನೀಡಬೇಡಿ
  • ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ
  • ವಿಶೇಷವಾಗಿ ಧನ್ವಂತರಿಯನ್ನು ಪ್ರಾರ್ಥನೆ ಮಾಡಿ

ಧನಸ್ಸು

publive-image

  • ಸ್ಥಿರಾಸ್ತಿಯನ್ನು ಖರೀದಿಸುವ ಯೋಚನೆ ಬರುತ್ತದೆ
  • ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಸಂದರ್ಭ ಬರುತ್ತದೆ
  • ಪಿತ್ರಾರ್ಜಿತ ಆಸ್ತಿಯಿಂದ ಹಣ ಬರುವ ಸಾಧ್ಯತೆ
  • ಇವತ್ತು ದೂರದ ಪ್ರಯಾಣ ಮುಂದೂಡುವುದು ಒಳ್ಳೆಯದು
  • ಇಂದು ನಿಮ್ಮ ಮಾತು, ನಡೆನುಡಿ ಬಹಳ ವಿನಯದಿಂದ ಇರಲಿ
  • ವರಾಹ ಸ್ವಾಮಿಯನ್ನು ಪಾರ್ಥನೆ ಮಾಡಿ

ಮಕರ

publive-image

  • ಕಾರ್ಯಕ್ಷೇತ್ರ, ಸಾರ್ವಜನಿಕ ಸ್ಥಳಗಳಲ್ಲಿ ನಿಮ್ಮನ್ನು ಅಲ್ಪರನ್ನಾಗಿ ಕಾಣಬಹುದು
  • ಇಂದು ತುಂಬಾ ಆಲಸ್ಯ ಕಾಡುವ ದಿನ
  • ಮುಖ್ಯ ಕೆಲಸಗಳ ಬಗ್ಗೆ ನಿರ್ಲಕ್ಷ್ಯ ತೋರುವ ಸಾಧ್ಯತೆ
  • ಮಕ್ಕಳಿಂದ, ಚಿಕ್ಕವರಿಂದ ಬೆಂಬಲ ಪ್ರೋತ್ಸಾಹ ಸಿಗುತ್ತದೆ
  • ವ್ಯಾಪಾರದಾರರಿಗೆ ಇಂದು ಹೆಚ್ಚು ಲಾಭವಿದೆ
  • ಆದರೆ ಅವರು ನಿಮ್ಮನ್ನು ಮರೆಯುವ ಸಾಧ್ಯತೆ ಹೆಚ್ಚು
  • ಶ್ರೀ ಲಕ್ಷ್ಮೀ ದೇವಿಯನ್ನು ಪಾರ್ಥನೆ ಮಾಡಿ

ಕುಂಭ

publive-image

  • ನಿಮಗಿರುವ ಅನುಕೂಲವನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ
  • ನಿಮ್ಮ ಮನಸ್ಸಿನ ಚಂಚಲತೆ ನಿಗ್ರಹಮಾಡಿ
  • ಮನೆಯ ವಾತಾವರಣ ಚೆನ್ನಾಗಿರುವುದಿಲ್ಲ
  • ಇಂದು ಅವಕಾಶ, ಅನುಕೂಲ ಕೈ ತಪ್ಪುವ ಸಾಧ್ಯತೆ ಹೆಚ್ಚು
  • ಕೆಲಸದ ಒತ್ತಡದಿಂದ ನಿಮಗೆ ನಿರಾಶೆಯಾಗಬಹುದು
  • ಕುಲದೇವತೆ ಹಾಗೂ ಗುರುವನ್ನು ಸ್ಮರಣೆ ಮಾಡಿ

ಮೀನ 

publive-image

  • ನಿಮ್ಮ ಮನೆಯವರಿಗೆ ನಿಮ್ಮ ಬಗ್ಗೆ ಋಣಾತ್ಮಕ ಅಭಿಪ್ರಾಯಗಳು ಹೆಚ್ಚು
  • ಸಣ್ಣ ಸಣ್ಣ ವಿಚಾರಗಳಿಗೆ ಜಗಳವಾಗಬಹುದು ತಾಳ್ಮೆಯಿರಲಿ
  • ನಿಮ್ಮಿಂದ ಬೇರೆಯವರಿಗೆ ಸಹಾಯವಾಗುತ್ತದೆ
  • ಎಣ್ಣೆಯಿಂದ ಕರಿದ ಪದಾರ್ಥಗಳನ್ನು ಸಿದ್ಧ ಆಹಾರಗಳನ್ನು ತ್ಯಜಿಸುವುದು ಒಳಿತು
  • ಅವಕಾಶ ಮಾಡಿಕೊಂಡು ಧ್ಯಾನ-ಯೋಗ ಮಾಡಿ ಆಲಸ್ಯ ಬೇಡ
  • ನಿಮ್ಮ ಕುಲದೇವರನ್ನು ಆರಾಧನೆ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment