ವಿಪರೀತ ಸೆಖೆಯೆಂದು ಮನೆಯ ಟೆರೇಸ್ ಮೇಲೆ ಹೋಗಿ ಮಲಗಿದ್ದ ಶಿಕ್ಷಕ
ಬೆಳಗಾಗುಷ್ಟರಲ್ಲಿ ಸಾವನ್ನಪ್ಪಿದ 55 ವರ್ಷ ವಯಸ್ಸಿನ ಶಾಲಾ ಶಿಕ್ಷಕ
ಗಾಢ ನಿದ್ರೆಯಲ್ಲಿ ಅಂಥದ್ದೇನಾಯ್ತು? ಶಿಕ್ಷಕನ ಸಾವಿಗೆ ಸೆಖೆ ಕಾರಣವೇ?
ಉಡುಪಿ: ಸೆಖೆಯ ಹಿನ್ನಲೆ ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಅಜೆಕಾರು ಆಶ್ರಯನಗರ ನಿವಾಸಿ ಸುಂದರ ನಾಯ್ಕ್ ( 55) ಎಂದು ಗುರುತಿಸಲಾಗಿದೆ.
ಸುಂದರ ನಾಯ್ಕ್ ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದರು. ಬೆಳಿಗ್ಗೆ 6:30 ವೇಳೆಗೆ ಗಮನಿಸಿದಾಗ ಟೆರೇಸ್ ಮೇಲಿಂದ ಕೆಳಗೆ ಬಿದ್ದಿರೋದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಮಳೆಗೆ ಬೈಕ್ ಸವಾರನ ಮೇಲೆ ಬಿದ್ದ ಬೃಹತ್ ಮರ.. ಕಾರು ಜಖಂ.. ಪರಿಸ್ಥಿತಿ ಹೇಗಿದೆ?
ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ. ಇನ್ನು ನೆಚ್ಚಿನ ಶಾಲಾ ಶಿಕ್ಷಕ ಸಾವನ್ನಪ್ಪಿದ ಸಂಗತಿ ತಿಳಿದು ವಿದ್ಯಾರ್ಥಿಗಳು ಕಣ್ಣೀರು ಸುರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿಪರೀತ ಸೆಖೆಯೆಂದು ಮನೆಯ ಟೆರೇಸ್ ಮೇಲೆ ಹೋಗಿ ಮಲಗಿದ್ದ ಶಿಕ್ಷಕ
ಬೆಳಗಾಗುಷ್ಟರಲ್ಲಿ ಸಾವನ್ನಪ್ಪಿದ 55 ವರ್ಷ ವಯಸ್ಸಿನ ಶಾಲಾ ಶಿಕ್ಷಕ
ಗಾಢ ನಿದ್ರೆಯಲ್ಲಿ ಅಂಥದ್ದೇನಾಯ್ತು? ಶಿಕ್ಷಕನ ಸಾವಿಗೆ ಸೆಖೆ ಕಾರಣವೇ?
ಉಡುಪಿ: ಸೆಖೆಯ ಹಿನ್ನಲೆ ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಅಜೆಕಾರು ಆಶ್ರಯನಗರ ನಿವಾಸಿ ಸುಂದರ ನಾಯ್ಕ್ ( 55) ಎಂದು ಗುರುತಿಸಲಾಗಿದೆ.
ಸುಂದರ ನಾಯ್ಕ್ ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದರು. ಬೆಳಿಗ್ಗೆ 6:30 ವೇಳೆಗೆ ಗಮನಿಸಿದಾಗ ಟೆರೇಸ್ ಮೇಲಿಂದ ಕೆಳಗೆ ಬಿದ್ದಿರೋದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಮಳೆಗೆ ಬೈಕ್ ಸವಾರನ ಮೇಲೆ ಬಿದ್ದ ಬೃಹತ್ ಮರ.. ಕಾರು ಜಖಂ.. ಪರಿಸ್ಥಿತಿ ಹೇಗಿದೆ?
ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ. ಇನ್ನು ನೆಚ್ಚಿನ ಶಾಲಾ ಶಿಕ್ಷಕ ಸಾವನ್ನಪ್ಪಿದ ಸಂಗತಿ ತಿಳಿದು ವಿದ್ಯಾರ್ಥಿಗಳು ಕಣ್ಣೀರು ಸುರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ