newsfirstkannada.com

‘ದಲಿತ ಯುವಕನನ್ನು ದಾರಿ ತಪ್ಪಿಸಿ ಕೊಂದು ಹಾಕಿದ ಬಿಜೆಪಿ ಕಾರ್ಯಕರ್ತರು’- ಕಾಂಗ್ರೆಸ್​ ಆರೋಪ

Share :

11-07-2023

    ​ಕರ್ನಾಟಕ ಬಿಜೆಪಿ ವಿರುದ್ಧ ಕಾಂಗ್ರೆಸ್​ ಗಂಭೀರ ಆರೋಪ

    ದಲಿತ ಯುವಕನನ್ನು ಕೊಂದು ಹಾಕಿದ ಬಿಜೆಪಿ ಎಂದ ಕಾಂಗ್ರೆಸ್​

    ಬಿಜೆಪಿ ದಲಿತ ಹಿಂದುಳಿದವರನ್ನು ಬಲಿ ಪಡೆದಿದ್ದೇಕೆ? ಎಂದು ಪ್ರಶ್ನೆ

ಬೆಂಗಳೂರು: ಅದ್ಯಾವುದೋ ಬ್ರಿಗೇಡ್ ಹೆಸರಲ್ಲಿ ದಲಿತ ಯುವಕನನ್ನು ದಾರಿ ತಪ್ಪಿಸಿ ಕೊಂದು ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು ಎಂದು ಕರ್ನಾಟಕ ಕಾಂಗ್ರೆಸ್​ ಟ್ವೀಟ್​ ಮಾಡಿದೆ. ದಲಿತರೆಂದರೆ ಬಿಜೆಪಿಗೆ ಯಾಕಿಷ್ಟು ಅಸಹನೆ? ದಲಿತರಿಗೆ, ಹಿಂದುಳಿದ ವರ್ಗದ ಯುವಕರಿಗೆ ಬಿಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೊಂದು ದಿನ ಬಿಳಿ ವಸ್ತ್ರ ಹೊದಿಸಲು. ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ ವರ್ಗದವರನ್ನೇ ಬಲಿ ಪಡೆಯುತ್ತಿರುವುದೇಕೆ? ಎಂದು ಪ್ರಶ್ನಿಸಿದೆ.

ಹೆಣ ಕಂಡೊಡನೆ ರಣ ಹದ್ದುಗಳಂತೆ ಹಾರಿಬರುವ ಬಿಜೆಪಿಗೆ ಈಗ ಆಘಾತ ಉಂಟಾಗಿದೆ. ಬಿಜೆಪಿ ಬೆಂಬಲಿಸುವ ಸಂಘಟನೆಯ ಕಾರ್ಯಕರ್ತನನ್ನು ಬಿಜೆಪಿಯ ಕಾರ್ಯಕರ್ತರೇ ಕೊಂದು ಹಾಕಿದ್ದಾರೆ. ಹೆಣ ರಾಜಕೀಯ ಮಾಡುವ ಬಿಜೆಪಿ ಈಗ ಉತ್ತರ ನೀಡಬೇಕು. ಬಿಜೆಪಿ ಕಾರ್ಯಕರ್ತರನ್ನು ಬೆಳೆಸುತ್ತಿದೆಯೇ, ಕೊಲೆಗಡುಕರನ್ನು ಬೆಳೆಸುತ್ತಿದೆಯೇ? ಸರ್ಕಾರದ ಮೇಲೆ ಆರೋಪಿಸಲು ಸಜ್ಜಾಗಿದ್ದ ಬಿಜೆಪಿ ನಾಯಕರು ತಮ್ಮವರೇ ಕೊಲೆಗಾರರು ಎಂದು ತಿಳಿದ ನಂತರ ಬಿಲ ಸೇರಿರುವುದೇಕೆ? ಎಂದು ಕಾಂಗ್ರೆಸ್​ ಕೆಂಡಕಾರಿದೆ.

ಕಲ್ಬುರ್ಗಿಯಲ್ಲಿ ನಡೆದ ಕಾನ್ಸ್​ಟೇಬಲ್​​ ಹತ್ಯೆಯಲ್ಲಿ ಬಿಜೆಪಿ ಮುಖಂಡನ ಪಾತ್ರ. ಟಿ ನರಸೀಪುರದಲ್ಲಿ ನಡೆದ ವೇಣುಗೋಪಾಲ್ ಹತ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರ ಕೈವಾಡ. ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋ ಬ್ಲಾಕ್ಮೇಲ್ ಪ್ರಕರಣದ ರೂವಾರಿ ABVP ಕಾರ್ಯಕರ್ತ. ಸೋಲಿನ ಹತಾಶೆಯಲ್ಲಿರುವ ಬಿಜೆಪಿ ನಮ್ಮ ಸರ್ಕಾರದ ಹೆಸರು ಕೆಡಿಸಲು ಕೊಲೆಗಡುಕರ ಮೋರ್ಚಾಕ್ಕೆ ಚಾಲನೆ ನೀಡಿದೆಯೇ? ಎಂದು ವಾಗ್ದಾಳಿ ನಡೆಸಿದೆ.

ಬಿಜೆಪಿ ನಿಯೋಗ ಭೇಟಿ

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಹತ್ಯೆಯಾದ ಹಿನ್ನೆಲೆಯಲ್ಲಿ ಸಿ.ಟಿ.ರವಿ ನೇತೃತ್ವದ ಬಿಜೆಪಿ ನಿಯೋಗ ಇಂದು ಮೃತನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ. ಮೃತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಅವರಿಗೆ ಧೈರ್ಯ ಹೇಳುವಾಗ ಅವರು ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಸಿಟಿ ರವಿಯವರು 5 ಲಕ್ಷ ರೂಪಾಯಿಯ ಚೆಕ್ ಅನ್ನು ಪೂರ್ಣಿಮಾ ಅವರಿಗೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ದಲಿತ ಯುವಕನನ್ನು ದಾರಿ ತಪ್ಪಿಸಿ ಕೊಂದು ಹಾಕಿದ ಬಿಜೆಪಿ ಕಾರ್ಯಕರ್ತರು’- ಕಾಂಗ್ರೆಸ್​ ಆರೋಪ

https://newsfirstlive.com/wp-content/uploads/2023/07/Venugopal-nayak-2.jpg

    ​ಕರ್ನಾಟಕ ಬಿಜೆಪಿ ವಿರುದ್ಧ ಕಾಂಗ್ರೆಸ್​ ಗಂಭೀರ ಆರೋಪ

    ದಲಿತ ಯುವಕನನ್ನು ಕೊಂದು ಹಾಕಿದ ಬಿಜೆಪಿ ಎಂದ ಕಾಂಗ್ರೆಸ್​

    ಬಿಜೆಪಿ ದಲಿತ ಹಿಂದುಳಿದವರನ್ನು ಬಲಿ ಪಡೆದಿದ್ದೇಕೆ? ಎಂದು ಪ್ರಶ್ನೆ

ಬೆಂಗಳೂರು: ಅದ್ಯಾವುದೋ ಬ್ರಿಗೇಡ್ ಹೆಸರಲ್ಲಿ ದಲಿತ ಯುವಕನನ್ನು ದಾರಿ ತಪ್ಪಿಸಿ ಕೊಂದು ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು ಎಂದು ಕರ್ನಾಟಕ ಕಾಂಗ್ರೆಸ್​ ಟ್ವೀಟ್​ ಮಾಡಿದೆ. ದಲಿತರೆಂದರೆ ಬಿಜೆಪಿಗೆ ಯಾಕಿಷ್ಟು ಅಸಹನೆ? ದಲಿತರಿಗೆ, ಹಿಂದುಳಿದ ವರ್ಗದ ಯುವಕರಿಗೆ ಬಿಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೊಂದು ದಿನ ಬಿಳಿ ವಸ್ತ್ರ ಹೊದಿಸಲು. ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ ವರ್ಗದವರನ್ನೇ ಬಲಿ ಪಡೆಯುತ್ತಿರುವುದೇಕೆ? ಎಂದು ಪ್ರಶ್ನಿಸಿದೆ.

ಹೆಣ ಕಂಡೊಡನೆ ರಣ ಹದ್ದುಗಳಂತೆ ಹಾರಿಬರುವ ಬಿಜೆಪಿಗೆ ಈಗ ಆಘಾತ ಉಂಟಾಗಿದೆ. ಬಿಜೆಪಿ ಬೆಂಬಲಿಸುವ ಸಂಘಟನೆಯ ಕಾರ್ಯಕರ್ತನನ್ನು ಬಿಜೆಪಿಯ ಕಾರ್ಯಕರ್ತರೇ ಕೊಂದು ಹಾಕಿದ್ದಾರೆ. ಹೆಣ ರಾಜಕೀಯ ಮಾಡುವ ಬಿಜೆಪಿ ಈಗ ಉತ್ತರ ನೀಡಬೇಕು. ಬಿಜೆಪಿ ಕಾರ್ಯಕರ್ತರನ್ನು ಬೆಳೆಸುತ್ತಿದೆಯೇ, ಕೊಲೆಗಡುಕರನ್ನು ಬೆಳೆಸುತ್ತಿದೆಯೇ? ಸರ್ಕಾರದ ಮೇಲೆ ಆರೋಪಿಸಲು ಸಜ್ಜಾಗಿದ್ದ ಬಿಜೆಪಿ ನಾಯಕರು ತಮ್ಮವರೇ ಕೊಲೆಗಾರರು ಎಂದು ತಿಳಿದ ನಂತರ ಬಿಲ ಸೇರಿರುವುದೇಕೆ? ಎಂದು ಕಾಂಗ್ರೆಸ್​ ಕೆಂಡಕಾರಿದೆ.

ಕಲ್ಬುರ್ಗಿಯಲ್ಲಿ ನಡೆದ ಕಾನ್ಸ್​ಟೇಬಲ್​​ ಹತ್ಯೆಯಲ್ಲಿ ಬಿಜೆಪಿ ಮುಖಂಡನ ಪಾತ್ರ. ಟಿ ನರಸೀಪುರದಲ್ಲಿ ನಡೆದ ವೇಣುಗೋಪಾಲ್ ಹತ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರ ಕೈವಾಡ. ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋ ಬ್ಲಾಕ್ಮೇಲ್ ಪ್ರಕರಣದ ರೂವಾರಿ ABVP ಕಾರ್ಯಕರ್ತ. ಸೋಲಿನ ಹತಾಶೆಯಲ್ಲಿರುವ ಬಿಜೆಪಿ ನಮ್ಮ ಸರ್ಕಾರದ ಹೆಸರು ಕೆಡಿಸಲು ಕೊಲೆಗಡುಕರ ಮೋರ್ಚಾಕ್ಕೆ ಚಾಲನೆ ನೀಡಿದೆಯೇ? ಎಂದು ವಾಗ್ದಾಳಿ ನಡೆಸಿದೆ.

ಬಿಜೆಪಿ ನಿಯೋಗ ಭೇಟಿ

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಹತ್ಯೆಯಾದ ಹಿನ್ನೆಲೆಯಲ್ಲಿ ಸಿ.ಟಿ.ರವಿ ನೇತೃತ್ವದ ಬಿಜೆಪಿ ನಿಯೋಗ ಇಂದು ಮೃತನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ. ಮೃತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಅವರಿಗೆ ಧೈರ್ಯ ಹೇಳುವಾಗ ಅವರು ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಸಿಟಿ ರವಿಯವರು 5 ಲಕ್ಷ ರೂಪಾಯಿಯ ಚೆಕ್ ಅನ್ನು ಪೂರ್ಣಿಮಾ ಅವರಿಗೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More