/newsfirstlive-kannada/media/post_attachments/wp-content/uploads/2025/06/rcb-fan-injury2.jpg)
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವು, ನೋವಿನ ಸಂಖ್ಯೆ ಏರಿಕೆ ಆಗುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ.. 7 ಮಂದಿ ಜೀವ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತ ಸಂಭವಿಸಿ ಹಲವರು ಜೀವನ್ಮರಣ ಹೋರಾಟ ನಡೆಸ್ತಿದ್ದಾರೆ. ಜನಸಂದಣಿ ನಿಯಂತ್ರಿಸಲು ಯಾವುದೇ ಕ್ರಮಗಳಿಲ್ಲ. ಮೂಲಭೂತ ವ್ಯವಸ್ಥೆಗಳಿಲ್ಲ. ಕೇವಲ ಅವ್ಯವಸ್ಥೆ. ಅಮಾಯಕ ಜನರು ಜೀವ ತೆತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೀಲ್ಗಳ ಶೂಟಿಂಗ್ನಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಗಮನ ಸೆಳೆಯುವಲ್ಲಿ ನಿರತರಾಗಿದ್ದರು. ಇದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಸರ್ಕಾರದ ಕೈಗಳ ಮೇಲೆ ರಕ್ತದ ಕಲೆ ಇದೆ ಎಂದು ಬಿಜೆಪಿ ಗುಡುಗಿದೆ.
ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ; RCB ಫ್ಯಾನ್ಸ್ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ ಏರಿಕೆ
7 dead. Many are battling for life after a stampede due to the irresponsibility of Congress govt.
No crowd control measures. No basic arrangements. Just chaos.
While innocent people died, @siddaramaiah & @DKShivakumar were busy shooting reels & hogging limelight with… pic.twitter.com/IVPuQjXxcq— BJP Karnataka (@BJP4Karnataka) June 4, 2025
ಆಗಿದ್ದೇನು..?
ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ತಂಡವು ಪಂಜಾಬ್ ಕಿಂಗ್ಸ್ ಅನ್ನು ಸೋಲಿಸಿ ಟ್ರೋಫಿಗೆ ಮುತ್ತಿಟ್ಟಿತು. ಇದೇ ಖುಷಿಯಲ್ಲಿ ರಾಜ್ಯ ಸರ್ಕಾರ ವಿಧಾನಸೌಧದ ಮುಂಭಾಗದಲ್ಲಿ ಆರ್ಸಿಬಿ ಟೀಂಗೆ ಹಾಗೂ ಟೀಂನ ಮ್ಯಾನೇಜ್ಮೆಂಟ್ಗೆ ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿತ್ತು. ಇತ್ತ ಚಿನ್ನಸ್ವಾಮಿ ಮೈದಾನದಲ್ಲಿ ಆರ್ಸಿಬಿ ಮ್ಯಾನೇಜ್ಮೆಂಟ್ನಿಂದ ಸಂಭ್ರಮಾಚರಣೆ ಇಟ್ಟುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿಗೆ ಅಪಾರ ಅಭಿಮಾನಿಗಳು ಹರಿದು ಬಂದಿದೆ. ಆಗ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತ ನಡೆದು ಅನಾಹುತ ಆಗಿದೆ. ಇನ್ನು, ಕಾಲ್ತುಳಿತ ಸಂದರ್ಭದಲ್ಲಿ ಆಟಗಾರರು ವಿಧಾನಸೌಧದ ಕಾರ್ಯಕ್ರಮದಲ್ಲಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ