ಗುಟ್ಟಾಗಿ ‌ಚಂದನ್‌ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ 'ಸೀತಾ ವಲ್ಲಭ' ನಟಿ ಸುಪ್ರೀತಾ ಸತ್ಯನಾರಾಯಣ್

author-image
Veena Gangani
Updated On
ಗುಟ್ಟಾಗಿ ‌ಚಂದನ್‌ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ 'ಸೀತಾ ವಲ್ಲಭ' ನಟಿ ಸುಪ್ರೀತಾ ಸತ್ಯನಾರಾಯಣ್
Advertisment
  • ಸೀತಾ ವಲ್ಲಭದಲ್ಲಿ ಮೈಥಲಿ ಪಾತ್ರದ ನಟಿ ಸುಪ್ರೀತಾ ಅಭಿನಯ
  • ಸೀತಾ ವಲ್ಲಭ ಧಾರಾವಾಹಿ ಮೂಲಕ ಫೇಮಸ್ ಆಗಿದ್ದ ನಟಿ
  • ಭಾವಿ ಪತಿಗಾಗಿ ಉದ್ದುದ್ದ ಕವಿತೆ ಬರೆದ ಸುಪ್ರೀತಾ ಸತ್ಯನಾರಾಯಣ್‌

ಕನ್ನಡ ಕಿರುತೆರೆಯಲ್ಲಿ ವಿಭಿನ್ನವಾಗಿ ಮೂಡಿ ಬರುತ್ತಿತ್ತು ಸೀತಾ ವಲ್ಲಭ ಧಾರಾವಾಹಿ. ಇದೇ ಧಾರಾವಾಹಿ ಮೂಲಕ ಸಖತ್​ ಫೇಮಸ್​ ಆಗಿದ್ದ ನಟಿ ಎಂದರೆ ಸುಪ್ರೀತಾ ಸತ್ಯನಾರಾಯಣ್‌. ಇದೀಗ ನಟಿ ಸುಪ್ರೀತಾ ಸತ್ಯನಾರಾಯಣ್‌ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಗಿಲ್ಲಿ ಇಲ್ಲದ ಗಗನಾ ಎಲ್ಲಿ ಕಾಂತ.. ಭರ್ಜರಿ ಬ್ಯಾಚುಲರ್ಸ್ ವೇದಿಕೆ ಮೇಲೆ ಧೂಳೆಬ್ಬಿಸಿದ ನಟ; VIDEO

publive-image

ಹೌದು, ಕನ್ನಡ ಕಿರುತೆರೆ ನಟಿ ಸುಪ್ರೀತಾ ಸತ್ಯನಾರಾಯಣ್ ಸೀತಾ ವಲ್ಲಭ ಧಾರಾವಾಹಿಯಲ್ಲಿ ಮೈಥಲಿ ಪಾತ್ರದ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದುಕೊಂಡಿದ್ದರು. ಅಲ್ಲದೇ ಗಿರೀಶ್ ವೈರಮುಡಿ ನಿರ್ದೇಶನದ ರಹದಾರಿ ಚಿತ್ರದ ಮೂಲಕ ಸಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ನಟಿ ಸುಪ್ರೀತಾ ಸತ್ಯನಾರಾಯಣ್ ಗುಟ್ಟಾಗಿ ಎಂಗೇಜ್‌ ಆಗಿದ್ದಾರೆ. ಈ ವಿಚಾರವನ್ನು ಖುದ್ದು ಕೆಲವು ದಿನಗಳ ಬಳಿಕ ಸುಪ್ರೀತಾ ಸತ್ಯನಾರಾಯಣ್ ಅವರೇ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಟೋ ಶೇರ್​ ಮಾಡಿಕೊಳ್ಳುವ ಮೂಲಕ ಬಹಿರಂಗ ಪಡಿಸಿದ್ದಾರೆ. ಕಳೆದ ಮಾರ್ಚ್‌ ತಿಂಗಳಿನಲ್ಲಿ ಸುಪ್ರೀತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಹೊಸ ಚಾಪ್ಟರ್‌ ಇಲ್ಲಿಂದ ಶುರು. ಹಲೋ ಎನ್ನುವ ನಿನ್ನ ಧ್ವನಿಯಿಂದಲೇ ಪ್ರೀತಿ ಶುರುವಾದ ಬಗ್ಗೆ ಹೇಳಲಾ? ಅಥವಾ ನಿನ್ನ ನಗು ನೋಡಿದಾಗ ನನ್ನ ಹೊಟ್ಟೆಯೊಳಗಡೆ ಚಿಟ್ಟೆ ಹಾರಾಟ ಮಾಡೋ ಬಗ್ಗೆ ಹೇಳಲಾ? ನಿನ್ನ ನಗು ಅಂದ್ರೆ ತುಂಬ ಇಷ್ಟ. ಆ ನಗುವಿಗೋಸ್ಕರ ನಾನು ಏನು ಬೇಕಿದ್ರೂ ಮಾಡುವೆ. ಖುಷಿಗೋಸ್ಕರ ನಾನು ದೇವರ ಬಳಿ ಪ್ರಾರ್ಥಿಸಿದೆ. ಅವನು ನನಗೆ ನಿಮ್ಮನ್ನು ಕೊಟ್ಟ. ನನ್ನ ಜೀವನಕ್ಕೆ ಬಂದಿದ್ದಕ್ಕೆ, ನಿಜವಾದ ಲವ್‌ ಏನು ಎಂದು ಅರ್ಥ ಮಾಡಿಸಿದ್ದಕ್ಕೆ, ನನ್ನ ಜೀವನವನ್ನು ಸುಂದರ ಮಾಡಿದ್ದಕ್ಕೆ ಥ್ಯಾಂಕ್ಯೂ. ನಿನ್ನ ನಗು, ಶಾಂತಿ, ಖುಷಿಗೋಸ್ಕರ ನಾನು ಪ್ರಾಮೀಸ್‌ ಮಾಡುವೆ. ನಿನ್ನ ಜೀವನದುದ್ದಕ್ಕೂ ಇರುವೆ ಎಂದು ಮಾತುಕೊಡ್ತೀನಿ. ಇಬ್ಬರೂ ಒಟ್ಟಿಗೆ ಜೀವನ ಕಳೆಯೋಣ. ಐ ಲವ್‌ ಯು ಕಂದ. ನನ್ನ ಹೃದಯ ನಿನ್ನದು.

ತಾಯಿ ತಂದೆ ಎಲ್ಲ ನೀನೆ
ಯಾಕೆ ಬೇರೆ ನಂಟು
ಸಾಕು ಎಲ್ಲ ಸಿರಿಗಳ ಮೀರೋ
ನಿನ್ನ ಪ್ರೀತಿ ಗಂಟು
ಜಗವೆಲ್ಲ ಮಾದರಿ ಈ ಪ್ರೇಮಕೆ
ನನ್ನ ಎದೆಯಾಳೋ ಧಣಿ ನೀನೆ
ನಿನ್ನ ಸಹಚಾರಿಣಿ ನಾನೇ

publive-image

ಯಾರು ಈ ಚಂದನ್‌ ಶೆಟ್ಟಿ?

ನಟಿ ಸುಪ್ರೀತಾ ಸತ್ಯನಾರಾಯಣ್‌ ಅವರು ಚಂದನ್‌ ಶೆಟ್ಟಿ ಎನ್ನುವವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಚಂದನ್‌ ಶೆಟ್ಟಿ ಅವರು ಇನ್‌ಸ್ಟಾಗ್ರಾಮ್​ನಲ್ಲಿ ಡಿಜಿಟಲ್‌ ಕ್ರಿಯೇಟರ್‌, ಸಾಫ್ಟ್‌ವೇರ್‌ ಉದ್ಯೋಗಿ ಎಂದು ಬರೆದುಕೊಂಡಿದ್ದಾರೆ. ಕೊಡಗಿನಿಂದ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಇನ್​ಸ್ಟಾ ಖಾತೆಯಲ್ಲಿ ದೇಶ ವಿದೇಶ ಸುತ್ತಿರೋ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment