ಮಣಿಪುರದಲ್ಲಿ ಮನುಕುಲವೇ ತಲೆ ತಗ್ಗಿಸುವ ಕೃತ್ಯ!
ಮಹಿಳೆ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಬೆಂಗಳೂರಿನಲ್ಲಿ ಪ್ರಗತಿಪರ ಸಂಘಟನೆಗಳ ಹೋರಾಟ
ಬೆಂಗಳೂರು: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೋ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಆರೋಪಿಗಳ ವಿರುದ್ಧ ಕಠಿಣಕ್ರಮ ತೆಗೆದುಕೊಳ್ಳುವಂತೆ ಇಡೀ ದೇಶ ಆಗ್ರಹಿಸುತ್ತಿದೆ. ಈ ಬೆನ್ನಲ್ಲೇ ಎಚ್ಚೆತ್ತ ಮಣಿಪುರ ಪೊಲೀಸ್ ಅಧಿಕಾರಿಗಳು ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನು, ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರನ್ನು ಖಂಡಿಸಿ ಭಾರೀ ಹೋರಾಟಗಳು ನಡೆಯುತ್ತಿದೆ. ಇಂದು ಬೆಂಗಳೂರಿನಲ್ಲಿ ಪ್ರಗತಿಪರ ಸಂಘಟನೆಗಳು ಹೋರಾಟ ಮಾಡಿವೆ. ಟೌನ್ ಹಾಲ್ ಮುಂದೆ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿವೆ.
ದಲಿತ, ಮಹಿಳಾ ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದು ನಮ್ಮ ದೇಹ, ನಿಮ್ಮ ಯುದ್ಧ ಭೂಮಿಯಲ್ಲ ಎಂದು ಘೋಷಣೆ ಕೂಗುವ ಮೂಲಕ ಸಿಟ್ಟು ಹೊರಹಾಕಿದ್ರು. ಸಾಮಾಜಿಕ ಹೋರಾಟಾರ್ತಿ ಅಕೈ ಪದ್ಮಶಾಲಿ ಸೇರಿದಂತೆ ವಕೀಲರು ಮತ್ತು ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.
ಮಣಿಪುರದಲ್ಲಿ ಮಹಿಳಾ ಹಿಂಸಚಾರ ವಿರುದ್ಧ ದೇಶಾದ್ಯಂತ ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಕ್ಕಯ್ಯ ಪದ್ಮಶಾಲಿ ನೇತೃತ್ವದಲ್ಲಿ "ಬೆಂಗಳೂರು ಮಣಿಪುರದ ಜೊತೆ" ಎಂದು ಕೂಗುತ್ತಾ ಎಲ್ಲ ಮಹಿಳಾ ಮತ್ತು ಮಾನವ ಹಕ್ಕು ಸಂಘಟನೆಗಳು ಸೇರಿ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. #newsfirstlive #newsfirstkannada… pic.twitter.com/Pl1qPLB8Xj
— NewsFirst Kannada (@NewsFirstKan) July 21, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಣಿಪುರದಲ್ಲಿ ಮನುಕುಲವೇ ತಲೆ ತಗ್ಗಿಸುವ ಕೃತ್ಯ!
ಮಹಿಳೆ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಬೆಂಗಳೂರಿನಲ್ಲಿ ಪ್ರಗತಿಪರ ಸಂಘಟನೆಗಳ ಹೋರಾಟ
ಬೆಂಗಳೂರು: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೋ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಆರೋಪಿಗಳ ವಿರುದ್ಧ ಕಠಿಣಕ್ರಮ ತೆಗೆದುಕೊಳ್ಳುವಂತೆ ಇಡೀ ದೇಶ ಆಗ್ರಹಿಸುತ್ತಿದೆ. ಈ ಬೆನ್ನಲ್ಲೇ ಎಚ್ಚೆತ್ತ ಮಣಿಪುರ ಪೊಲೀಸ್ ಅಧಿಕಾರಿಗಳು ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನು, ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರನ್ನು ಖಂಡಿಸಿ ಭಾರೀ ಹೋರಾಟಗಳು ನಡೆಯುತ್ತಿದೆ. ಇಂದು ಬೆಂಗಳೂರಿನಲ್ಲಿ ಪ್ರಗತಿಪರ ಸಂಘಟನೆಗಳು ಹೋರಾಟ ಮಾಡಿವೆ. ಟೌನ್ ಹಾಲ್ ಮುಂದೆ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿವೆ.
ದಲಿತ, ಮಹಿಳಾ ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದು ನಮ್ಮ ದೇಹ, ನಿಮ್ಮ ಯುದ್ಧ ಭೂಮಿಯಲ್ಲ ಎಂದು ಘೋಷಣೆ ಕೂಗುವ ಮೂಲಕ ಸಿಟ್ಟು ಹೊರಹಾಕಿದ್ರು. ಸಾಮಾಜಿಕ ಹೋರಾಟಾರ್ತಿ ಅಕೈ ಪದ್ಮಶಾಲಿ ಸೇರಿದಂತೆ ವಕೀಲರು ಮತ್ತು ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.
ಮಣಿಪುರದಲ್ಲಿ ಮಹಿಳಾ ಹಿಂಸಚಾರ ವಿರುದ್ಧ ದೇಶಾದ್ಯಂತ ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಕ್ಕಯ್ಯ ಪದ್ಮಶಾಲಿ ನೇತೃತ್ವದಲ್ಲಿ "ಬೆಂಗಳೂರು ಮಣಿಪುರದ ಜೊತೆ" ಎಂದು ಕೂಗುತ್ತಾ ಎಲ್ಲ ಮಹಿಳಾ ಮತ್ತು ಮಾನವ ಹಕ್ಕು ಸಂಘಟನೆಗಳು ಸೇರಿ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. #newsfirstlive #newsfirstkannada… pic.twitter.com/Pl1qPLB8Xj
— NewsFirst Kannada (@NewsFirstKan) July 21, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ