ಮೇ 8ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ
ಕಿಡ್ನ್ಯಾಪ್ ಕೇಸ್ನಲ್ಲಿ ಅರೆಸ್ಟ್ ಆಗಿರುವ ರೇವಣ್ಣ 4 ದಿನ ಸಂಕಷ್ಟ
ರೇವಣ್ಣ ಭವಿಷ್ಯ ಈಗ ಕಿಡ್ನ್ಯಾಪ್ ಸಂತ್ರಸ್ತೆ ಹೇಳಿಕೆಯ ಮೇಲೆ ನಿರ್ಧಾರ
ಬೆಂಗಳೂರು: ಮೈಸೂರು ಜಿಲ್ಲೆ ಹುಣಸೂರಿನ ಮಹಿಳೆಯನ್ನ ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ರೇವಣ್ಣ ಅವರನ್ನು ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು ಇಂದು 17ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ಹೆಚ್.ಡಿ ರೇವಣ್ಣ ಅವರ ಆರೋಗ್ಯ ತಪಾಸಣೆ ಮಾಡಿ ವರದಿ ಹಾಗೂ ಪ್ರಕರಣದ ವಿಚಾರಣೆ ಬಗ್ಗೆ ಎಸ್ಐಟಿ ಅಧಿಕಾರಿಗಳು ನ್ಯಾಯಾಧೀಶ ರವೀಂದ್ರಕುಮಾರ್ ಬಿ. ಕಟ್ಟಿಮನಿ ಅವರಿಗೆ ನೀಡಿದರು. ರೇವಣ್ಣ ಅವರನ್ನು 5 ದಿನಗಳ ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಜಡ್ಜ್ಗೆ ಮನವಿ ಮಾಡಿದರು.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಪರ ವಕೀಲರು ಎಸ್ಐಟಿ ಕಸ್ಟಡಿಗೆ ನೀಡುವುದನ್ನು ವಿರೋಧಿಸಿ ಆರೋಗ್ಯ ಸಮಸ್ಯೆ ಇರುವುದರಿಂದ ಕಸ್ಟಡಿಗೆ ನೀಡದಂತೆ ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಅಂದ್ರೆ ಮೇ 8ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಮಹತ್ವದ ಆದೇಶ ನೀಡಿದ್ದಾರೆ.
ಇದನ್ನೂ ಓದಿ: ಹೆಚ್.ಡಿ ರೇವಣ್ಣ ಆರೋಗ್ಯ ಸಮಸ್ಯೆ ಏನು? ಬೌರಿಂಗ್ ಆಸ್ಪತ್ರೆ ವೈದ್ಯರು ಬಿಚ್ಚಿಟ್ರು ಅಸಲಿ ವಿಷಯ; ಏನಂದ್ರು?
ನ್ಯಾ.ರವೀಂದ್ರಕುಮಾರ್ ಬಿ ಕಟ್ಟೀಮನಿ ಅವರ ಹೆಚ್ಚಿನ ವಿಚಾರಣೆಗಾಗಿ ರೇವಣ್ಣ ಅವರನ್ನು 4 ದಿನಗಳ ಕಾಲ ಎಸ್ಐಟಿಗೆ ನೀಡಿ ಆದೇಶ ನೀಡಿದರು. ಕಿಡ್ನ್ಯಾಪ್ ಕೇಸ್ನಲ್ಲಿ ಅರೆಸ್ಟ್ ಆಗಿರುವ ರೇವಣ್ಣ ಅವರ ವಿಚಾರಣೆ ಸಿಐಡಿ ಕಚೇರಿಯಲ್ಲಿ ಮುಂದುವರಿಯಲಿದೆ.
ರೇವಣ್ಣನ ಮುಂದಿನ ಆಯ್ಕೆಗಳೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೇ 8ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ
ಕಿಡ್ನ್ಯಾಪ್ ಕೇಸ್ನಲ್ಲಿ ಅರೆಸ್ಟ್ ಆಗಿರುವ ರೇವಣ್ಣ 4 ದಿನ ಸಂಕಷ್ಟ
ರೇವಣ್ಣ ಭವಿಷ್ಯ ಈಗ ಕಿಡ್ನ್ಯಾಪ್ ಸಂತ್ರಸ್ತೆ ಹೇಳಿಕೆಯ ಮೇಲೆ ನಿರ್ಧಾರ
ಬೆಂಗಳೂರು: ಮೈಸೂರು ಜಿಲ್ಲೆ ಹುಣಸೂರಿನ ಮಹಿಳೆಯನ್ನ ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ರೇವಣ್ಣ ಅವರನ್ನು ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು ಇಂದು 17ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ಹೆಚ್.ಡಿ ರೇವಣ್ಣ ಅವರ ಆರೋಗ್ಯ ತಪಾಸಣೆ ಮಾಡಿ ವರದಿ ಹಾಗೂ ಪ್ರಕರಣದ ವಿಚಾರಣೆ ಬಗ್ಗೆ ಎಸ್ಐಟಿ ಅಧಿಕಾರಿಗಳು ನ್ಯಾಯಾಧೀಶ ರವೀಂದ್ರಕುಮಾರ್ ಬಿ. ಕಟ್ಟಿಮನಿ ಅವರಿಗೆ ನೀಡಿದರು. ರೇವಣ್ಣ ಅವರನ್ನು 5 ದಿನಗಳ ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಜಡ್ಜ್ಗೆ ಮನವಿ ಮಾಡಿದರು.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಪರ ವಕೀಲರು ಎಸ್ಐಟಿ ಕಸ್ಟಡಿಗೆ ನೀಡುವುದನ್ನು ವಿರೋಧಿಸಿ ಆರೋಗ್ಯ ಸಮಸ್ಯೆ ಇರುವುದರಿಂದ ಕಸ್ಟಡಿಗೆ ನೀಡದಂತೆ ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಅಂದ್ರೆ ಮೇ 8ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಮಹತ್ವದ ಆದೇಶ ನೀಡಿದ್ದಾರೆ.
ಇದನ್ನೂ ಓದಿ: ಹೆಚ್.ಡಿ ರೇವಣ್ಣ ಆರೋಗ್ಯ ಸಮಸ್ಯೆ ಏನು? ಬೌರಿಂಗ್ ಆಸ್ಪತ್ರೆ ವೈದ್ಯರು ಬಿಚ್ಚಿಟ್ರು ಅಸಲಿ ವಿಷಯ; ಏನಂದ್ರು?
ನ್ಯಾ.ರವೀಂದ್ರಕುಮಾರ್ ಬಿ ಕಟ್ಟೀಮನಿ ಅವರ ಹೆಚ್ಚಿನ ವಿಚಾರಣೆಗಾಗಿ ರೇವಣ್ಣ ಅವರನ್ನು 4 ದಿನಗಳ ಕಾಲ ಎಸ್ಐಟಿಗೆ ನೀಡಿ ಆದೇಶ ನೀಡಿದರು. ಕಿಡ್ನ್ಯಾಪ್ ಕೇಸ್ನಲ್ಲಿ ಅರೆಸ್ಟ್ ಆಗಿರುವ ರೇವಣ್ಣ ಅವರ ವಿಚಾರಣೆ ಸಿಐಡಿ ಕಚೇರಿಯಲ್ಲಿ ಮುಂದುವರಿಯಲಿದೆ.
ರೇವಣ್ಣನ ಮುಂದಿನ ಆಯ್ಕೆಗಳೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ