ನಿನ್ನೆ ಮಧ್ಯಾಹ್ನ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಶಿವರಾಜ್ಕುಮಾರ್
ಶಿವರಾಜ್ ಕುಮಾರ್ಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದಿರುವ ವೈದ್ಯರು
ಪತ್ನಿ ಗೀತಾ ಪರ ಶಿವಮೊಗ್ಗದಲ್ಲಿ ಅಬ್ಬರದ ಪ್ರಚಾರ ಮಾಡಿದ್ದ ಶಿವರಾಜ್ ಕುಮಾರ್
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಿನ್ನೆ ಮಧ್ಯಾಹ್ನ ಅನಾರೋಗ್ಯದಿಂದ ನಗರದ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿವರಾಜ್ಕುಮಾರ್ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ನಟ ಶಿವರಾಜ್ ಕುಮಾರ್ ಅವರಿಗೆ ಕಿಡ್ನಿ ಸ್ಟೋನ್ ಆಗಿತ್ತು. ಹೀಗಾಗಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಿವಣ್ಣನ ಆರೋಗ್ಯ ಚೆಕ್ ಮಾಡಿದ ವೈದ್ಯರು ಯಾವುದೇ ಸಮಸ್ಯೆ ಇಲ್ಲ. ಇಂದು ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗು ಸಾಧ್ಯತೆ ಇದೆ.
ಇತ್ತೀಚೆಗೆ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ ಮಾಡಿದ್ದರು. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಬಿರು ಬಿಸಿಲಿನಲ್ಲೂ ಕಾಂಗ್ರೆಸ್ ಪರ ಮತಯಾಚನೆ ಮಾಡಿದ್ದರು. ಚುನಾವಣಾ ಪ್ರಚಾರದ ಜೊತೆಗೆ ಶಿವಣ್ಣ ಭೈರತಿ ರಣಗಲ್ ಸಿನಿಮಾದ ಶೂಟಿಂಗ್ನಲ್ಲೂ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಸಿಲಿಗೆ ಬಸವಳಿದು ಶಿವರಾಜ್ಕುಮಾರ್ ಅನಾರೋಗ್ಯಗೊಂಡಿದ್ದಾರೆ ಎನ್ನಲಾಗಿತ್ತು.
ಇದನ್ನೂ ಓದಿ: BREAKING: ಶಿವಮೊಗ್ಗ ಲೋಕಸಭಾ ಅಖಾಡದಿಂದ ಕೆ.ಎಸ್. ಈಶ್ವರಪ್ಪ ಹಿಂದಕ್ಕೆ?
ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದಿದ್ದಾರೆ. ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಶಿವಣ್ಣ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತಾ ಇದ್ದು, ವಿಶ್ರಾಂತಿ ಪಡೆದ ನಂತರ ಚುನಾವಣೆ ಪ್ರಚಾರಕ್ಕೆ ಮತ್ತೆ ತೆರಳುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿನ್ನೆ ಮಧ್ಯಾಹ್ನ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಶಿವರಾಜ್ಕುಮಾರ್
ಶಿವರಾಜ್ ಕುಮಾರ್ಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದಿರುವ ವೈದ್ಯರು
ಪತ್ನಿ ಗೀತಾ ಪರ ಶಿವಮೊಗ್ಗದಲ್ಲಿ ಅಬ್ಬರದ ಪ್ರಚಾರ ಮಾಡಿದ್ದ ಶಿವರಾಜ್ ಕುಮಾರ್
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಿನ್ನೆ ಮಧ್ಯಾಹ್ನ ಅನಾರೋಗ್ಯದಿಂದ ನಗರದ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿವರಾಜ್ಕುಮಾರ್ ಅವರ ಆರೋಗ್ಯ ತಪಾಸಣೆ ಮಾಡಿರುವ ವೈದ್ಯರು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ನಟ ಶಿವರಾಜ್ ಕುಮಾರ್ ಅವರಿಗೆ ಕಿಡ್ನಿ ಸ್ಟೋನ್ ಆಗಿತ್ತು. ಹೀಗಾಗಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಿವಣ್ಣನ ಆರೋಗ್ಯ ಚೆಕ್ ಮಾಡಿದ ವೈದ್ಯರು ಯಾವುದೇ ಸಮಸ್ಯೆ ಇಲ್ಲ. ಇಂದು ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗು ಸಾಧ್ಯತೆ ಇದೆ.
ಇತ್ತೀಚೆಗೆ ಶಿವರಾಜ್ ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ ಮಾಡಿದ್ದರು. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಬಿರು ಬಿಸಿಲಿನಲ್ಲೂ ಕಾಂಗ್ರೆಸ್ ಪರ ಮತಯಾಚನೆ ಮಾಡಿದ್ದರು. ಚುನಾವಣಾ ಪ್ರಚಾರದ ಜೊತೆಗೆ ಶಿವಣ್ಣ ಭೈರತಿ ರಣಗಲ್ ಸಿನಿಮಾದ ಶೂಟಿಂಗ್ನಲ್ಲೂ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಸಿಲಿಗೆ ಬಸವಳಿದು ಶಿವರಾಜ್ಕುಮಾರ್ ಅನಾರೋಗ್ಯಗೊಂಡಿದ್ದಾರೆ ಎನ್ನಲಾಗಿತ್ತು.
ಇದನ್ನೂ ಓದಿ: BREAKING: ಶಿವಮೊಗ್ಗ ಲೋಕಸಭಾ ಅಖಾಡದಿಂದ ಕೆ.ಎಸ್. ಈಶ್ವರಪ್ಪ ಹಿಂದಕ್ಕೆ?
ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದಿದ್ದಾರೆ. ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಶಿವಣ್ಣ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತಾ ಇದ್ದು, ವಿಶ್ರಾಂತಿ ಪಡೆದ ನಂತರ ಚುನಾವಣೆ ಪ್ರಚಾರಕ್ಕೆ ಮತ್ತೆ ತೆರಳುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ