KL​​ ರಾಹುಲ್​ ಬೆನ್ನಲ್ಲೇ ಆರ್​​ಸಿಬಿ ಟೀಮ್​ಗೆ ಮತ್ತೋರ್ವ ಕನ್ನಡಿಗ ಎಂಟ್ರಿ.. ಯಾರದು?

author-image
Ganesh Nachikethu
Updated On
KL ರಾಹುಲ್​​​ ಬಗ್ಗೆ ಬಿಗ್​ ಅಪ್ಡೇಟ್​​; ಕನ್ನಡಿಗನ ಖರೀದಿಗೆ RCB ಸೇರಿ ಈ ತಂಡಗಳ ಮಧ್ಯೆ ಪೈಪೋಟಿ
Advertisment
  • ಬಹುನಿರೀಕ್ಷಿತ 2025ರ ಇಂಡಿಯನ್​ ಪ್ರೀಮಿಯರ್​ ಲೀಗ್​ಗೆ ಭರ್ಜರಿ ತಯಾರಿ
  • ಐಪಿಎಲ್​ 2025ರ ಮೆಗಾ ಆಕ್ಷನ್​​ನಲ್ಲಿ ರಾಹುಲ್​ ಖರೀದಿಗೆ ಮಾಸ್ಟರ್​ ಪ್ಲಾನ್​..!
  • ಕೆ.ಎಲ್​ ರಾಹುಲ್​ ಜೊತೆಗೆ ಮತ್ತೋರ್ವ ಕನ್ನಡಿಗನಿಗೆ ಆರ್​​ಸಿಬಿ ಮಣೆ ಸಾಧ್ಯತೆ

ಲಕ್ನೋ ಸೂಪರ್​ ಜೈಂಟ್ಸ್​ ತಂಡ ತೊರೆದ ಕೆ.ಎಲ್​ ರಾಹುಲ್​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಸೇರಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರೋ ವಿಚಾರ. ಈ ಮಧ್ಯೆ ಮತ್ತೋರ್ವ ಸ್ಟಾರ್​ ಕ್ರಿಕೆಟರ್​​ ಆರ್​​ಸಿಬಿ ತಂಡ ಸೇರಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅದು ಕರ್ನಾಟಕ ಮೂಲದ ಕ್ರಿಕೆಟರ್​ ಎಂಬುದು ವಿಶೇಷ.

2025ರ ಇಂಡಿಯನ್​ ಪ್ರೀಮಿಯರ್​​ ಲೀಗ್​​ಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈಗಾಗಲೇ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತನ್ನ ರೀಟೈನ್​ ಲಿಸ್ಟ್​​ ರಿಲೀಸ್​ ಮಾಡಿದೆ. ಆರ್​​​ಸಿಬಿ ಟೀಮ್​​​ ಮೊದಲು ರೀಟೈನ್​ ಮಾಡಿಕೊಂಡಿದ್ದು ವಿರಾಟ್​​ ಕೊಹ್ಲಿ. 2ನೇ ಆಯ್ಕೆ ರಜತ್​ ಪಾಟಿದಾರ್​​ ಮತ್ತು 3ನೇ ಆಯ್ಕೆಯಾಗಿ ಯಶ್​ ದಯಾಳ್​​ ಅವರನ್ನು ಉಳಿಸಿಕೊಂಡಿದೆ.

ಆರ್​​ಸಿಬಿ ತಂಡ ವಿರಾಟ್​ ಕೊಹ್ಲಿ ಅವರಿಗೆ ಬರೋಬ್ಬರಿ 21 ಕೋಟಿ ನೀಡಿ ಉಳಿಸಿಕೊಂಡಿದೆ. ರಜತ್​ ಪಾಟಿದಾರ್​ ಅವರಿಗೆ 11 ಕೋಟಿ ಮತ್ತು ಯಶ್​ ದಯಾಳ್​ ಅವರಿಗೆ 5 ಕೋಟಿ ನೀಡಿ ರೀಟೈನ್​ ಮಾಡಿಕೊಳ್ಳಲಾಗಿದೆ. ಈ ಮೂವರಿಗಾಗಿ ಆರ್​​ಸಿಬಿ ಸುಮಾರು 37 ಕೋಟಿ ಖರ್ಚು ಮಾಡಿದೆ.

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹೇಗಾದ್ರೂ ಮಾಡಿ ಕಪ್​ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿದೆ. ಹಾಗಾಗಿ ವರ್ಷದ ಕೊನೆ ಡಿಸೆಂಬರ್​ನಲ್ಲಿ ನಡೆಯಲಿರೋ 2025ರ ಐಪಿಎಲ್​​​​ ಮೆಗಾ ಆಕ್ಷನ್​​ನಲ್ಲಿ ಸ್ಟಾರ್​ ಆಟಗಾರರಿಗೆ ಮಣೆ ಹಾಕಬೇಕು. ಈ ಮೂಲಕ ಬಲಿಷ್ಠ ತಂಡ ಕಟ್ಟಬೇಕು ಎಂಬುದು ಆರ್​​ಸಿಬಿ ಪ್ಲಾನ್​​.

ದೇವದತ್​ ಪಡಿಕ್ಕಲ್​​ಗೆ ಮತ್ತೆ ಮಣೆ!

ಆರ್​​ಸಿಬಿ ತಂಡದಲ್ಲಿದ್ದಾಗ ಅದ್ಭುತ ಪ್ರದರ್ಶನ ನೀಡುತ್ತಿದ್ದ ದೇವದತ್​ ಪಡಿಕ್ಕಲ್​​​ ರಾಜಸ್ಥಾನ್​​​ ರಾಯಲ್ಸ್​ ಸೇರಿದ ಮೇಲೆ ಮಂಕಾಗಿದ್ದಾರೆ. ದೇಸಿ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ರೂ ಐಪಿಎಲ್​​ನಲ್ಲಿ ಮಾತ್ರ ಎಡವುತ್ತಿದ್ದಾರೆ. ಹಾಗಾಗಿ ರಾಜಸ್ಥಾನ್​ ರಾಯಲ್ಸ್​​ ಪಡಿಕ್ಕಲ್​ ಅವರನ್ನು ಕೈ ಬಿಡಲಾಗಿದೆ. ಹೀಗಾಗಿ ಇವರನ್ನು ಮತ್ತೆ ಆರ್​​ಸಿಬಿ ಖರೀದಿ ಮಾಡುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment