/newsfirstlive-kannada/media/post_attachments/wp-content/uploads/2025/02/Swapna-Krishna.jpg)
ವಸಂತ ಪಂಚಮಿ ಪವಿತ್ರ ದಿನದಂದು ಮಹಾಕುಂಭಮೇಳದಲ್ಲಿ ಭಕ್ತಕೋಟಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದೆ. ದಿನದಿಂದ ದಿನಕ್ಕೆ ಭಕ್ತಾದಿಗಳು ಪ್ರಯಾಗರಾಜ್ಗೆ ಬರುವ ಸಂಖ್ಯೆ ಏರಿಕೆ ಗತಿಯಲ್ಲಿಯೇ ಸಾಗುತ್ತಿದೆ. ಇದೀಗ ಪ್ರಯಾಗ್ರಾಜ್ ಮಹಾ ಕುಂಭಮೇಳದಲ್ಲಿ ಕನ್ನಡದ ಸ್ಟಾರ್ ನಿರ್ದೇಶಕಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸರಿಗಮಪ ವೇದಿಕೆಗೆ ಶಿವಣ್ಣ ಸಡನ್ ಎಂಟ್ರಿ ಕೊಡಲು ಒಂದು ಬಹುಮುಖ್ಯ ಕಾರಣವಿತ್ತು; ಏನದು?
ಹೌದು, ಕನ್ನಡ ಕಿರುತೆರೆಯಲ್ಲಿ ವೀಕ್ಷಕರಿಗೆ ವಿಭಿನ್ನತೆಯನ್ನು ಉಣ ಬಡಿಸುತ್ತಿದ್ದ ಸ್ಟಾರ್ ನಿರ್ದೇಶಕಿ, ನಿರ್ಮಾಪಕಿ ಸ್ವಪ್ನ ಕೃಷ್ಣ ಅವರು ಮಹಾ ಕುಂಭಾಮೇಳದಲ್ಲಿ ಭಾಗಿಯಾಗಿದ್ದಾರೆ. ಸ್ವಪ್ನ ಕೃಷ್ಣ ಅವರು ಪ್ರಯಾಗ್ರಾಜ್ಗೆ ಹೋಗಿರುವ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಟಿ, ನಿರ್ದೇಶಕಿ, ನಿರ್ಮಾಪಕಿಯಾಗಿ ಕಿರುತೆರೆ ಹಾಗೂ ಸ್ಯಾಂಡಲ್ವುಡ್ನಲ್ಲಿ ಹೆಸರು ಮಾಡಿದ್ದಾರೆ.
View this post on Instagram
ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈಗಾಗಲೇ ಇಂದು ವಸಂತ ಪಂಚಮಿ ಇರುವುದರಿಂದ ಸುಮಾರು 62 ಲಕ್ಷ ಜನರು ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದೇಶ ವಿದೇಶಗಳಿಂದ ಭಕ್ತರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿ ಪುನೀತರಾಗುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ