ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾ
ಚಿತ್ರೀಕರಣ ಪ್ರಾರಂಭವಾದ 2 ದಿನಗಳ ನಂತರ ಅವಘಡ
ಪಿ ಎಸ್ ಮಿತ್ರನ್ ನಿರ್ದೇಶನದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ
ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾದ ಸೆಟ್ನಲ್ಲಿ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ಸ್ಟಂಟ್ಮ್ಯಾನ್ ಸಾವನ್ನಪ್ಪಿದ ಘಟನೆ ನಡೆದಿದೆ. ಎಝುಮಲೈ ಎಂಬ ಸ್ಟಂಟ್ಮ್ಯಾನ್ ಆ್ಯಕ್ಷನ್ ಸೀಕ್ವೆನ್ಸ್ ಚಿತ್ರೀಕರಣದ ವೇಳೆ 20 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಮಾಹಿತಿಗಳ ಪ್ರಕಾರ, ಸ್ಟಂಟ್ಮ್ಯಾನ್ ಎಝುಮಲೈ 20 ಅಡಿ ಎತ್ತರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಎದೆಯ ಬಳಿ ತೀವ್ರವಾದ ಗಾಯವಾಗಿತ್ತು. ಶ್ವಾಸಕೋಶದಲ್ಲಿ ರಕ್ತಸ್ರಾವ ಉಂಟಾಗಿತ್ತು. ಪರಿಣಾಮ ಸ್ಟಂಟ್ ಮ್ಯಾನ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ದರ್ಶನ್ 14 ದಿನಗಳ ನ್ಯಾಯಾಂಗ ಬಂಧನ ಅಂತ್ಯ.. ಅಂದುಕೊಂಡಿದ್ದ ಬೇಡಿಕೆಗಳಿಂದು ಈಡೇರುತ್ತಾ?
ಕೂಡಲೇ ಎಝುಮಲೈ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿಲ್ಲ. ಈ ಘಟನೆ ಬೆನ್ನಲ್ಲೇ ‘ಸರ್ದಾರ್ 2’ ಸಿನಿಮಾ ಚಿತ್ರೀಕರಣ ನಿಲ್ಲಿಸಲಾಗಿದೆ.
‘ಸರ್ದಾರ್ 2’ ಸಿನಿಮಾದ ಚಿತ್ರೀಕರಣ ಕಳೆದ ವಾರದಿಂದ ಪ್ರಾರಂಭವಾಗಿದೆ. ಜುಲೈ 15ರಿಂದ ಚೆನ್ನೈ ಭಾಗದಲ್ಲಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಆದರೆ ಚಿತ್ರೀಕರಣ ಪ್ರಾರಂಭವಾದ 2 ದಿನಗಳ ನಂತರ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ: ಮಳೆಯ ರಣಾರ್ಭಟ.. ಇಂದು ಈ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
‘ಸರ್ದಾರ್ 2’ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದೆ. ಇದು ‘ಸರ್ದಾರ್’ ಸಿನಿಮಾದ ಮುಂದುವರಿದ ಭಾಗವಾಗಿದೆ. ಈ ಸಿನಿಮಾವನ್ನು ಪಿ ಎಸ್ ಮಿತ್ರನ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಎಸ್ ಜೆ ಸೂರ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾ
ಚಿತ್ರೀಕರಣ ಪ್ರಾರಂಭವಾದ 2 ದಿನಗಳ ನಂತರ ಅವಘಡ
ಪಿ ಎಸ್ ಮಿತ್ರನ್ ನಿರ್ದೇಶನದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ
ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾದ ಸೆಟ್ನಲ್ಲಿ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ಸ್ಟಂಟ್ಮ್ಯಾನ್ ಸಾವನ್ನಪ್ಪಿದ ಘಟನೆ ನಡೆದಿದೆ. ಎಝುಮಲೈ ಎಂಬ ಸ್ಟಂಟ್ಮ್ಯಾನ್ ಆ್ಯಕ್ಷನ್ ಸೀಕ್ವೆನ್ಸ್ ಚಿತ್ರೀಕರಣದ ವೇಳೆ 20 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಮಾಹಿತಿಗಳ ಪ್ರಕಾರ, ಸ್ಟಂಟ್ಮ್ಯಾನ್ ಎಝುಮಲೈ 20 ಅಡಿ ಎತ್ತರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಎದೆಯ ಬಳಿ ತೀವ್ರವಾದ ಗಾಯವಾಗಿತ್ತು. ಶ್ವಾಸಕೋಶದಲ್ಲಿ ರಕ್ತಸ್ರಾವ ಉಂಟಾಗಿತ್ತು. ಪರಿಣಾಮ ಸ್ಟಂಟ್ ಮ್ಯಾನ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ದರ್ಶನ್ 14 ದಿನಗಳ ನ್ಯಾಯಾಂಗ ಬಂಧನ ಅಂತ್ಯ.. ಅಂದುಕೊಂಡಿದ್ದ ಬೇಡಿಕೆಗಳಿಂದು ಈಡೇರುತ್ತಾ?
ಕೂಡಲೇ ಎಝುಮಲೈ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿಲ್ಲ. ಈ ಘಟನೆ ಬೆನ್ನಲ್ಲೇ ‘ಸರ್ದಾರ್ 2’ ಸಿನಿಮಾ ಚಿತ್ರೀಕರಣ ನಿಲ್ಲಿಸಲಾಗಿದೆ.
‘ಸರ್ದಾರ್ 2’ ಸಿನಿಮಾದ ಚಿತ್ರೀಕರಣ ಕಳೆದ ವಾರದಿಂದ ಪ್ರಾರಂಭವಾಗಿದೆ. ಜುಲೈ 15ರಿಂದ ಚೆನ್ನೈ ಭಾಗದಲ್ಲಿ ಚಿತ್ರೀಕರಣ ನಡೆಸಲಾಗುತ್ತಿತ್ತು. ಆದರೆ ಚಿತ್ರೀಕರಣ ಪ್ರಾರಂಭವಾದ 2 ದಿನಗಳ ನಂತರ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ: ಮಳೆಯ ರಣಾರ್ಭಟ.. ಇಂದು ಈ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
‘ಸರ್ದಾರ್ 2’ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದೆ. ಇದು ‘ಸರ್ದಾರ್’ ಸಿನಿಮಾದ ಮುಂದುವರಿದ ಭಾಗವಾಗಿದೆ. ಈ ಸಿನಿಮಾವನ್ನು ಪಿ ಎಸ್ ಮಿತ್ರನ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಎಸ್ ಜೆ ಸೂರ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ