ಸ್ವಾತಂತ್ರ್ಯ ದಿನಾಚರಣೆಯಂದೇ ಕರಾಳ ದಿನ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ; ಭಾರೀ ಆಕ್ರೋಶ!

author-image
Bheemappa
Updated On
ಸ್ವಾತಂತ್ರ್ಯ ದಿನಾಚರಣೆಯಂದೇ ಕರಾಳ ದಿನ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ; ಭಾರೀ ಆಕ್ರೋಶ!
Advertisment
  • ಶಿಕ್ಷಣ ಸಚಿವರು ಮತ್ತು ಸರ್ಕಾರದ ಜೊತೆ ಕುಳಿತು ಮಾತಾಡಿಕೊಳ್ಳಲಿ
  • ಆ ದಿನ ಸ್ವಾತಂತ್ರ್ಯದ ಮಹತ್ವ, ತ್ಯಾಗ ಬಲಿದಾನದ ಬಗ್ಗೆ ಮಕ್ಕಳಿಗೆ ತಿಳಿಸಿ
  • ಈ ಕೂಡಲೇ ಸರ್ಕಾರ ಶಾಲೆಗಳಿಗೆ ಮಾರ್ಗಸೂಚಿ ಹೊರಡಿಸಬೇಕು

ಬೆಂಗಳೂರ: ಆಗಸ್ಟ್​ 15 ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಗಳಲ್ಲಿ ಕಪ್ಪು ಪಟ್ಟಿ ಧರಿಸಲು ಮುಂದಾಗಿರುವ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಬೋದಕ- ಬೋದಕೇತರ ಸಮನ್ವಯದ ನಿರ್ಧಾರವನ್ನ ಕರ್ನಾಟಕ ಖಾಸಗಿ ಶಾಲಾ-ಕಾಲೇಜು ಪೋಷಕ ಸಂಘಟನೆಗಳ ಸಮಿತಿ ಉಗ್ರವಾಗಿ ಖಂಡಿಸುತ್ತದೆ ಎಂದು ಬಿ.ಎನ್​ ಯೋಗಾನಂದ ಹೇಳಿದ್ದಾರೆ.

ಇದನ್ನೂ ಓದಿ: ವಿರಾಟ್​​ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವೇನು.. ಕೊಹ್ಲಿ ಬಗ್ಗೆ ಮಾಜಿ ಕ್ರಿಕೆಟರ್​ ಶಾಕಿಂಗ್ ಹೇಳಿಕೆ!

ಆಡಳಿತ ಮಂಡಳಿ ಒಕ್ಕೂಟಗಳು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಶಿಕ್ಷಣ ಸಚಿವರು ಮತ್ತು ಸರ್ಕಾರದ ಜೊತೆ ಕುಳಿತು ಮಾತಾಡಿಕೊಳ್ಳಲಿ. ಕರಾಳ ದಿನಾಚರಣೆ ಆಚರಣೆ ಮಾಡಲು ನಿಮಗೆ ಬೇರೆ ದಿನಗಳಿಲ್ಲವೇ? ಮಕ್ಕಳಿಗೆ ಸ್ವಾತಂತ್ರ್ಯ ಚಳುವಳಿಯ ಮಹತ್ವ ಸಾರುವ, ತ್ಯಾಗ ಬಲಿದಾನ ಮಾಡಿದವರಿಗೆ ಗೌರವ ಸೂಚಿಸುವ ಬದಲು ಆ ದಿನ ಕಪ್ಪುಪಟ್ಟಿ ಧರಿಸಿ ಶಾಲೆಗಳಲ್ಲಿ ಕರಾಳ ದಿನ ಆಚರಿಸುವುದು ಆ ಮಹತ್ವದ ದಿನಕ್ಕೆ ಮಾಡಿದ ಅವಮಾನವಾಗುತ್ತಿದೆ. ಹೀಗಾಗಿ ಆಡಳಿತ ಮಂಡಳಿ ಈ ನಿರ್ಧಾರ ಕೈಬಿಟ್ಟು ಎಲ್ಲ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿ ಮಕ್ಕಳಲ್ಲಿ ದೇಶಭಕ್ತಿ ಮೂಡಿಸಬೇಕೆಂದು ಸಮನ್ವಯ ಸಮಿತಿ ಒತ್ತಾಯಿಸುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಓದಲು ಕನಸು ಕಾಣುವ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​.. ಬೆಂಗಳೂರಲ್ಲೇ ಇದೆ ಅವಕಾಶ; ಹೇಗೆ?

publive-image

ಇನ್ನು ಇದಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ಕೂಡಲೇ ಶಾಲೆಗಳಿಗೆ ಮಾರ್ಗಸೂಚಿ ಹೊರಡಿಸಬೇಕು. ಈ ಮಾರ್ಗಸೂಚಿ ಉಲ್ಲಂಘಿಸಿದ ಶಾಲೆಗಳ ವಿರುದ್ಧ ದೇಶದ್ರೋಹದ ಅಡಿಯಲ್ಲಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮನ್ವಯ ಸಮಿತಿ ಆಗ್ರಹ ಮಾಡುತ್ತದೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment