ಮುಂದಿನ 24 ಗಂಟೆ ಭರ್ಜರಿ ಮಳೆ; ಎಲ್ಲೆಲ್ಲಿ? ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

author-image
Ganesh Nachikethu
Updated On
ಮುಂದಿನ 24 ಗಂಟೆ ಭರ್ಜರಿ ಮಳೆ; ಎಲ್ಲೆಲ್ಲಿ? ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?
Advertisment
  • ನಾಳೆ ಕರ್ನಾಟಕದ ಹಲವೆಡೆ ಮಳೆ ಆಗುವ ಸಾಧ್ಯತೆ
  • 24 ಗಂಟೆ ಕಾಲ ಭರ್ಜರಿ ಮಳೆ ಬೀಳೋ ಮುನ್ಸೂಚನೆ
  • ಬೆಳಗ್ಗೆಯಿಂದಲೇ ಮಂಜಿನ ವಾತಾವರಣ ಇರಲಿದೆ..!

ಬೆಂಗಳೂರು: ನಾಳೆ ಕರ್ನಾಟಕದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಭರ್ಜರಿ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಮಂಜಿನ ವಾತಾವರಣ ಇರಲಿದೆ. ಸಂಜೆ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ವರುಣನ ಆರ್ಭಟ ಜೋರಾಗಿ ಇರಲಿದೆ ಎಂದು ತಿಳಿಸಿದೆ.

ರಾಜ್ಯದ ಈ ಭಾಗಗಳಲ್ಲಿ ಮಳೆ

ಮೈಸೂರು, ಕೊಡಗು, ಹಾಸನ, ರಾಮನಗರ, ತುಮಕೂರು, ವಿಜಯನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕಳೆದ ಮೂರು ತಿಂಗಳಿಂದ ಕರ್ನಾಟಕದಲ್ಲಿ ಭರ್ಜರಿ ಮಳೆ ಆಗಿದೆ. ಸುರಿದ ಭಾರೀ ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿವೆ. ಅನ್ನದಾತರ ಮುಖದಲ್ಲಿ ಮಂದಹಾಸ ಕೂಡ ಮೂಡಿದಂತಾಗಿದೆ. ಮತ್ತೊಂದೆಡೆ ಹಲವೆಡೆ ಅತೀವೃಷ್ಠಿಯಿಂದಾಗಿ ಬೆಳೆಗಳೆಲ್ಲ ನಾಶವಾದ ಘಟನೆಗಳು ಕೂಡ ನಡೆದಿವೆ.

ಇದನ್ನೂ ಓದಿ: RCB ಕ್ಯಾಪ್ಟನ್ಸಿ ಬಗ್ಗೆ ಬಿಗ್​ ಅಪ್ಡೇಟ್​​; ನಾಯಕತ್ವಕ್ಕೆ ಈ ಮೂವರ ಮಧ್ಯೆ ಭಾರೀ ಪೈಪೋಟಿ

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment