ಶಕ್ತಿಪೀಠ ಕಾಮಾಕ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟ ಕನ್ನಡದ ನಟಿ ಕಾರುಣ್ಯಾ ರಾಮ್; ಹೇಳಿದ್ದೇನು?​

author-image
Veena Gangani
Updated On
ಶಕ್ತಿಪೀಠ ಕಾಮಾಕ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟ ಕನ್ನಡದ ನಟಿ ಕಾರುಣ್ಯಾ ರಾಮ್; ಹೇಳಿದ್ದೇನು?​
Advertisment
  • ನಟಿ ಭೇಟಿ ಕೊಟ್ಟ ಕಾಮಾಕ್ಯ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಿ!
  • ಇನ್​ಸ್ಟಾದಲ್ಲಿ ಹೊಸ ಫೋಟೋ ಶೇರ್ ಮಾಡಿಕೊಂಡ ನಟಿ
  • ಶಕ್ತಿ ಪೀಠ ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯಾ ರಾಮ್​ ಭೇಟಿ

ಕನ್ನಡದ ನಟಿ ಕಾರುಣ್ಯ ರಾಮ್​ ಸೋಷಿಯಲ್​ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್​ ಆಗಿದ್ದಾರೆ. ಆಗಾಗ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿ ಇರುತ್ತಾರೆ.

publive-image

ಇದೀಗ ಹೊರ ರಾಜ್ಯದ ಶಕ್ತಿಪೀಠ ಕಾಮಾಕ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ. ಹೌದು, ದೇಶದ 51 ಶಕ್ತಿ ಪೀಠಗಳಲ್ಲಿ ಒಂದಾದ ಅಸ್ಸಾಂನ ಗುವ್ಹಾಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿ ಬಂದಿದ್ದಾರೆ.

ಇದನ್ನೂ ಓದಿ:ಎಂಟು ದಿನ ಮುಂಚೆಯೇ ಮುಂಗಾರು ಎಂಟ್ರಿ.. ಕರ್ನಾಟಕಕ್ಕೆ ಮುಂಗಾರಿನ ಅಭಿಷೇಕ ಯಾವಾಗ..?

publive-image

ಕೆಂಪು ಬಣ್ಣದ ಸೀರೆಯನ್ನು ಧರಿಸಿಕೊಂಡು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ನಟಿ ಕಾರುಣ್ಯಾ ರಾಮ್​ ತಮ್ಮ ಇನ್​ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ತಮ್ಮ ಅನುಭವನ್ನು ಹಂಚಿಕೊಂಡಿದ್ದಾರೆ.

publive-image

ಇನ್ನು, ನಟಿ ಭೇಟಿ ಕೊಟ್ಟ ಕಾಮಾಕ್ಯ ಕ್ಷೇತ್ರದ ಮಹತ್ವದ ಬಗ್ಗೆ ತಿಳಿದುಕೊಳ್ಳಲೇಬೇಕು. ಭಾರತದ ಪುರಾತನ ಶಕ್ತಿಪೀಠಗಳಲ್ಲಿ ಕಾಮಾಕ್ಯ ದೇವಿ ದೇವಸ್ಥಾನವು ಒಂದಾಗಿದೆ. ಗುವಾಹಟಿಯ ಪಶ್ಚಿಮ ಭಾಗದ ನಿಲಚಲ್ ಬೆಟ್ಟದ ಮೇಲೆ ದೇವಿ ನೆಲೆಸಿದ್ದಾಳೆ. ಈ ಕಾಮಾಕ್ಷಿ ಮಾತೆ ಪವರ್ ಫುಲ್’ ಶಕ್ತಿ ದೇವತೆ ಎನ್ನಿಸಿಕೊಂಡಿದ್ದಾಳೆ. ಇಲ್ಲಿ ದೇವಿ ವಿಗ್ರಹವಿಲ್ಲ, ಬದಲಾಗಿ ಯೋನಿಯನ್ನು ಪೂಜಿಸಲಾಗುತ್ತೆ.

publive-image

ಪ್ರತಿ ವರ್ಷ ಜೂನ್ ತಿಂಗಳು ಬಂದರೆ ಈ ತಾಯಿ ಮುಟ್ಟಾಗುತ್ತಾಳೆ. ಅದೇ ಕಾರಣಕ್ಕೆ ಬ್ರಹ್ಮಪುತ್ರ ನೀರು ಕೆಂಪಾಗುತ್ತದೆ ಎಂಬ ನಂಬಿಕೆ ಇದೆ. ಮುಟ್ಟಾದ 3 ದಿನಗಳ ಕಾಲ ಈ ದೇವಾಲಯ ಬಂದ್ ಮಾಡ್ತಾರೆ. ದೇವಿ ಮುಟ್ಟಾದ ಬಟ್ಟೆಯನ್ನು ಪ್ರಸಾದದ ರೂಪದಲ್ಲಿ ಹಂಚಲಾಗುತ್ತೆ. ಅನೇಕ ಗಣ್ಯ ವ್ಯಕ್ತಿಗಳು ಈ ದೇಗುಲಕ್ಕೆ ಬಂದು ಪೂಜೆ ಸಲ್ಲಿಸುತ್ತಾರೆ. ದೊಡ್ಡ ದೊಡ್ಡ ನಟರು, ರಾಜಕಾರಣಿ, ಉದ್ಯಮಿದಾರರು ನೆಚ್ಚಿನ ತಾಣ ಇದಾಗಿದೆ. ಸದ್ಯ ಪವರ್​ ಫುಲ್​ ದೇವಸ್ಥಾನಕ್ಕೆ ನಟಿ ಕಾರುಣ್ಯಾ ರಾಮ್​ ಭೇಟಿ ಕೊಟ್ಟು ಖುಷಿ ಪಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment