/newsfirstlive-kannada/media/post_attachments/wp-content/uploads/2024/05/KLB_BIKE_BUS.jpg)
ಕಲಬುರಗಿ: ಬೈಕ್​ ಹಾಗೂ ಕೆಕೆಆರ್​ಟಿಸಿ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಬಳಿ ನಡೆದಿದೆ.
ತಾಲೂಕಿನ ಕಿಣ್ಣಿ ಸಡಕ್ ಗ್ರಾಮದ ವಿಶಾಲ್ ಜಾಧವ್ (17), ಚಂದ್ರಕಾಂತ (20) ಮತ್ತು ಸಮೀರ್ (23) ಮೃತರು. ಈ ಯುವಕರು ಕೆಲಸದ ನಿಮಿತ್ತ ಒಂದೇ ಬೈಕ್​ನಲ್ಲೇ ತಮ್ಮ ಗ್ರಾಮದಿಂದ ಕಲಬುರಗಿಗೆ ಹೋಗುತ್ತಿದ್ದರು. ಕಲಬುರಗಿಯಿಂದ ಹುಮನಾಬಾದ್ ಕಡೆಗೆ ಸಾರಿಗೆ ಬಸ್ ತೆರಳುತ್ತಿತ್ತು. ಈ ವೇಳೆ ಕಮಲಾಪುರ ತಾಲೂಕು ಬಳಿ ಬರುತ್ತಿದ್ದಂತೆ ಬೈಕ್​ ಮತ್ತು ಬಸ್​ ನಡುವೆ ಭಯಾನಕವಾದ ಅಪಘಾತ ಸಂಭವಿಸಿದೆ.
/newsfirstlive-kannada/media/post_attachments/wp-content/uploads/2024/05/KLB_BIKE_BUS_1.jpg)
ಪರಿಣಾಮ ಬೈಕ್​ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಮಲಾಪುರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಂಬುಲೆನ್ಸ್​ ಮೂಲಕ ಮೃತದೇಹಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂವರು ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us