newsfirstkannada.com

‘ಅವರು ಯಾಕೆ ಬಂದರು? ಬೇಗ ಕಳುಹಿಸಿ..’ ಪ್ರಿಯಾಂಕ್ ಖರ್ಗೆ ವಿರುದ್ಧ ಗರಂ ಆದ ಕೆ.ಶಿವರಾಂ ಪತ್ನಿ

Share :

Published March 1, 2024 at 12:30pm

    ರವೀಂದ್ರ ಕಲಾಕ್ಷೇತ್ರದಲ್ಲಿ ಕೆ ಶಿವರಾಮ್ ಅವರ ಅಂತಿಮ ದರ್ಶನ

    ಅನಾರೋಗ್ಯದಿಂದ ಬಳತ್ತಿದ್ದ ಕೆ.ಶಿವರಾಮ್ ಆಸ್ಪತ್ರೆಯಲ್ಲಿ ನಿನ್ನೆ ವಿಧಿವಶ

    ಸಿನಿಮಾ, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಕೆ.ಶಿವರಾಮ್

ಬೆಂಗಳೂರು: ನಟ, ರಾಜಕಾರಣಿ, ಮಾಜಿ ಐಎಎಸ್​ ಅಧಿಕಾರಿ ಕೆ.ಶಿವರಾಮ್ ಅವರು ವಿಧಿವಶರಾಗಿದ್ದು ಇಂದು ಬೆಳಗ್ಗೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ವೇಳೆ ಅಂತಿಮ ದರ್ಶನ ಪಡೆಯಲು ಆಗಮಿಸಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಅವರ ಬಗ್ಗೆ ಕೆ.ಶಿವರಾಮ್ ಅವರ ಪತ್ನಿ ವಾಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆ.ಶಿವರಾಮ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಆಗಮಿಸಿದ್ದರು. ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ ಕೆ.ಶಿವರಾಂ ಪತ್ನಿ ವಾಣಿ, ಪಾರ್ಥಿವ ಶರೀರದ ದರ್ಶನ ಪಡೆಯುವ ರೈಟ್ಸ್ ನಿಮಗೆ ಇಲ್ಲ ಎಂದು ಹೇಳಿದ್ದಾರೆ. ಯಾಕೆ ಬಂದರು ಅವರು? ದಯವಿಟ್ಟು ಕಳುಹಿಸಿ.. ಎಂದು ವಾಣಿ ಅವರು ಕಣ್ಣೀರು ಹಾಕುತ್ತಲೇ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ ವಾಣಿ ಅವರು ಯಾಕೆ ಗರಂ ಆದರು ಅನ್ನೋದ್ರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಅವರು ಯಾಕೆ ಬಂದರು? ಬೇಗ ಕಳುಹಿಸಿ..’ ಪ್ರಿಯಾಂಕ್ ಖರ್ಗೆ ವಿರುದ್ಧ ಗರಂ ಆದ ಕೆ.ಶಿವರಾಂ ಪತ್ನಿ

https://newsfirstlive.com/wp-content/uploads/2024/03/PRIYANKA_KHARGE_K_SHIVARAM_WIFE.jpg

    ರವೀಂದ್ರ ಕಲಾಕ್ಷೇತ್ರದಲ್ಲಿ ಕೆ ಶಿವರಾಮ್ ಅವರ ಅಂತಿಮ ದರ್ಶನ

    ಅನಾರೋಗ್ಯದಿಂದ ಬಳತ್ತಿದ್ದ ಕೆ.ಶಿವರಾಮ್ ಆಸ್ಪತ್ರೆಯಲ್ಲಿ ನಿನ್ನೆ ವಿಧಿವಶ

    ಸಿನಿಮಾ, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಕೆ.ಶಿವರಾಮ್

ಬೆಂಗಳೂರು: ನಟ, ರಾಜಕಾರಣಿ, ಮಾಜಿ ಐಎಎಸ್​ ಅಧಿಕಾರಿ ಕೆ.ಶಿವರಾಮ್ ಅವರು ವಿಧಿವಶರಾಗಿದ್ದು ಇಂದು ಬೆಳಗ್ಗೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ವೇಳೆ ಅಂತಿಮ ದರ್ಶನ ಪಡೆಯಲು ಆಗಮಿಸಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಅವರ ಬಗ್ಗೆ ಕೆ.ಶಿವರಾಮ್ ಅವರ ಪತ್ನಿ ವಾಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆ.ಶಿವರಾಮ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಆಗಮಿಸಿದ್ದರು. ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ ಕೆ.ಶಿವರಾಂ ಪತ್ನಿ ವಾಣಿ, ಪಾರ್ಥಿವ ಶರೀರದ ದರ್ಶನ ಪಡೆಯುವ ರೈಟ್ಸ್ ನಿಮಗೆ ಇಲ್ಲ ಎಂದು ಹೇಳಿದ್ದಾರೆ. ಯಾಕೆ ಬಂದರು ಅವರು? ದಯವಿಟ್ಟು ಕಳುಹಿಸಿ.. ಎಂದು ವಾಣಿ ಅವರು ಕಣ್ಣೀರು ಹಾಕುತ್ತಲೇ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ ವಾಣಿ ಅವರು ಯಾಕೆ ಗರಂ ಆದರು ಅನ್ನೋದ್ರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More