ರಾಜ್ಯಾದ್ಯಂತ 2 ದಿನಗಳ ಕಾಲ ಭರ್ಜರಿ ಮಳೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

author-image
Ganesh Nachikethu
Updated On
ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ವರುಣನ ಆರ್ಭಟ; ಎಲ್ಲೆಲ್ಲಿ ಟ್ರಾಫಿಕ್ ಜಾಮ್‌?
Advertisment
  • ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ!
  • ಫೆಬ್ರವರಿ 1 ಮತ್ತು 2ಕ್ಕೆ ಭಾರೀ ಮಳೆ ಎಂದು ಮುನ್ಸೂಚನೆ
  • ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ

ಬೆಂಗಳೂರು: 2 ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ತಿಂಗಳು ಫೆಬ್ರವರಿ 1 ಮತ್ತು 2ನೇ ತಾರೀಕು ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಬೀಳಲಿದ್ದು, ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

ಎಲ್ಲೆಲ್ಲಿ ಮಳೆ?

ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದೇಶಾದ್ಯಂತ ಭಾರೀ ಚಳಿ

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ಜೊತೆಗೆ ಚಳಿ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಬ್ರವರಿ 1ರಂದು ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿ ಇರಲಿದೆ.

ಫೆಬ್ರವರಿ 2ಕ್ಕೆ ರಾಜ್ಯದ ಆಯ್ದ ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಲಘು ಮಳೆ ಬೀಳಬಹುದು.

ಇದನ್ನೂ ಓದಿ:ಆರ್​​ಸಿಬಿಗೆ ಬಿಗ್​ ಶಾಕ್​​; ಐಪಿಎಲ್​ ಶುರುವಾಗೋ ಮುನ್ನವೇ ಕೈ ಕೊಟ್ಟ ಮೂವರು ಸ್ಟಾರ್​ ಆಟಗಾರರು

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment