/newsfirstlive-kannada/media/post_attachments/wp-content/uploads/2024/06/Almatti-dam.webp)
ವಿಜಯಪುರ: ಕೃಷ್ಣಾ ನದಿ ತೀರದಲ್ಲಿ ಸತತ ಮಳೆಯಾಗುತ್ತಿದೆ. ಈ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ.
ಆಲಮಟ್ಟಿ ಜಲಾಶಯಕ್ಕೆ ದಿನೇ ದಿನೇ ಒಳಹರಿವು ಅಧಿಕವಾಗುತ್ತಿದ್ದು, ಇದರಿಂದ ರೈತರು ಸಂತಸಗೊಂಡಿದ್ದಾರೆ. ಜೊತೆಗೆ ಜಲಾಶಯದ ನೀರಿನ ಮಟ್ಟ ಹೆಚ್ಚಾಗುತ್ತಿದೆ.
ಇಂದು 6,714 ಕ್ಯೂಸೆಕ್​ ಒಳಹರಿವು ದಾಖಲಾಗಿದೆ. ಮೂರೇ ದಿನದಲ್ಲಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಳವಾಗಿದೆ.
ಇದನ್ನೂ ಓದಿ: ಬದಲಾಯ್ತು ಶ್ರೀಲೀಲಾ ಲಕ್​.. ಬಾಲಿವುಡ್​ನತ್ತ ಹೊರಟ ಕನ್ನಡದ ನಟಿ.. ಯಾವ ಸಿನಿಮಾ ಗೊತ್ತಾ?
ನಿನ್ನೆವರೆಗೆ 20.832 ಟಿಎಂಸಿ ನೀರು ಸಂಗ್ರಹವಿತ್ತು. ಆದರೆ ಇಂದು 21.374 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ಓವರ್​ ಟೇಕ್​ ಮಾಡಲು ಹೋಗಿ ಟೆಂಪೋ ಪಲ್ಟಿ.. ಓರ್ವ ಸಾವು, ಮತ್ತೋರ್ವ ಗಂಭೀರ
ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಒಳಹರಿವು ಇರಲಿಲ್ಲ. ಆದರೆ ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ. ಇದರಿಂದ ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us