ರಾಜ್ಯದ ರೈತರಿಗೆ ಗುಡ್ನ್ಯೂಸ್ ಕೊಟ್ಟ ಮಳೆ
ಮುಂದಿನ 4 ದಿನ ರಾಜ್ಯಾದ್ಯಂತ ಮಳೆ ಸಾಧ್ಯತೆ!
ಹವಾಮಾನ ಇಲಾಖೆ ಕೊಟ್ಟ ಮನ್ಸೂಚನೆಯೇನು?
ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಎಡಬಿಡದೆ ಸುರಿಯುತ್ತಿರೋ ಮಳೆ ಇನ್ನೂ ನಿಂತಿಲ್ಲ. ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಗೆ ಬ್ರೇಕ್ ಬಿದ್ದರೂ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸುರಿಯುತ್ತಲೇ ಇದೆ. ಹೀಗಿರುವಾಗಲೇ ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನಾಳೆ ಆಗಸ್ಟ್ 11ನೇ ತಾರೀಕಿನಿಂದ 14ರವರೆಗೆ ನಾಲ್ಕು ದಿನ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೇ ಈ ಮಳೆಯಿಂದ ಬಿತ್ತನೆ ಮಾಡುವ ರೈತರಿಗೆ ಅನುಕೂಲವಾಗಲಿದೆ ಎಂದಿದೆ.
ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ತುಮಕೂರು, ಕೋಲಾರ, ರಾಮನಗರ, ಹಾವೇರಿ, ಬೆಳಗಾವಿ, ಧಾರವಾಡ, ಕಲಬುರಗಿ, ಬೀದರ್, ಬಾಗಲಕೋಟೆ, ಗದಗ, ದಾವಣಗೆರೆ, ಹಾಸನದಲ್ಲೂ ಮಳೆಯಾಗಲಿದೆ. ಜತೆಗೆ ಕೊಡಗು, ಮೈಸೂರು ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಜ್ಯದ ರೈತರಿಗೆ ಗುಡ್ನ್ಯೂಸ್ ಕೊಟ್ಟ ಮಳೆ
ಮುಂದಿನ 4 ದಿನ ರಾಜ್ಯಾದ್ಯಂತ ಮಳೆ ಸಾಧ್ಯತೆ!
ಹವಾಮಾನ ಇಲಾಖೆ ಕೊಟ್ಟ ಮನ್ಸೂಚನೆಯೇನು?
ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಎಡಬಿಡದೆ ಸುರಿಯುತ್ತಿರೋ ಮಳೆ ಇನ್ನೂ ನಿಂತಿಲ್ಲ. ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಗೆ ಬ್ರೇಕ್ ಬಿದ್ದರೂ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸುರಿಯುತ್ತಲೇ ಇದೆ. ಹೀಗಿರುವಾಗಲೇ ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನಾಳೆ ಆಗಸ್ಟ್ 11ನೇ ತಾರೀಕಿನಿಂದ 14ರವರೆಗೆ ನಾಲ್ಕು ದಿನ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೇ ಈ ಮಳೆಯಿಂದ ಬಿತ್ತನೆ ಮಾಡುವ ರೈತರಿಗೆ ಅನುಕೂಲವಾಗಲಿದೆ ಎಂದಿದೆ.
ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ತುಮಕೂರು, ಕೋಲಾರ, ರಾಮನಗರ, ಹಾವೇರಿ, ಬೆಳಗಾವಿ, ಧಾರವಾಡ, ಕಲಬುರಗಿ, ಬೀದರ್, ಬಾಗಲಕೋಟೆ, ಗದಗ, ದಾವಣಗೆರೆ, ಹಾಸನದಲ್ಲೂ ಮಳೆಯಾಗಲಿದೆ. ಜತೆಗೆ ಕೊಡಗು, ಮೈಸೂರು ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ