ಅಂತಿಮ ದರ್ಶನಕ್ಕೆ ಎಲ್ಲೆಲ್ಲೆಲಿ ವ್ಯವಸ್ಥೆ ಮಾಡಲಾಗಿದೆ..?
ಅನಾರೋಗ್ಯದಿಂದ ನಿನ್ನೆ ನಿಧನರಾಗಿರುವ ಹಿರಿಯ ನಟ
ನಟನೆಗೂ ಮೊದಲು ಐಎಎಸ್ ಅಧಿಕಾರಿಯಾಗಿದ್ದ ಶಿವರಾಂ
90ರ ದಶಕದ ಎವರ್ಗ್ರೀನ್ ಸಿನಿಮಾ ಬಾ ನಲ್ಲೆ ಮಧುಚಂದ್ರಕೆ ಖ್ಯಾತಿಯ ನಟ ಕೆ.ಶಿವರಾಮ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಿವರಾಮ್, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಇವತ್ತು ‘ವಸಂತ ಕಾವ್ಯ’ ಬರೆದ ನಟನ ಅಂತ್ಯಕ್ರಿಯೆ ನೆರವೇರಲಿದೆ.
ಹೌದು.. ನಟ, ರಾಜಕಾರಣಿ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಇನ್ನೂ ನೆನಪು ಮಾತ್ರ. ಶಿವರಾಮ್ ಬೆಂಗಳೂರಿನ ಹೆಚ್ಸಿಜಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ.ಶಿವರಾಮ್ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದಾರೆ. ರಕ್ತದೊತ್ತಡದಿಂದ ಬಳಲುತ್ತಿದ್ದ ಶಿವರಾಮ್ ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೇ ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದಾರೆ.
ಇವತ್ತು ಬೆಂಗಳೂರಿನ ರಾಜಾಜಿನಗರದಲ್ಲಿರೋ ಕೆ. ಶಿವರಾಂ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬೆಳಗ್ಗೆ 7 ಗಂಟೆ ಬಳಿಕ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರವನ್ನ ರವಾನಿಸಲಾಗುತ್ತದೆ. ನಂತರ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 3ಗಂಟೆವರೆಗೆ ಕಲಾಕ್ಷೇತ್ರದಲ್ಲಿಯೇ ಅಂತಿಮ ದರ್ಶನ ನೆರವೇರಲಿದೆ.. ಬಳಿಕ ಸಂಜೆ ವೇಳೆಗೆ ಅಂತಿವಿಧಿವಿಧಾನಗಳ ಮೂಲಕ ಕೆ. ಶಿವಾರಂ ಅವರ ಅಂತ್ಯಕ್ರಿಯೆ ನೆರವೇರಲಿದೆ.
1993ರಲ್ಲಿ ತೆರೆಕಂಡ ಬಾನಲ್ಲೆ ಮಧುಚಂದ್ರಕೆ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಕೆ.ಶಿವರಾಮ್ ತನ್ನ ಮೊದಲ ಸಿನಿಮಾದಲ್ಲೇ ಮಿಂಚಿದ್ರು. ಭರವಸೆಯ ನಾಯಕ ಅನಿಸಿಕೊಂಡಿದ್ದ ನಟ.. ಬಳಿಕ ವಸಂತಕಾವ್ಯ, ಸಾಂಗ್ಲಿಯಾನ 3, ಪ್ರತಿಭಟನೆ, ಖಳನಾಯಕ, ನಾಗ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ಓ ಪ್ರೇಮ ದೇವತೆ ಸಿನಿಮಾದಲ್ಲಿ ನಟಿಸಿದ್ರು. ಟೈಗರ್ ಚಿತ್ರದಲ್ಲಿ ಕೊನೆಯ ಬಾರಿಗೆ ಬಣ್ಣ ಹಚ್ಚಿದ ನಟ ಶಿವರಾಮ್, 2007ರ ಬಳಿಕ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.
ನಟನಾಗೋಕು ಮೊದಲು ಐಎಎಸ್ ಅಧಿಕಾರಿಯಾಗಿದ್ದ ಶಿವರಾಮ್, 2013ರಲ್ಲಿ ಸ್ವಯಂ ನಿವೃತ್ತಿ ಪಡೆದು ರಾಜಕೀಯದಲ್ಲಿ ಸಕ್ರೀಯರಾಗಿದ್ರು. 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯಪುರದಿಂದ ಸ್ಪರ್ಧಿಸಿ ಸೋಲುಕಂಡಿದ್ರು. ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ರು. ಅದೇನೆ ಇರ್ಲಿ ಬಾ ನಲ್ಲೆ ಮಧುಚಂದ್ರಕೆ ಎನ್ನುತ್ತಾ ಟೈಗರ್ ರೀತಿ ಘರ್ಜಿಸಿದ್ದ ನಟ ಇನ್ನೂ ನೆನಪುಮಾತ್ರ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಂತಿಮ ದರ್ಶನಕ್ಕೆ ಎಲ್ಲೆಲ್ಲೆಲಿ ವ್ಯವಸ್ಥೆ ಮಾಡಲಾಗಿದೆ..?
ಅನಾರೋಗ್ಯದಿಂದ ನಿನ್ನೆ ನಿಧನರಾಗಿರುವ ಹಿರಿಯ ನಟ
ನಟನೆಗೂ ಮೊದಲು ಐಎಎಸ್ ಅಧಿಕಾರಿಯಾಗಿದ್ದ ಶಿವರಾಂ
90ರ ದಶಕದ ಎವರ್ಗ್ರೀನ್ ಸಿನಿಮಾ ಬಾ ನಲ್ಲೆ ಮಧುಚಂದ್ರಕೆ ಖ್ಯಾತಿಯ ನಟ ಕೆ.ಶಿವರಾಮ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಿವರಾಮ್, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಇವತ್ತು ‘ವಸಂತ ಕಾವ್ಯ’ ಬರೆದ ನಟನ ಅಂತ್ಯಕ್ರಿಯೆ ನೆರವೇರಲಿದೆ.
ಹೌದು.. ನಟ, ರಾಜಕಾರಣಿ, ಮಾಜಿ ಐಎಎಸ್ ಅಧಿಕಾರಿ ಕೆ.ಶಿವರಾಮ್ ಇನ್ನೂ ನೆನಪು ಮಾತ್ರ. ಶಿವರಾಮ್ ಬೆಂಗಳೂರಿನ ಹೆಚ್ಸಿಜಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ.ಶಿವರಾಮ್ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದಾರೆ. ರಕ್ತದೊತ್ತಡದಿಂದ ಬಳಲುತ್ತಿದ್ದ ಶಿವರಾಮ್ ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೇ ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದಾರೆ.
ಇವತ್ತು ಬೆಂಗಳೂರಿನ ರಾಜಾಜಿನಗರದಲ್ಲಿರೋ ಕೆ. ಶಿವರಾಂ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬೆಳಗ್ಗೆ 7 ಗಂಟೆ ಬಳಿಕ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರವನ್ನ ರವಾನಿಸಲಾಗುತ್ತದೆ. ನಂತರ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 3ಗಂಟೆವರೆಗೆ ಕಲಾಕ್ಷೇತ್ರದಲ್ಲಿಯೇ ಅಂತಿಮ ದರ್ಶನ ನೆರವೇರಲಿದೆ.. ಬಳಿಕ ಸಂಜೆ ವೇಳೆಗೆ ಅಂತಿವಿಧಿವಿಧಾನಗಳ ಮೂಲಕ ಕೆ. ಶಿವಾರಂ ಅವರ ಅಂತ್ಯಕ್ರಿಯೆ ನೆರವೇರಲಿದೆ.
1993ರಲ್ಲಿ ತೆರೆಕಂಡ ಬಾನಲ್ಲೆ ಮಧುಚಂದ್ರಕೆ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಕೆ.ಶಿವರಾಮ್ ತನ್ನ ಮೊದಲ ಸಿನಿಮಾದಲ್ಲೇ ಮಿಂಚಿದ್ರು. ಭರವಸೆಯ ನಾಯಕ ಅನಿಸಿಕೊಂಡಿದ್ದ ನಟ.. ಬಳಿಕ ವಸಂತಕಾವ್ಯ, ಸಾಂಗ್ಲಿಯಾನ 3, ಪ್ರತಿಭಟನೆ, ಖಳನಾಯಕ, ನಾಗ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ಓ ಪ್ರೇಮ ದೇವತೆ ಸಿನಿಮಾದಲ್ಲಿ ನಟಿಸಿದ್ರು. ಟೈಗರ್ ಚಿತ್ರದಲ್ಲಿ ಕೊನೆಯ ಬಾರಿಗೆ ಬಣ್ಣ ಹಚ್ಚಿದ ನಟ ಶಿವರಾಮ್, 2007ರ ಬಳಿಕ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.
ನಟನಾಗೋಕು ಮೊದಲು ಐಎಎಸ್ ಅಧಿಕಾರಿಯಾಗಿದ್ದ ಶಿವರಾಮ್, 2013ರಲ್ಲಿ ಸ್ವಯಂ ನಿವೃತ್ತಿ ಪಡೆದು ರಾಜಕೀಯದಲ್ಲಿ ಸಕ್ರೀಯರಾಗಿದ್ರು. 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯಪುರದಿಂದ ಸ್ಪರ್ಧಿಸಿ ಸೋಲುಕಂಡಿದ್ರು. ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ರು. ಅದೇನೆ ಇರ್ಲಿ ಬಾ ನಲ್ಲೆ ಮಧುಚಂದ್ರಕೆ ಎನ್ನುತ್ತಾ ಟೈಗರ್ ರೀತಿ ಘರ್ಜಿಸಿದ್ದ ನಟ ಇನ್ನೂ ನೆನಪುಮಾತ್ರ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ