/newsfirstlive-kannada/media/post_attachments/wp-content/uploads/2025/03/student.jpg)
ಬೆಂಗಳೂರು: ಶುಕ್ರವಾರದಿಂದ SSLC ಪರೀಕ್ಷೆ ಶುರುವಾಗಿದೆ. ಮತ್ತೊಂದು ಕಡೆ 4, 5, 6 ಮತ್ತು 7ನೇ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿವೆ. ಈ ಮಧ್ಯೆ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಬಂದ್! ನಾಳೆ ಏನಿರುತ್ತೆ? ಏನಿರಲ್ಲ? ಕನ್ನಡ ಪರ ಸಂಘಟನೆ ಇಟ್ಟ 20 ಬೇಡಿಕೆಗಳು ಏನೇನು?
ಹೀಗಾಗಿ ಸಾಕಷ್ಟು ವಿದ್ಯಾರ್ಥಿಗಳು ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಪರೀಕ್ಷೆ ಮುಂದೂಡಿಕೆ ಆಗುತ್ತಾ ಅಂತ ಗೊಂದಲದಲ್ಲಿದ್ದರು. ಆದ್ರೆ ಈಗ ಬಂದ್ ಎಫೆಕ್ಟ್ ಮೌಲ್ಯಾಂಕನ ಪರೀಕ್ಷೆಗೆ ತಟ್ಟಿಲ್ಲ. 4, 5, 6 ಮತ್ತು 7ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಯಲಿದೆ. ಪೋಷಕರು ಆತಂಕಕ್ಕೆ ಒಳಗಾಗದೇ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಿ ಎಂದು ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಅವರು ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಅವರು, ನಿನ್ನೆ ಖುಷಿ ಖುಷಿಯಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದೇ ರೀತಿ ಇಂದು ಮೌಲ್ಯಾಂಕನ ಪರೀಕ್ಷೆ ನಡೆಯುತ್ತಿವೆ. 4, 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳು ಗೊಂದಲ ಪಡಬೇಡಿ. ಇಂದು ಬಂದ್ಗೆ ಸಹಕಾರ ಕೊಟ್ಟಿಲ್ಲ. ಪೋಷಕರು ತಮ್ಮ ತಮ್ಮ ಮಕ್ಕಳನ್ನು ಕರೆದುಕೊಂಡು ಪರೀಕ್ಷೆಗೆ ಹಾಜರು ಪಡಿಸಿ ಅಂತ ಕೇಳಿಕೊಳ್ಳುತ್ತಿದ್ದೇನೆ ಅಂತ ಮನವಿ ಮಾಡುತ್ತಿದ್ದೇವೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ