NEET ಪರೀಕ್ಷೆ ರದ್ದತಿಗೆ ನಿರ್ಣಯ ಮಂಡಿಸಿದ ಶರಣಪ್ರಕಾಶ್ ಪಾಟೀಲ್
ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕೆಂಬ ನಿರ್ಣಯ
ವಿದ್ಯಾರ್ಥಿಗಳಿಗೆ CET ಅಂಕ ಆಧರಿಸಿ ವೈದ್ಯಕೀಯ ಕಾಲೇಜು ಪ್ರವೇಶ
ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರದ ನೀಟ್ ಪರೀಕ್ಷೆಯನ್ನ (National Eligibility cum Entrance Test) ರದ್ದುಗೊಳಿಸುವ ನಿರ್ಣಯ ಅಂಗೀಕಾರಗೊಂಡಿದೆ.
ನೀಟ್ ಪರೀಕ್ಷೆಯನ್ನ ರದ್ದುಗೊಳಿಸುವ ಸಂಬಂಧ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಮಸೂದೆ ಮಂಡಿಸಿದ್ದರು. ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಕರ್ನಾಟಕದ ಗ್ರಾಮೀಣ ಬಡ ಮಕ್ಕಳಿಗೆ ಹಿನ್ನಡೆ ಆಗುತ್ತಿದೆ. ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಹಿನ್ನಡೆ ಆಗುತ್ತಿದೆ. ಕೇಂದ್ರದ ನೀಟ್ ವ್ಯವಸ್ಥೆಯಿಂದ ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದು ಮಾಡಬೇಕೆಂದು ನಿರ್ಣಯ ಮಂಡಿಸಿದರು. ಜೊತೆಗೆ ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು. ವಿದ್ಯಾರ್ಥಿಗಳಿಗೆ ಸಿಇಟಿ ಅಂಕ ಆಧರಿಸಿ ವೈದ್ಯಕೀಯ ಕಾಲೇಜು ಪ್ರವೇಶ ನೀಡಬೇಕೆಂಬ ನಿರ್ಣಯವು ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ದೇಶವನ್ನೇ ಬೆಚ್ಚಿಬೀಳಿಸಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ವಿಧಾನ ಪರಿಷತ್ನಲ್ಲೂ ಮಸೂದೆ ಅಂಗೀಕಾರಗೊಂಡರೆ ಮುಂದಿನ ದಿನಗಳಲ್ಲಿ ಕರ್ನಾಟಕ ತನ್ನದೇ ಆದ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸುತ್ತದೆ. ನೀಟ್ ಪರೀಕ್ಷೆಯನ್ನು ರದ್ದುಪಡಿಸಲು ಮತ್ತು ದ್ವಿತೀಯ ಪಿಯುಸಿ ಅಂಕಗಳನ್ನು ಬಳಸಿಕೊಂಡು ರಾಜ್ಯ-ಆಧಾರಿತ ವೈದ್ಯಕೀಯ ಪ್ರವೇಶದ ಹಳೆಯ ವ್ಯವಸ್ಥೆಗೆ ಹಿಂತಿರುಗಲು ತಮಿಳುನಾಡು, ಪಶ್ಚಿಮ ಬಂಗಾಳ ಕೂಡ ಮುಂದಾಗಿದೆ. ಇದೀಗ ಕರ್ನಾಟಕ ಕೂಡ ಅದೇ ಹಾದಿಯಲ್ಲಿ ಮುಂದುವರೆಯಲು ನಿರ್ಧರಿಸಿದೆ. ಈ ಮೂಲಕ ನೀಟ್ ವಿರುದ್ಧ ನಿರ್ಣಯ ಮಂಡಿಸಿದ ಮೂರನೇ ರಾಜ್ಯ ಕರ್ನಾಟಕವಾಗಿದೆ.
ಇದನ್ನೂ ಓದಿ:ಯಾರ ಮೇಲೋ ಪ್ರೀತಿ.. ಯಾರಿಗೋ ಚೂರಿ ಇರಿತ.. ಪ್ರೇಮಿಗಳ ಜಗಳದಲ್ಲಿ ಯುವತಿ ಬಲಿ, ಕೇಸ್ಗೆ ಟ್ವಿಸ್ಟ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
NEET ಪರೀಕ್ಷೆ ರದ್ದತಿಗೆ ನಿರ್ಣಯ ಮಂಡಿಸಿದ ಶರಣಪ್ರಕಾಶ್ ಪಾಟೀಲ್
ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕೆಂಬ ನಿರ್ಣಯ
ವಿದ್ಯಾರ್ಥಿಗಳಿಗೆ CET ಅಂಕ ಆಧರಿಸಿ ವೈದ್ಯಕೀಯ ಕಾಲೇಜು ಪ್ರವೇಶ
ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರದ ನೀಟ್ ಪರೀಕ್ಷೆಯನ್ನ (National Eligibility cum Entrance Test) ರದ್ದುಗೊಳಿಸುವ ನಿರ್ಣಯ ಅಂಗೀಕಾರಗೊಂಡಿದೆ.
ನೀಟ್ ಪರೀಕ್ಷೆಯನ್ನ ರದ್ದುಗೊಳಿಸುವ ಸಂಬಂಧ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಮಸೂದೆ ಮಂಡಿಸಿದ್ದರು. ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಕರ್ನಾಟಕದ ಗ್ರಾಮೀಣ ಬಡ ಮಕ್ಕಳಿಗೆ ಹಿನ್ನಡೆ ಆಗುತ್ತಿದೆ. ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಹಿನ್ನಡೆ ಆಗುತ್ತಿದೆ. ಕೇಂದ್ರದ ನೀಟ್ ವ್ಯವಸ್ಥೆಯಿಂದ ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದು ಮಾಡಬೇಕೆಂದು ನಿರ್ಣಯ ಮಂಡಿಸಿದರು. ಜೊತೆಗೆ ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು. ವಿದ್ಯಾರ್ಥಿಗಳಿಗೆ ಸಿಇಟಿ ಅಂಕ ಆಧರಿಸಿ ವೈದ್ಯಕೀಯ ಕಾಲೇಜು ಪ್ರವೇಶ ನೀಡಬೇಕೆಂಬ ನಿರ್ಣಯವು ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ದೇಶವನ್ನೇ ಬೆಚ್ಚಿಬೀಳಿಸಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ವಿಧಾನ ಪರಿಷತ್ನಲ್ಲೂ ಮಸೂದೆ ಅಂಗೀಕಾರಗೊಂಡರೆ ಮುಂದಿನ ದಿನಗಳಲ್ಲಿ ಕರ್ನಾಟಕ ತನ್ನದೇ ಆದ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸುತ್ತದೆ. ನೀಟ್ ಪರೀಕ್ಷೆಯನ್ನು ರದ್ದುಪಡಿಸಲು ಮತ್ತು ದ್ವಿತೀಯ ಪಿಯುಸಿ ಅಂಕಗಳನ್ನು ಬಳಸಿಕೊಂಡು ರಾಜ್ಯ-ಆಧಾರಿತ ವೈದ್ಯಕೀಯ ಪ್ರವೇಶದ ಹಳೆಯ ವ್ಯವಸ್ಥೆಗೆ ಹಿಂತಿರುಗಲು ತಮಿಳುನಾಡು, ಪಶ್ಚಿಮ ಬಂಗಾಳ ಕೂಡ ಮುಂದಾಗಿದೆ. ಇದೀಗ ಕರ್ನಾಟಕ ಕೂಡ ಅದೇ ಹಾದಿಯಲ್ಲಿ ಮುಂದುವರೆಯಲು ನಿರ್ಧರಿಸಿದೆ. ಈ ಮೂಲಕ ನೀಟ್ ವಿರುದ್ಧ ನಿರ್ಣಯ ಮಂಡಿಸಿದ ಮೂರನೇ ರಾಜ್ಯ ಕರ್ನಾಟಕವಾಗಿದೆ.
ಇದನ್ನೂ ಓದಿ:ಯಾರ ಮೇಲೋ ಪ್ರೀತಿ.. ಯಾರಿಗೋ ಚೂರಿ ಇರಿತ.. ಪ್ರೇಮಿಗಳ ಜಗಳದಲ್ಲಿ ಯುವತಿ ಬಲಿ, ಕೇಸ್ಗೆ ಟ್ವಿಸ್ಟ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ