ಮಾಜಿ ಸಿಎಂಗಳಾದ ಬೊಮ್ಮಾಯಿ, ಶೆಟ್ಟರ್ಗೆ ಸಿಗದ ಸಚಿವ ಸ್ಥಾನ
ಮೂವರಿಗೆ ಕ್ಯಾಬಿನೆಟ್ ದರ್ಜೆ, ಇಬ್ಬರಿಗೆ ರಾಜ್ಯ ಖಾತೆ ಹಂಚಿಕೆ
ಒಕ್ಕಲಿಗ ಕೋಟಾದಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ
ದೇಶದಲ್ಲಿ ಮತ್ತೊಮ್ಮೆ ಮೋದಿ ಯುಗಾರಂಭ ಆಗಿದೆ. ಇವತ್ತು ಗೋಧೂಳಿಯ ಸಮಯ ಮುಗಿದು ಸಂಜೆಗತ್ತಲು ಆವರಿಸ್ತಿದ್ದಂತೆ ಶುಭಘಳಿಗೆಯಲ್ಲಿ ಮೋದಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಮೋದಿ ಜೊತೆ ಹಲವರು ಸಚಿವರಾಗಿ ಸಂಪುಟ ಸೇರ್ಪಡೆಯಾಗಿದ್ದಾರೆ. ಕರ್ನಾಟಕದ ಐವರಿಗೆ ಮೋದಿ ಕ್ಯಾಬಿನೆಟ್ನಲ್ಲಿ ಸ್ಥಾನ ಲಭಿಸಿದ್ದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಮುದಾಯವಾರು ಸಚಿವ ಸ್ಥಾನ ನೀಡಿದ್ದು ಪ್ರಲ್ಹಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ ಸೇರಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದೆ. ಶೋಭಾ ಕರಂದ್ಲಾಜೆ ಹಾಗೂ ವಿ.ಸೋಮಣ್ಣಗೆ ರಾಜ್ಯ ಖಾತೆ ನೀಡಲಾಗಿದೆ. ಕಳೆದ ಬಾರಿ ಕೃಷಿ ಖಾತೆ ರಾಜ್ಯ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಸಹ ಈ ಬಾರಿಯೂ ರಾಜ್ಯ ಖಾತೆ ಒಲಿದಿದೆ. ಇನ್ನು ಕಳೆದ ವಿಧಾನಸಭೆಯಲ್ಲಿ ಸೋತು ತುಮಕೂರು ಲೋಕಸಭಾದಿಂದ ಗೆದ್ದಿರುವ ಸೋಮಣ್ಣಗೆ ಮೊದಲ ಬಾರಿಗೆ ಕೇಂದ್ರ ಸಚಿವರಾಗುವ ಭಾಗ್ಯ ಲಭಿಸಿದೆ.
3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರೋ ಮೋದಿ ಕನಸಿನ ಕ್ಯಾಬಿನೆಟ್ನಲ್ಲಿ ಕರ್ನಾಟಕದ ಐವರಿಗೆ ಮಂತ್ರಿಸ್ಥಾನದ ಭಾಗ್ಯ ಸಿಕ್ಕಿದೆ. ಮೂವರಿಗೆ ಕ್ಯಾಬಿನೆಟ್ ಖಾತೆ ಹಾಗೂ ಇಬ್ಬರಿಗೆ ರಾಜ್ಯ ಖಾತೆಗಳನ್ನು ನೀಡಲಾಗಿದೆ. ಮಾಜಿ ಸಿಎಂಗಳಾದ ಬೊಮ್ಮಾಯಿ, ಜಗದೀಶ್ ಶೆಟ್ಟರ್ಗೆ ಸಚಿವ ಸ್ಥಾನ ಮಿಸ್ ಆಗಿದೆ, ಡಾ.ಸಿ.ಎನ್.ಮಂಜುನಾಥ್ಗೂ ಸಚಿವ ಸ್ಥಾನ ಜಸ್ಟ್ ಮಿಸ್ ಆಗಿದೆ.
ಇದನ್ನೂ ಓದಿ: ಬರೋಬ್ಬರಿ 155 ನಿಮಿಷ.. ಪ್ರಧಾನಿ ಮೋದಿ 3.O ಸಂಪುಟ ಸೇರಿದ ಒಟ್ಟು ಕೇಂದ್ರ ಸಚಿವರು ಎಷ್ಟು?
ಮೋದಿ ಸಂಪುಟದಲ್ಲಿ ಜಗದೀಶ್ ಶೆಟ್ಟರ್, ಬೊಮ್ಮಾಯಿಗಿಲ್ಲ ಸ್ಥಾನ
ಇನ್ನು ಮೋದಿ ಕನಸಿನ ಕ್ಯಾಬಿನೆಟ್ನಲ್ಲಿ ಸ್ಥಾನ ಪಡೆಯಲು ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್ ವಿಫಲರಾಗಿದ್ದಾರೆ. ಮೋದಿ ಸಂಪುಟದಲ್ಲಿ ಈ ಇಬ್ಬರಿಗೂ ಸ್ಥಾನ ನೀಡಲಾಗುತ್ತೆ ಅಂತ ಹೇಳಲಾಗ್ತಿತ್ತು. ಆದ್ರೆ ಸಚಿವ ಸ್ಥಾನ ಸಿಗದೇ ಇರೋದು ಈ ಇಬ್ಬರನ್ನು ನಿರಾಸೆಗೆ ತಳ್ಳಿದೆ. ಈ ಇಬ್ಬರು ನಾಯಕರನ್ನು ಸಮಾಧಾನಪಡಿಸುವ ಯತ್ನ ನಡೆದಿದೆ.
ಸಂಸದ ಡಾ.ಸಿ.ಎನ್.ಮಂಜುನಾಥ್ಗೂ ಸಿಗದ ಮಂತ್ರಿಗಿರಿ!
ಇನ್ನು ರಾಜ್ಯದಿಂದ ಆಯ್ಕೆಯಾದ 17 ಬಿಜೆಪಿ ಸಂಸದರಲ್ಲಿ ಹಲವರು ಕೇಂದ್ರ ಸಚಿವರಾಗುವ ವಿಶ್ವಾಸ ಹೊಂದಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭದ್ರಕೋಟೆಯನ್ನ ಛಿದ್ರಗೊಳಿಸಿದ್ದ ಡಾ.ಸಿ.ಎನ್. ಮಂಜುನಾಥ್ಗೂ ಸಚಿವ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದ್ರೆ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ.. ಹೀಗಾಗಿ ಎನ್ಡಿಎ ಮೈತ್ರಿಕೂಟದ ಇತರೆ ಪಕ್ಷಗಳಿಗೂ ಸ್ಥಾನ ನೀಡಲೇಬೇಕಾದ ಅನಿವಾರ್ಯತೆಯಲ್ಲಿ ಬಿಜೆಪಿ ನಾಯಕರಿಗೆ ಮಂತ್ರಿಸ್ಥಾನ ಮಿಸ್ ಆಗಿದೆ. ಒಟ್ಟಾರೆ, ಈ ಬಾರಿಯ ಮೋದಿ ಸಂಪುಟದಲ್ಲಿ ಕರ್ನಾಟಕದ ಎಷ್ಟು ಮಂದಿಗೆ ಸ್ಥಾನ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಮುಂದೆ ಸಂಪುಟ ವಿಸ್ತರಣೆ ಆದಲ್ಲಿ ಕರ್ನಾಟಕದ ಸಂಸದರಿಗೆ ಸ್ಥಾನ ಸಿಗುವ ನಿರೀಕ್ಷೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಾಜಿ ಸಿಎಂಗಳಾದ ಬೊಮ್ಮಾಯಿ, ಶೆಟ್ಟರ್ಗೆ ಸಿಗದ ಸಚಿವ ಸ್ಥಾನ
ಮೂವರಿಗೆ ಕ್ಯಾಬಿನೆಟ್ ದರ್ಜೆ, ಇಬ್ಬರಿಗೆ ರಾಜ್ಯ ಖಾತೆ ಹಂಚಿಕೆ
ಒಕ್ಕಲಿಗ ಕೋಟಾದಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ
ದೇಶದಲ್ಲಿ ಮತ್ತೊಮ್ಮೆ ಮೋದಿ ಯುಗಾರಂಭ ಆಗಿದೆ. ಇವತ್ತು ಗೋಧೂಳಿಯ ಸಮಯ ಮುಗಿದು ಸಂಜೆಗತ್ತಲು ಆವರಿಸ್ತಿದ್ದಂತೆ ಶುಭಘಳಿಗೆಯಲ್ಲಿ ಮೋದಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಮೋದಿ ಜೊತೆ ಹಲವರು ಸಚಿವರಾಗಿ ಸಂಪುಟ ಸೇರ್ಪಡೆಯಾಗಿದ್ದಾರೆ. ಕರ್ನಾಟಕದ ಐವರಿಗೆ ಮೋದಿ ಕ್ಯಾಬಿನೆಟ್ನಲ್ಲಿ ಸ್ಥಾನ ಲಭಿಸಿದ್ದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಮುದಾಯವಾರು ಸಚಿವ ಸ್ಥಾನ ನೀಡಿದ್ದು ಪ್ರಲ್ಹಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ ಸೇರಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದೆ. ಶೋಭಾ ಕರಂದ್ಲಾಜೆ ಹಾಗೂ ವಿ.ಸೋಮಣ್ಣಗೆ ರಾಜ್ಯ ಖಾತೆ ನೀಡಲಾಗಿದೆ. ಕಳೆದ ಬಾರಿ ಕೃಷಿ ಖಾತೆ ರಾಜ್ಯ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಸಹ ಈ ಬಾರಿಯೂ ರಾಜ್ಯ ಖಾತೆ ಒಲಿದಿದೆ. ಇನ್ನು ಕಳೆದ ವಿಧಾನಸಭೆಯಲ್ಲಿ ಸೋತು ತುಮಕೂರು ಲೋಕಸಭಾದಿಂದ ಗೆದ್ದಿರುವ ಸೋಮಣ್ಣಗೆ ಮೊದಲ ಬಾರಿಗೆ ಕೇಂದ್ರ ಸಚಿವರಾಗುವ ಭಾಗ್ಯ ಲಭಿಸಿದೆ.
3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರೋ ಮೋದಿ ಕನಸಿನ ಕ್ಯಾಬಿನೆಟ್ನಲ್ಲಿ ಕರ್ನಾಟಕದ ಐವರಿಗೆ ಮಂತ್ರಿಸ್ಥಾನದ ಭಾಗ್ಯ ಸಿಕ್ಕಿದೆ. ಮೂವರಿಗೆ ಕ್ಯಾಬಿನೆಟ್ ಖಾತೆ ಹಾಗೂ ಇಬ್ಬರಿಗೆ ರಾಜ್ಯ ಖಾತೆಗಳನ್ನು ನೀಡಲಾಗಿದೆ. ಮಾಜಿ ಸಿಎಂಗಳಾದ ಬೊಮ್ಮಾಯಿ, ಜಗದೀಶ್ ಶೆಟ್ಟರ್ಗೆ ಸಚಿವ ಸ್ಥಾನ ಮಿಸ್ ಆಗಿದೆ, ಡಾ.ಸಿ.ಎನ್.ಮಂಜುನಾಥ್ಗೂ ಸಚಿವ ಸ್ಥಾನ ಜಸ್ಟ್ ಮಿಸ್ ಆಗಿದೆ.
ಇದನ್ನೂ ಓದಿ: ಬರೋಬ್ಬರಿ 155 ನಿಮಿಷ.. ಪ್ರಧಾನಿ ಮೋದಿ 3.O ಸಂಪುಟ ಸೇರಿದ ಒಟ್ಟು ಕೇಂದ್ರ ಸಚಿವರು ಎಷ್ಟು?
ಮೋದಿ ಸಂಪುಟದಲ್ಲಿ ಜಗದೀಶ್ ಶೆಟ್ಟರ್, ಬೊಮ್ಮಾಯಿಗಿಲ್ಲ ಸ್ಥಾನ
ಇನ್ನು ಮೋದಿ ಕನಸಿನ ಕ್ಯಾಬಿನೆಟ್ನಲ್ಲಿ ಸ್ಥಾನ ಪಡೆಯಲು ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್ ವಿಫಲರಾಗಿದ್ದಾರೆ. ಮೋದಿ ಸಂಪುಟದಲ್ಲಿ ಈ ಇಬ್ಬರಿಗೂ ಸ್ಥಾನ ನೀಡಲಾಗುತ್ತೆ ಅಂತ ಹೇಳಲಾಗ್ತಿತ್ತು. ಆದ್ರೆ ಸಚಿವ ಸ್ಥಾನ ಸಿಗದೇ ಇರೋದು ಈ ಇಬ್ಬರನ್ನು ನಿರಾಸೆಗೆ ತಳ್ಳಿದೆ. ಈ ಇಬ್ಬರು ನಾಯಕರನ್ನು ಸಮಾಧಾನಪಡಿಸುವ ಯತ್ನ ನಡೆದಿದೆ.
ಸಂಸದ ಡಾ.ಸಿ.ಎನ್.ಮಂಜುನಾಥ್ಗೂ ಸಿಗದ ಮಂತ್ರಿಗಿರಿ!
ಇನ್ನು ರಾಜ್ಯದಿಂದ ಆಯ್ಕೆಯಾದ 17 ಬಿಜೆಪಿ ಸಂಸದರಲ್ಲಿ ಹಲವರು ಕೇಂದ್ರ ಸಚಿವರಾಗುವ ವಿಶ್ವಾಸ ಹೊಂದಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭದ್ರಕೋಟೆಯನ್ನ ಛಿದ್ರಗೊಳಿಸಿದ್ದ ಡಾ.ಸಿ.ಎನ್. ಮಂಜುನಾಥ್ಗೂ ಸಚಿವ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದ್ರೆ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ.. ಹೀಗಾಗಿ ಎನ್ಡಿಎ ಮೈತ್ರಿಕೂಟದ ಇತರೆ ಪಕ್ಷಗಳಿಗೂ ಸ್ಥಾನ ನೀಡಲೇಬೇಕಾದ ಅನಿವಾರ್ಯತೆಯಲ್ಲಿ ಬಿಜೆಪಿ ನಾಯಕರಿಗೆ ಮಂತ್ರಿಸ್ಥಾನ ಮಿಸ್ ಆಗಿದೆ. ಒಟ್ಟಾರೆ, ಈ ಬಾರಿಯ ಮೋದಿ ಸಂಪುಟದಲ್ಲಿ ಕರ್ನಾಟಕದ ಎಷ್ಟು ಮಂದಿಗೆ ಸ್ಥಾನ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಮುಂದೆ ಸಂಪುಟ ವಿಸ್ತರಣೆ ಆದಲ್ಲಿ ಕರ್ನಾಟಕದ ಸಂಸದರಿಗೆ ಸ್ಥಾನ ಸಿಗುವ ನಿರೀಕ್ಷೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ