Advertisment

BREAKING NEWS; ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್​!

author-image
Gopal Kulkarni
Updated On
‘ಕರ್ಮ ಹಿಟ್​ ಬ್ಯಾಕ್ ಎಂದ್ರೆ ಇದೇ ಅಲ್ಲವೇ ಸಿದ್ದರಾಮಯ್ಯ’ -HD ಕುಮಾರಸ್ವಾಮಿ ಟಾಂಗ್
Advertisment
  • ಮುಡಾ 50:50 ಹಗರಣ ಪ್ರಕರಣದಲ್ಲಿ ಬಿಗ್ ಅಪ್ಡೇಟ್
  • ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್ ಜಾರಿ
  • ನವೆಂಬರ್ 6 ರಂದು ಲೋಕಾಯುಕ್ತ ಎದುರು ಹಾಜರ್

ಮುಡಾ 50:50 ಹಗರಣದ ಪ್ರಕರಣದಲ್ಲಿ ಸದ್ಯ ಬಹುದೊಡ್ಡ ತಿರುವು ಉಂಟಾಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದ್ದು ನವೆಂಬರ್ 6 ರಂದು ಲೋಕಾಯುಕ್ತದ ಎದುರು ಹಾಜರಾಗುವಂತೆ ಸೂಚನೆ ನೀಡಿದೆ.

Advertisment

ಇದನ್ನೂ ಓದಿ:ಬೈ ಎಲೆಕ್ಷನ್​ ಭರಾಟೆ​; ಇಂದು ಮೂರು ಕ್ಷೇತ್ರಗಳಲ್ಲೂ ಘಟಾನುಘಟಿ ನಾಯಕರಿಂದ ಪ್ರಚಾರ​

ಗುರುವಾರ ಅಂದ್ರೆ ನವೆಂಬರ್ 6 ರಂದು ಬೆಳಗ್ಗೆ 10.30ಕ್ಕೆ ಲೋಕಾಯುಕ್ತದ ಎದುರು ಹಾಜರಾಗುವಂತೆ ಲೋಕಾಯುಕ್ತ ಎಸ್​ಪಿ ಟಿ.ಜೆ.ಉಮೇಶ್ ಅವರಿಂದ ನೋಟಿಸ್ ಜಾರಿಯಾಗಿದೆ. ಈಗಾಗಲೇ ಪ್ರಕರಣದಲ್ಲಿ A2, A3, A4 ವಿಚಾರಣೆ ನಡೆಸಲಾಗಿದೆ. ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರ ವಿಚಾರಣೆಯನ್ನು ಲೋಕಾಯುಕ್ತ ಮುಕ್ತಾಯಗೊಳಿಸಿದೆ. ಇನ್ನು ಎ3 ಹಗೂ ಎ4 ಆರೋಪಿಗಳನ್ನು ಒಟ್ಟಿಗೆ ಕರೆಸಿದ್ದ ಲೋಕಾಯಕ್ತ ಅಧಿಕಾರಿಗಳು ವಿಚಾರಣೆ ಮಾಡಿ ಕಳುಹಿಸಿದ್ದಾರೆ. ಪ್ರಕರಣದಲ್ಲಿ ಸಿದ್ದರಾಮಯ್ಯನವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಎ3 ಆಗಿದ್ದರೆ ಭೂಮಿ ಮಾರಿದ ದೇವರಾಜು ಎ4 ಆಗಿದ್ದರು.

ಇದನ್ನೂ ಓದಿ:ರೈತರ ಜಮೀನುಗಳಿಗೆ ವಕ್ಫ್​ ನೋಟಿಸ್​​.. ಇಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Advertisment

ಸದ್ಯ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಇಲಾಖೆ ನೋಟಿಸ್ ನೀಡಿದೆ. ಖುದ್ದು ಲೋಕಾಯುಕ್ತದ ಎದುರು ಹಾಜರಾಗುವಂತೆ ನೋಟಿಸ್​ನಲ್ಲಿ ಉಲ್ಲೇಖವಾಗಿದೆ ಎಂದು ನ್ಯೂಸ್​ಫಸ್ಟ್​ಗೆ ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment