ಕಾಂತಾರ-1 ತಂಡಕ್ಕೆ ಮತ್ತೆ ಶಾಕ್​​.. ಶೂಟಿಂಗ್ ಸೆಟ್​ನಲ್ಲಿ ಮತ್ತೊಂದು ಅವಘಡ

author-image
Veena Gangani
Updated On
ಅಂದು ಬಿಸ್ಲೆರಿ ನೀರು ಮಾರುತ್ತಿದ್ದ ಹುಡುಗ ರಿಷಬ್.. ಯಶಸ್ಸಿನ ಹಿಂದಿದೆ ಸಂಖ್ಯಾಶಾಸ್ತ್ರದ ಒಂದು ರಹಸ್ಯ..!
Advertisment
  • ಕಾಂತಾರ-1 ಶೂಟಿಂಗ್ ಸೆಟ್​ನಲ್ಲಿ ಮತ್ತೊಂದು ಮಹಾ ದುರಂತ
  • ನಟ ರಿಷಬ್ ಶೆಟ್ಟಿ ಸೇರಿ 30 ಮಂದಿ ಪ್ರಾಣಾಪಾಯದಿಂದ ಪಾರು
  • ತಂಡ 15 ದಿನ ಶೂಟಿಂಗ್ ಮಾಡಲು ಯೋಜನೆ ರೂಪಿಸಲಾಗಿತ್ತು

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಸಿನಿಮಾ ತಂಡಕ್ಕೆ ಶಾಕ್​ ಮೇಲೆ ಶಾಕ್​ ಎದುರಾಗುತ್ತಿದೆ. ಮೊನ್ನೆಯಷ್ಟೇ ಮಿಮಿಕ್ರಿ ಕಲಾವಿದ ವಿಜು ವಿ.ಕೆ ಅವರು ಹೋಂ ಸ್ಟೇಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಈ ಘಟನೆ ಮಾಸುವ ಮುನ್ನವೆ ಕಾಂತಾರ ಚಾಪ್ಟರ್ 1 ಚಿತ್ರೀಕರಣದ ವೇಳೆ ಮತ್ತೊಂದು ಅವಘಡ ಸಂಭವಿಸಿದೆ.

ಇದನ್ನೂ ಓದಿ: ಕಾಂತಾರ ಚಾಪ್ಟರ್ 1 ಸಹ ಕಲಾವಿದ ಆಗುಂಬೆ ಹೋಂ ಸ್ಟೇಯಲ್ಲಿ ನಿಧನ; ಆಗಿದ್ದೇನು?

publive-image

ಹೌದು, ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಸಿನಿಮಾದ ಶೂಟಿಂಗ್​ ವೇಳೆ ಬೋಟ್ ಒಂದು ಮಗುಚಿ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿರುವ ಮಾಸ್ತಿಕಟ್ಟೆ ಮಾಣಿ ಜಲಾಶಯದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್​ ನಡೆಯುತ್ತಿತ್ತು. ಇದೇ ವೇಳೆ ಏಕಾಏಕಿ ದೋಣಿ ಮಗುಚಿ ಬಿದ್ದಿದೆ.

ಇನ್ನೂ, ಮಗುಚಿ ಬಿದ್ದ ದೋಣಿಯಲ್ಲಿ ನಟ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು ಇದ್ದರು. ಆದ್ರೆ ದಿಢೀರ್​ ಅಂತ ಬೋಟು ಮಗುಚಿದ್ದರಿಂದ ಕಲಾವಿದರು ಹಾಗೂ ತಂತ್ರಜ್ಞರು ಈಜುತ್ತಲೇ ದಡ ಸೇರಿದ್ದಾರೆ. ಆದ್ರೆ ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಜೀವ ಹಾನಿ ಆಗಿಲ್ಲ.

publive-image

ಕಾಂತಾರ ಸಿನಿಮಾ ತಂಡ 15 ದಿನ ಶೂಟಿಂಗ್ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ ಈಗ ಕ್ಯಾಮೆರಾ ಸೇರಿದಂತೆ ಬೋಟ್​ನಲ್ಲಿದ್ದ ಎಲ್ಲಾ ಪ್ರಾಪರ್ಟಿಗಳು ನೀರು ಪಾಲಾಗಿವೆ. ಸಿನಿಮಾ ರಿಲೀಸ್​ ಆಗುವ ಮುನ್ನವೇ ಒಂದರ ಮೇಲೊಂದು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬಂತೆ ಈಗಾಗಲೇ ಸಿನಿಮಾನಲ್ಲಿ ನಟಿಸಿದ್ದ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಮತ್ತೊಂದು ದೊಡ್ಡ ಅವಘಡ ಸಂಭವಿಸಿದ್ದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment