ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಎಚ್ಚರಿಕೆ
ಜೋರಾದ ಮಳೆ ಜೊತೆಗೆ ಚಳಿ, ಶೀತಗಾಳಿಯ ಬೀಸುವ ಸಾಧ್ಯತೆ
ಯಾವ್ಯಾವ ಜಿಲ್ಲೆಗಳಲ್ಲಿ ಮುಂದಿನ ದಿನದಲ್ಲಿ ಭಾರೀ ಮಳೆ ಆಗಲಿದೆ?
ಬೆಂಗಳೂರು: ಸದ್ಯ ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು ಕೆರೆ, ಕಟ್ಟೆ, ಹಳ್ಳ, ತೊರೆಗಳು ತುಂಬಿ ಹರಿಯುತ್ತಿವೆ. ಜೊತೆಗೆ ರಾಜ್ಯದ ಎಲ್ಲ ಜಲಾಶಯಗಳು ಬಹುತೇಕ ಭರ್ತಿಯಾಗೋ ಮಟ್ಟಕ್ಕೆ ಬಂದಿವೆ. ಇದರ ಬೆನ್ನಲ್ಲೇ ಮತ್ತೊಂದು ಅಪ್ಡೇಟ್ ಹೊರ ಬಿದ್ದಿದ್ದು ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: KRS ಒಳಹರಿವು ಭಾರೀ ಹೆಚ್ಚಳ.. ಅಪಾಯದ ಮಟ್ಟ ಮೀರಿದ ಕಾವೇರಿಯಲ್ಲಿ ಕೊಚ್ಚಿ ಹೋದ ಯುವಕ
ರಾಜ್ಯದಲ್ಲಿ ಇನ್ನೂ 5 ದಿನ ವರುಣಾರ್ಭಟ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿರುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಇಂದು ಮತ್ತು ನಾಳೆ ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಹಾಗೂ ಕೊನೆಯ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಕನ್ವರ್ ಯಾತ್ರೆಗೆ ಯೋಗಿ ಸರ್ಕಾರದ ರೂಲ್ಸ್ ಏನು..? ಬಿಟೌನ್ ಬ್ಯೂಟಿ ಕಂಗನಾ- ಸೋನ್ ಸೂದ್ ಮಧ್ಯ ವಾರ್
ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಳಗಾವಿಗೆ ಕೂಡ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಇಂದು, ನಾಳೆ ರೆಡ್ ಅಲರ್ಟ್ ಘೋಷಿಸಿದ್ದು, ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಚಳಿ, ಶೀತಗಾಳಿಯ ವಾರ್ನಿಂಗ್ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಎಚ್ಚರಿಕೆ
ಜೋರಾದ ಮಳೆ ಜೊತೆಗೆ ಚಳಿ, ಶೀತಗಾಳಿಯ ಬೀಸುವ ಸಾಧ್ಯತೆ
ಯಾವ್ಯಾವ ಜಿಲ್ಲೆಗಳಲ್ಲಿ ಮುಂದಿನ ದಿನದಲ್ಲಿ ಭಾರೀ ಮಳೆ ಆಗಲಿದೆ?
ಬೆಂಗಳೂರು: ಸದ್ಯ ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು ಕೆರೆ, ಕಟ್ಟೆ, ಹಳ್ಳ, ತೊರೆಗಳು ತುಂಬಿ ಹರಿಯುತ್ತಿವೆ. ಜೊತೆಗೆ ರಾಜ್ಯದ ಎಲ್ಲ ಜಲಾಶಯಗಳು ಬಹುತೇಕ ಭರ್ತಿಯಾಗೋ ಮಟ್ಟಕ್ಕೆ ಬಂದಿವೆ. ಇದರ ಬೆನ್ನಲ್ಲೇ ಮತ್ತೊಂದು ಅಪ್ಡೇಟ್ ಹೊರ ಬಿದ್ದಿದ್ದು ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: KRS ಒಳಹರಿವು ಭಾರೀ ಹೆಚ್ಚಳ.. ಅಪಾಯದ ಮಟ್ಟ ಮೀರಿದ ಕಾವೇರಿಯಲ್ಲಿ ಕೊಚ್ಚಿ ಹೋದ ಯುವಕ
ರಾಜ್ಯದಲ್ಲಿ ಇನ್ನೂ 5 ದಿನ ವರುಣಾರ್ಭಟ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿರುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಇಂದು ಮತ್ತು ನಾಳೆ ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಹಾಗೂ ಕೊನೆಯ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಕನ್ವರ್ ಯಾತ್ರೆಗೆ ಯೋಗಿ ಸರ್ಕಾರದ ರೂಲ್ಸ್ ಏನು..? ಬಿಟೌನ್ ಬ್ಯೂಟಿ ಕಂಗನಾ- ಸೋನ್ ಸೂದ್ ಮಧ್ಯ ವಾರ್
ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಳಗಾವಿಗೆ ಕೂಡ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಇಂದು, ನಾಳೆ ರೆಡ್ ಅಲರ್ಟ್ ಘೋಷಿಸಿದ್ದು, ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಚಳಿ, ಶೀತಗಾಳಿಯ ವಾರ್ನಿಂಗ್ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ