ಬೆಂಗಳೂರು ಸೇರಿ ದೇಶದ ಹಲವು ಭಾಗಗಳಲ್ಲಿ ಬಿಸಿಲಿನಿಂದ ಹೈರಾಣಾದ ಜನ
ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು
ಉರಿ ಬಿಸಿಲಿನ ಪರಿಸ್ಥಿತಿಯಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಹೇಗೆ ವಹಿಸಬೇಕು?
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿರು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಮನೆಯಿಂದ ಹೊರ ಬರೋದಕ್ಕೂ ಜನರು ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಕೇವಲ ರಾಜ್ಯದಲ್ಲಿ ಅಲ್ಲದೇ ದೇಶದ ಹಲವು ಭಾಗಗಳಲ್ಲಿ ಉರಿ ಬಿಸಿಲಿನಿಂದ ಜನ ಹೈರಾಣಾಗುತ್ತಿದ್ದಾರೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ: Heatwave: ಬೆಂಗಳೂರಿಗೆ ಮತ್ತೊಂದು ಶಾಕಿಂಗ್ ಸುದ್ದಿ.. 15 ವರ್ಷಗಳಲ್ಲೇ ಬಿಸಿಲಲ್ಲಿ ಹೊಸ ದಾಖಲೆ; ಮುಂದೇನು?
ಇಂತಹ ಬಿಸಿಲಿನ ವಾತಾವರಣ ಆರೋಗ್ಯಕ್ಕೆ ಒಳ್ಳೆಯದಲ್ಲ. ಉರಿ ಬಿಸಿಲು ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರವು ವಿಡಿಯೋ ಕ್ಲಿಪ್ ಶೇರ್ ಮಾಡುವ ಮೂಲಕ ಈ ಉರಿ ಬಿಸಿಲಿನಿಂದ ಆದಷ್ಟು ತಪ್ಪಿಸಿಕೊಳ್ಳಲು ಸೂಚನೆ ನೀಡಿದೆ.
@DcBelagavi @DeocBidar #Bagalkot @KarnatakaVart @dc_yadgir @Deockoppal @DCRaichur @dcdavanagere @depcomkolar @DCBallari @DcDharwad @DCTumakuru @DCVijayapura #Chitradurga pic.twitter.com/g9nmPwxm7F
— Revenue Department (Disaster Management) (@SEOC_Karnataka) April 22, 2024
#ಬಿಸಿಗಾಳಿ #ಎಚ್ಚರಿಕೆ: ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು, ಮತ್ತು ಚಿತ್ರದುರ್ಗದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆಯಿದೆ. (ಮೂಲ: IMD) #ಶಾಖತರಂಗ #ಸುರಕ್ಷಿತವಾಗಿರಿ #ರಣಬಿಸಿಲು#ಮುನ್ನೆಚ್ಚರಿಕೆವಹಿಸಿ pic.twitter.com/oJCbeedaOz
— Karnataka State Natural Disaster Monitoring Centre (@KarnatakaSNDMC) April 23, 2024
ಇದರ ಜೊತೆಗೆ ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಭಯಂಕರ ಬಿಸಿಲು ಇರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು, ಮತ್ತು ಚಿತ್ರದುರ್ಗದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಜೊತೆಗೆ ಬಿಸಿ ಗಾಳಿಯಿಂದ ಸೇಫ್ ಆಗಲು ಏನು ಮಾಡಬೇಕು ಎಂದು ಸಲಹೆ ಕೂಡ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಂಗಳೂರು ಸೇರಿ ದೇಶದ ಹಲವು ಭಾಗಗಳಲ್ಲಿ ಬಿಸಿಲಿನಿಂದ ಹೈರಾಣಾದ ಜನ
ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು
ಉರಿ ಬಿಸಿಲಿನ ಪರಿಸ್ಥಿತಿಯಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಹೇಗೆ ವಹಿಸಬೇಕು?
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿರು ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಮನೆಯಿಂದ ಹೊರ ಬರೋದಕ್ಕೂ ಜನರು ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಕೇವಲ ರಾಜ್ಯದಲ್ಲಿ ಅಲ್ಲದೇ ದೇಶದ ಹಲವು ಭಾಗಗಳಲ್ಲಿ ಉರಿ ಬಿಸಿಲಿನಿಂದ ಜನ ಹೈರಾಣಾಗುತ್ತಿದ್ದಾರೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ: Heatwave: ಬೆಂಗಳೂರಿಗೆ ಮತ್ತೊಂದು ಶಾಕಿಂಗ್ ಸುದ್ದಿ.. 15 ವರ್ಷಗಳಲ್ಲೇ ಬಿಸಿಲಲ್ಲಿ ಹೊಸ ದಾಖಲೆ; ಮುಂದೇನು?
ಇಂತಹ ಬಿಸಿಲಿನ ವಾತಾವರಣ ಆರೋಗ್ಯಕ್ಕೆ ಒಳ್ಳೆಯದಲ್ಲ. ಉರಿ ಬಿಸಿಲು ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರವು ವಿಡಿಯೋ ಕ್ಲಿಪ್ ಶೇರ್ ಮಾಡುವ ಮೂಲಕ ಈ ಉರಿ ಬಿಸಿಲಿನಿಂದ ಆದಷ್ಟು ತಪ್ಪಿಸಿಕೊಳ್ಳಲು ಸೂಚನೆ ನೀಡಿದೆ.
@DcBelagavi @DeocBidar #Bagalkot @KarnatakaVart @dc_yadgir @Deockoppal @DCRaichur @dcdavanagere @depcomkolar @DCBallari @DcDharwad @DCTumakuru @DCVijayapura #Chitradurga pic.twitter.com/g9nmPwxm7F
— Revenue Department (Disaster Management) (@SEOC_Karnataka) April 22, 2024
#ಬಿಸಿಗಾಳಿ #ಎಚ್ಚರಿಕೆ: ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು, ಮತ್ತು ಚಿತ್ರದುರ್ಗದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆಯಿದೆ. (ಮೂಲ: IMD) #ಶಾಖತರಂಗ #ಸುರಕ್ಷಿತವಾಗಿರಿ #ರಣಬಿಸಿಲು#ಮುನ್ನೆಚ್ಚರಿಕೆವಹಿಸಿ pic.twitter.com/oJCbeedaOz
— Karnataka State Natural Disaster Monitoring Centre (@KarnatakaSNDMC) April 23, 2024
ಇದರ ಜೊತೆಗೆ ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಭಯಂಕರ ಬಿಸಿಲು ಇರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು, ಮತ್ತು ಚಿತ್ರದುರ್ಗದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಜೊತೆಗೆ ಬಿಸಿ ಗಾಳಿಯಿಂದ ಸೇಫ್ ಆಗಲು ಏನು ಮಾಡಬೇಕು ಎಂದು ಸಲಹೆ ಕೂಡ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ